AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಆಗಿದೆ. ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ದೇಶದ ವಿವಿಧೆಡೆಗೆ ವಿಮಾನಗಳು ತೆರಳಬೇಕಿತ್ತು. ಆದರೆ ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್​ನಲ್ಲಿ ವ್ಯತ್ಯಯವಾಗಿದೆ. ಸಂಜೆಯಿಂದ ದೇವನಹಳ್ಳಿ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ. 

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ
ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ: 30ಕ್ಕೂ ಹೆಚ್ಚು ವಿಮಾನ ಹಾರಾಟದಲ್ಲಿ ವ್ಯತ್ಯಯ
ನವೀನ್ ಕುಮಾರ್ ಟಿ.
| Edited By: |

Updated on: Oct 19, 2024 | 9:53 PM

Share

ಬೆಂಗಳೂರು ಗ್ರಾಮಾಂತರ, ಅಕ್ಟೋಬರ್​ 19: ಮೂರು ದಿನದ ಹಿಂದೆ ಬೆಂಗಳೂರಿನಲ್ಲಿ ಮಳೆ (rain) ಅಬ್ಬರಿಸಿ ಬೊಬ್ಬಿರಿದಿತ್ತು. ಮಳೆ ಆರ್ಭಟಕ್ಕೆ ಬೆಂಗಳೂರಿನಲ್ಲೇ ಫಾಲ್ಸ್‌ಗಳು ಸೃಷ್ಟಿಯಾಗಿದ್ದವು. ಆ ಮಟ್ಟಿಗೆ ಅಬ್ಬರಿಸಿ ಎರಡು ದಿನ ವಿರಾಮ ನೀಡಿದ್ದ ಮಳೆ ಇಂದು ಮಧ್ನಾಹ್ನ ಮತ್ತೆ ಕಾಲಿಟ್ಟಿತ್ತು. ದೇವನಹಳ್ಳಿ ಸುತ್ತಮುತ್ತ ಸುರಿದ ಧಾರಾಕಾರ ಮಳೆಗೆ ಅರ್ಧ ಗಂಟೆಗೂ ಹೆಚ್ಚು 30ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.

ನಗರದಲ್ಲಿ ಇಂದು ಎಲ್ಲೆಡೆ ಧಾರಾಕಾರ ಮಳೆ ಆಗಿದೆ. ಮಳೆ ಬರ್ತಿದ್ದಂತೆ ರಸ್ತೆಗಳು ಜಲಾವೃತಗೊಂಡಿವೆ. ಜೊತೆಗೆ ಟ್ರಾಫಿಕ್‌ ಜಾಮ್‌ ಕೂಡಾ ಉಂಟಾಗಿತ್ತು. ಈ ಮಧ್ಯೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಟೇಕ್ ಆಪ್​ನಲ್ಲಿ ವಿಳಂಬ ಉಂಟಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್​ ಇನ್, ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ದೆಹಲಿ, ಕೊಲ್ಕತ್ತಾ, ಮುಂಬೈ ಸೇರಿದಂತೆ ದೇಶದ ವಿವಿಧೆಡೆಗೆ ವಿಮಾನಗಳು ತೆರಳಬೇಕಿತ್ತು. ಮಳೆ ಸುರಿಯುತ್ತಿರುವುದರಿಂದ ಟೇಕಾಫ್, ಲ್ಯಾಂಡಿಂಗ್​ನಲ್ಲಿ ವ್ಯತ್ಯಯವಾಗಿದೆ. ಸಂಜೆಯಿಂದ ದೇವನಹಳ್ಳಿ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ತಾಂತ್ರಿಕ ದೋಷದಿಂದ ವಾರಣಾಸಿ-ಬೆಂಗಳೂರು ವಿಮಾನ ರದ್ದು: ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರ

ಮೈಸೂರು: ತಾಂತ್ರಿಕ ಕಾರಣದಿಂದ ವಾರಣಾಸಿ-ಬೆಂಗಳೂರು ವಿಮಾನ ರದ್ದು ಆಗಿದೆ. ಪರಿಣಾಮ ಉತ್ತರ ಪ್ರದೇಶದ ವಾರಣಾಸಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅತಂತ್ರಕ್ಕೆ ಸಿಲುಕಿಕೊಂಡಿರುವಂತಹ ಘಟನೆ ನಡೆದಿದೆ.

ಅಕ್ಟೋಬರ್ 12ರಂದು ಉತ್ತರ ಭಾರತ ಪ್ರವಾಸಕ್ಕೆ ಮೈಸೂರು, ಬೆಂಗಳೂರು ಸೇರಿ ಹಲವೆಡೆಯಿಂದ ಕನ್ನಡಿಗರು ತೆರಳಿದ್ದರು. ಸಂಜೆ 6.05ಕ್ಕೆ ವಾರಣಾಸಿಯಿಂದ ಹೊರಡಬೇಕಿದ್ದ ವಿಮಾನ ಕೊನೆ ಕ್ಷಣದಲ್ಲಿ ತಾಂತ್ರಿಕ ಕಾರಣದಿಂದ ಪ್ರಯಾಣ ರದ್ದು ಮಾಡಲಾಗಿದೆ. ವಾರಣಾಸಿಯಲ್ಲಿ ಮೈಸೂರಿನ 20ಕ್ಕೂ ಹೆಚ್ಚು ಪ್ರಯಾಣಿಕರು ಅತಂತ್ರರಾಗಿದ್ದಾರೆ.

ಇದನ್ನೂ ಓದಿ: ಮಾವು ರಫ್ತಿನಲ್ಲಿ ಹೊಸ ದಾಖಲೆ ಬರೆದ ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್​​

ವಿಮಾನ ರದ್ದಾಗಿದ್ದು, ವಾರಣಾಸಿ ವಿಮಾನ ನಿಲ್ದಾಣದಲ್ಲಿ ಇರಲು ಸಿಬ್ಬಂದಿ ಅವಕಾಶ ನೀಡಿಲ್ಲ. ವಾರಣಾಸಿಯಲ್ಲಿ ನಾಳೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಏರ್​ಪೋರ್ಟ್​ನಲ್ಲಿರಲು ಸಿಬ್ಬಂದಿ ಅವಕಾಶ ನೀಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ