Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಆಗಿದೆ. ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ದೇಶದ ವಿವಿಧೆಡೆಗೆ ವಿಮಾನಗಳು ತೆರಳಬೇಕಿತ್ತು. ಆದರೆ ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್​ನಲ್ಲಿ ವ್ಯತ್ಯಯವಾಗಿದೆ. ಸಂಜೆಯಿಂದ ದೇವನಹಳ್ಳಿ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. 

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ
ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 9:53 PM

ಬೆಂಗಳೂರು ಗ್ರಾಮಾಂತರ, ಅಕ್ಟೋಬರ್​ 19: ಮೂರು ದಿನದ ಹಿಂದೆ ಬೆಂಗಳೂರಿನಲ್ಲಿ ಮಳೆ (rain) ಅಬ್ಬರಿಸಿ ಬೊಬ್ಬಿರಿದಿತ್ತು. ಮಳೆ ಆರ್ಭಟಕ್ಕೆ ಬೆಂಗಳೂರಿನಲ್ಲೇ ಫಾಲ್ಸ್‌ಗಳು ಸೃಷ್ಟಿಯಾಗಿದ್ದವು. ಆ ಮಟ್ಟಿಗೆ ಅಬ್ಬರಿಸಿ ಎರಡು ದಿನ ವಿರಾಮ ನೀಡಿದ್ದ ಮಳೆ ಇಂದು ಮಧ್ನಾಹ್ನ ಮತ್ತೆ ಕಾಲಿಟ್ಟಿತ್ತು. ದೇವನಹಳ್ಳಿ ಸುತ್ತಮುತ್ತ ಸುರಿದ ಧಾರಾಕಾರ ಮಳೆಗೆ ಅರ್ಧ ಗಂಟೆಗೂ ಹೆಚ್ಚು 30ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ನಗರದಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಆಗಿದೆ. ಮಳೆ ಬರ್ತಿದ್ದಂತೆ ರಸ್ತೆಗಳು ಜಲಾವೃತಗೊಂಡಿವೆ. ಜೊತೆಗೆ ಟ್ರಾಫಿಕ್‌ ಜಾಮ್‌ ಕೂಡಾ ಉಂಟಾಗಿತ್ತು. ಈ ಮಧ್ಯೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕ್ ಆಪ್​ನಲ್ಲಿ ವಿಳಂಬ ಉಂಟಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ದೇಶದ ವಿವಿಧೆಡೆಗೆ ವಿಮಾನಗಳು ತೆರಳಬೇಕಿತ್ತು. ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್​ನಲ್ಲಿ ವ್ಯತ್ಯಯವಾಗಿದೆ. ಸಂಜೆಯಿಂದ ದೇವನಹಳ್ಳಿ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ತಾಂತ್ರಿಕ ದೋಷದಿಂದ ವಾರಣಾಸಿ-ಬೆಂಗಳೂರು ವಿಮಾನ ರದ್ದು: ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರ

ಮೈಸೂರು: ತಾಂತ್ರಿಕ ಕಾರಣದಿಂದ ವಾರಣಾಸಿ-ಬೆಂಗಳೂರು ವಿಮಾನ ರದ್ದು ಆಗಿದೆ. ಪರಿಣಾಮ ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿಕೊಂಡಿರುವಂತಹ ಘಟನೆ ನಡೆದಿದೆ.

ಅಕ್ಟೋಬರ್ 12ರಂದು ಉತ್ತರ ಭಾರತ ಪ್ರವಾಸಕ್ಕೆ ಮೈಸೂರು, ಬೆಂಗಳೂರು ಸೇರಿ ಹಲವೆಡೆಯಿಂದ ಕನ್ನಡಿಗರು ತೆರಳಿದ್ದರು. ಸಂಜೆ 6.05ಕ್ಕೆ ವಾರಣಾಸಿಯಿಂದ ಹೊರಡಬೇಕಿದ್ದ ವಿಮಾನ ಕೊನೆ ಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ಪ್ರಯಾಣ ರದ್ದು ಮಾಡಲಾಗಿದೆ. ವಾರಣಾಸಿಯಲ್ಲಿ ಮೈಸೂರಿನ 20ಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ.

ಇದನ್ನೂ ಓದಿ: ಮಾವು ರಫ್ತಿನಲ್ಲಿ ಹೊಸ ದಾಖಲೆ ಬರೆದ ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್​​

ವಿಮಾನ ರದ್ದಾಗಿದ್ದು, ವಾರಣಾಸಿ ವಿಮಾನ ನಿಲ್ದಾಣದಲ್ಲಿ ಇರಲು ಸಿಬ್ಬಂದಿ ಅವಕಾಶ ನೀಡಿಲ್ಲ. ವಾರಣಾಸಿಯಲ್ಲಿ ನಾಳೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಏರ್​ಪೋರ್ಟ್​ನಲ್ಲಿರಲು ಸಿಬ್ಬಂದಿ ಅವಕಾಶ ನೀಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ