AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​

ಕರ್ನಾಟಕದಾದ್ಯಂತ ಮುಂಗಾರು ಚುರುಕು ಪಡೆಯುತ್ತಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಎರಡು ದಿನ ಭಾರಿ ಮಳೆ​
ಮಳೆImage Credit source: Native Planet
ನಯನಾ ರಾಜೀವ್
|

Updated on: Aug 16, 2024 | 7:41 AM

Share

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಗಂಗಾವತಿ, ಧರ್ಮಸ್ಥಳ, ರೋಣ, ಬೆಳ್ತಂಗಡಿ, ಬಾದಾಮಿ, ತ್ಯಾಗರ್ತಿ, ಪುತ್ತೂರು, ಅಜ್ಜಂಪುರ, ಕುಡತಿನಿ, ನಾಯಕನಹಟ್ಟಿ, ಎಂಎಂಹಿಲ್ಸ್​, ಬನವಾಸಿ, ಮಾಣಿ, ಪಣಂಬೂರು, ಸಿದ್ದಾಪುರ, ಉಪ್ಪಿನಂಗಡಿ, ಕಾರ್ಕಳ, ಮಂಗಳೂರು, ಗದಗ, ಕುಷ್ಟಗಿ, ಬೆಳ್ಳಟ್ಟಿ, ಬೈಲಹೊಂಗಲ, ಹೊನ್ನಾಳಿ, ತರೀಕೆರೆ, ಗುಂಡ್ಲುಪೇಟೆ, ಶಿವಮೊಗ್ಗ, ಕಳಸ, ಕಡೂರು, ಎನ್​ಆರ್​ಪುರ, ಲಿಂಗನಮಕ್ಕಿ, ಕೊಳ್ಳೇಗಾಲ, ಚನ್ನಗಿರಿ, ಭಾಗಮಂಡಲ, ಯುಗಟಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಆರೆಂಜ್, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಬಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ