Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ನಿರಂತರ ಧಾರಾಕಾರ ಮಳೆಗೆ ಹಲವು ಪ್ರದೇಶಗಳಿಗೆ ಪ್ರವಾಹದ ಹೊಡೆತ ತಟ್ಟಿದೆ. ಹಲವೆಡೆ ಅವಾಂತರಗಳು ಸಂಭವಿಸಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಧಾರವಾಡ, ಬೆಳಗಾವಿ, ಕೊಡಗು,  ಜಿಲ್ಲೆಗಳಲ್ಲಿ ನಾಳೆ ಕೂಡ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಧಾರಾಕಾರ ಮಳೆಗೆ ಕರ್ನಾಟಕ ತತ್ತರ: ಜು 26, 27ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ರಜೆ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Jul 25, 2024 | 10:23 PM

ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ನಿರಂತರ ಮಳೆಗೆ (Rain) ಹಲವು ಜಲಾಶಯಗಳು ಭರ್ತಿ ಆಗಿವೆ. ಮಹಾ ಮಳೆಗೆ ಹಲವೆಡೆ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ (School Holiday) ಘೋಷಣೆ ಮಾಡಲಾಗಿದೆ. ಧಾರವಾಡ, ಬೆಳಗಾವಿ, ಕೊಡಗು, ಜಿಲ್ಲೆಗಳಲ್ಲಿ ರಜೆ ನೀಡಲಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ರಜೆ

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ನಿನ್ನೆ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದರು. ನಾಳೆಯೂ ಹೆಚ್ಚಿನ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರಿದ ಮಳೆ ಅಬ್ಬರ: ಜು.25, 26ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಕ್ಕಳ‌ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಿ  ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಹಾವೇರಿ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ

ಹಾವೇರಿ ಜಿಲ್ಲಾದ್ಯಂತ ಬಿಟ್ಟು ಬಿಡದೆ ಮಳೆ ಸುರಿಯಿತ್ತಿದೆ. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಜುಲೈ 26 ಮತ್ತು 27 ಎರಡು ದಿನ ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.

ಇದನ್ನೂ ಓದಿ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜನರ ಹುಚ್ಚಾಟ; ಮೀನು ಹಿಡಿಯಲು ಹೋಗಿ ದುಸ್ಸಾಹಸ

ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

6 ತಾಲೂಕಿನ ಶಾಲೆಗಳಿಗೆ ನಾಳೆ ರಜೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಪ್ರಕಟಿಸಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲೆ, ಕಾಲೇಜಿಗೆ ನಾಳೆ ರಜೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ 9 ತಾಲೂಕಿನ ಶಾಲೆ, ಕಾಲೇಜಿಗೆ ನಾಳೆ ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಾಟ್ಕಳ, ದಾಂಡೆಲಿ, ಜೋಯಿಡಾ, ಹಲಿಯಾಳ ಮತ್ತು ಯಲ್ಲಾಪುರ ತಾಲೂಕಿನ ಶಾಲಾ ಕಾಲೇಜ್​ಗೆ ರಜೆ ನೀಡಿದ್ದು, ಶಿರಸಿ ಮುಂಡಗೋಡ, ಸಿದ್ದಾಪುರ ತಾಲೂಕಿನ ಶಾಲಾ ಕಾಲೇಜ್​ಗಳಿಗೆ ರಜೆ ಇಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:16 pm, Thu, 25 July 24

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು