ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಗ್ರಾಮವೇ ಜಲಾವೃತ

ಬಳ್ಳಾರಿ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ರಾಹಿಂಪುರ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆ, ಹೋಟೆಲ್, ಅಂಗಡಿಗಳು ಜಲಾವೃತವಾಗಿವೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿದ್ದ ಧವಸಧಾನ್ಯಗಳು ಸಹ ನೀರುಪಾಲಾಗಿದೆ. ಹೀಗಾಗಿ ಸಾಮಾಗ್ರಿ ಹೊರತೆಗೆಯಲು ಗ್ರಾಮದ ಜನರ ಹರಸಾಹಸ ಪಡುತ್ತಿದ್ದಾರೆ. ಇಬ್ರಾಹಿಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಅಪಾರ ಪ್ರಮಾಣದ ಬೆಳೆಗಳೂ ಹಾನಿಗೊಳಗಾಗಿವೆ.

ಬಳ್ಳಾರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಗ್ರಾಮವೇ ಜಲಾವೃತ
ಸಾಧು ಶ್ರೀನಾಥ್​

Updated on: Oct 28, 2019 | 10:47 AM

ಬಳ್ಳಾರಿ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ರಾಹಿಂಪುರ ಗ್ರಾಮದಲ್ಲಿ ಭಾರೀ ಮಳೆಯಿಂದ ಮನೆ, ಹೋಟೆಲ್, ಅಂಗಡಿಗಳು ಜಲಾವೃತವಾಗಿವೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿದ್ದ ಧವಸಧಾನ್ಯಗಳು ಸಹ ನೀರುಪಾಲಾಗಿದೆ. ಹೀಗಾಗಿ ಸಾಮಾಗ್ರಿ ಹೊರತೆಗೆಯಲು ಗ್ರಾಮದ ಜನರ ಹರಸಾಹಸ ಪಡುತ್ತಿದ್ದಾರೆ.

ಇಬ್ರಾಹಿಂಪುರ ಸೇರಿದಂತೆ ಹಲವು ಗ್ರಾಮಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಕೆಲ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಅಪಾರ ಪ್ರಮಾಣದ ಬೆಳೆಗಳೂ ಹಾನಿಗೊಳಗಾಗಿವೆ.

Published On - 10:34 am, Mon, 28 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us