AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ: ರಾಜ್ಯದಲ್ಲಿ ಕೃಷ್ಣಾ ಸೇರಿ ಹಲವು ನದಿಗಳಲ್ಲಿ ನೆರೆ ಭೀತಿ

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ: ರಾಜ್ಯದಲ್ಲಿ ಕೃಷ್ಣಾ ಸೇರಿ ಹಲವು ನದಿಗಳಲ್ಲಿ ನೆರೆ ಭೀತಿ
ಮಳೆಯಿಂದಾಗಿ ಮಹಾರಾಷ್ಟ್ರದ ನರಸಿಂಹವಾಡಿ ದತ್ತಮಂದಿರ ಜಲಾವೃತವಾಗಿದೆ.
TV9 Web
| Edited By: |

Updated on: Jun 18, 2021 | 3:22 PM

Share

ಬೆಳಗಾವಿ: ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದೆ. ಮಹಾರಾಷ್ಟ್ರದಲ್ಲಿ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.

ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್​ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

(Heavy Rains in Maharashtra Flood Situation Grims in Belagavi District)

ಇದನ್ನೂ ಓದಿ: Rain Effect: ಕರ್ನಾಟಕದ ವಿವಿಧೆಡೆ ಭಾರೀ ಮಳೆ; ಮಳೆಗಾಲದ ಆರಂಭಿಕ ಹಂತದಲ್ಲಿಯೇ ತತ್ತರಿಸಿದ ಜನತೆ

ಇದನ್ನೂ ಓದಿ: Karnataka Dam Water Level: ಮಲೆನಾಡು ಭಾಗದಲ್ಲಿ ವಿಪರೀತ ಮಳೆ, ಜಲಾಶಯಗಳಿಗೆ ಭರಪೂರ ನೀರು; ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?