AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿನ ಕೆಲವೆಡೆ ಧಾರಾಕಾರ ಮಳೆ; ರಾಜ್ಯದ ಹವಾಮಾನ ಹೇಗಿದೆ? ಇಲ್ಲಿದೆ ವಿವರ

Bangalore Weather Update: ಬೆಂಗಳೂರಿನಲ್ಲಿ ಕೂಡ ಜೋರು ಮಳೆಯಾಗಿದೆ. ನಗರದ ಕೋರಮಂಗಲ, ಕಾರ್ಪೊರೇಷನ್, ಎಚ್​ಎಎಲ್, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ಕೆಲಹೊತ್ತಿನಿಂದ ಉತ್ತಮ ಮಳೆಯಾಗಿದೆ.

Bengaluru Rain: ಬೆಂಗಳೂರಿನ ಕೆಲವೆಡೆ ಧಾರಾಕಾರ ಮಳೆ; ರಾಜ್ಯದ ಹವಾಮಾನ ಹೇಗಿದೆ? ಇಲ್ಲಿದೆ ವಿವರ
ಕರ್ನಾಟಕ ರಾಜ್ಯ ಹವಮಾನ ವರದಿ
TV9 Web
| Edited By: |

Updated on:Aug 21, 2021 | 10:13 AM

Share

ಬೆಂಗಳೂರು: ರಾಜ್ಯ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಕಳೆದ ಕೆಲವು ಹೊತ್ತಿನಿಂದ ಧಾರಾಕಾರ ಮಳೆಯಾಗುತ್ತಿದೆ. ತೌತೆ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಮುಂತಾದ ಭಾಗಗಳಿಗೆ ತಟ್ಟಿದ್ದು, ಇದೀಗ ಬೆಂಗಳೂರಿನಲ್ಲಿ ಕೂಡ ಜೋರು ಮಳೆಯಾಗಿದೆ. ನಗರದ ಕೋರಮಂಗಲ, ಕಾರ್ಪೊರೇಷನ್, ಎಚ್​ಎಎಲ್, ಸಿಲ್ಕ್ ಬೋರ್ಡ್ ಪ್ರದೇಶಗಳಲ್ಲಿ ಕೆಲಹೊತ್ತಿನಿಂದ ಉತ್ತಮ ಮಳೆಯಾಗಿದೆ. ಇಂದಿರಾನಗರ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಭಾಗದಲ್ಲಿ ಹವಾಮಾನ ಹೀಗಿದೆ ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಇಂದು ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಸದ್ಯ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸೂಚನೆ ಕಂಡುಬಂದಿದೆ. ತೌಕ್ತೆ ಚಂಡಮಾರುತ ಪರಿಣಾಮ ಎರಡು-ಮೂರು ದಿನಗಳಿಂದ ಭಾರೀ ಮಳೆಯಾಗಿತ್ತು. ಸಮುದ್ರದ ಸಮೀಪ ಅಪಾರ ಹಾನಿಯೂ ಸಂಭವಿಸಿತ್ತು. ಇದೀಗ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ.

ಮಲೆನಾಡು ಭಾಗದಲ್ಲಿ ಮೋಡಕವಿದ ವಾತಾವರಣ ಶಿವಮೊಗ್ಗದ ಹಲವೆಡೆ ಗಾಳಿ ಹಾಗೂ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸೂಚನೆ ಲಭ್ಯವಾಗಿದೆ. ಉತ್ತರ ಕನ್ನಡದ ಯಲ್ಲಾಪುರ, ಅಂಕೋಲಾ ಭಾಗದಲ್ಲಿ ಅರ್ಧ ತಾಸಿಗೊಮ್ಮೆ ಮಳೆಯಾಗುತ್ತಿದ್ದು, ದಟ್ಟವಾದ ಮೋಡ ಕವಿದ ವಾತಾವರಣ ಕಂಡುಬಂದಿದೆ.

ಬೆಂಗಳೂರಿನಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಲೆನಾಡು ಭಾಗದಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಅರಬ್ಬೀ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಳೆದೆರೆಡು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದ್ದು, ಇಂದು ಕೂಡಾ ಮಳೆ ಮುಂದುವರೆದಿದೆ. ಇನ್ನೇನು ಮೇ ತಿಂಗಳ ಅಂತ್ಯಕ್ಕೆ ಮುಂಗಾರು ನೆರೆಯ ಕೇರಳ ರಾಜ್ಯವನ್ನು ಪ್ರವೇಶಿಸಲಿದ್ದು, ಅದಾಗಿ 2-3 ದಿನಗಳಲ್ಲಿ ಕರ್ನಾಟಕಕ್ಕೆ ಬರುವ ಸಾಧ್ಯತೆ ಇರುವುದರಿಂದ ಈ ಬಾರಿಯ ಬೇಸಿಗೆಯ ತಾಪಕ್ಕೆ ಕಡಿವಾಣ ಬಿದ್ದಂತಾಗಿದೆ.

ಇದನ್ನೂ ಓದಿ: Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

Cyclone Tauktae relief fund: ತೌಕ್ತೆ ಚಂಡಮಾರುತದಿಂದ ಮನೆ ಕುಸಿದರೆ 5 ಲಕ್ಷ, ಬೋಟ್ ದುರಂತದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Published On - 5:22 pm, Tue, 18 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?