AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ವರ್ಷಧಾರೆ

ಕರ್ನಾಟಕ ಮಳೆ: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಿಂದ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮೂರು ಸಾವು ಸಂಭವಿಸಿದ್ದು, ಮಳೆ ನೀರಿನಿಂದ ಬೇಸ್‌ಮೆಂಟ್‌ನಲ್ಲಿ ಸಿಲುಕಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆ ಮುಂದಿನ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯೆಲ್ಲೋ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Karnataka Rains: ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ವರ್ಷಧಾರೆ
ಬೆಂಗಳೂರಿನ ಹೆಣ್ಣೂರಿನಲ್ಲಿ ಅಪಾರ್ಟ್​ಮೆಂಟ್​​ಗೆ ನೀರು ನುಗ್ಗಿರುವುದು
TV9 Web
| Updated By: Ganapathi Sharma|

Updated on: May 20, 2025 | 7:45 AM

Share

ಬೆಂಗಳೂರು, ಮೇ 20: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ (Karnataka Rains) ಸುರಿದಿದ್ದು, ಅನೇಕ ಅವಾಂತರಗಳು ಸಂಭವಿಸಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಾದ್ಯಂತ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ (Bengaluru Rain) ಮೂರು ಸಾವುಗಳು ಸಂಭವಿಸಿವೆ. ಸೋಮವಾರ ಬೆಳಗ್ಗೆಯಷ್ಟೇ ಬೆಂಗಳೂರಿನಲ್ಲಿ ಉದ್ಯೋಗಿಯೊಬ್ಬರನ್ನು ಬಲಿ ಪಡೆದಿದ್ದ ಮಳೆ, ರಾತ್ರಿ ಹೊತ್ತಿಗೆ ಮತ್ತಿಬ್ಬರನ್ನು ಬಲಿ ಪಡೆದಿದೆ. ಬಿಟಿಎಂ ಲೇಔಟ್​​ನ 2ನೇ ಹಂತದ ಎನ್ಎಸ್ ಪಾಳ್ಯದ ಮಧುವನ ಅಪಾರ್ಟ್​ಮೆಂಟ್ ಬೇಸ್​ಮೆಂಟ್​​​ನಲ್ಲಿ ದುರ್ಘಟನೆ ಸಂಭವಿಸಿದೆ. ಮಳೆಯಿಂದ ಬೇಸ್​ಮೆಂಟ್ ಜಲಾವೃತವಾಗಿತ್ತು. ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಕರೆಂಟ್​ ಶಾಕ್ ತಗುಲಿ ಅಪಾರ್ಟ್​ಮೆಂಟ್ ನಿವಾಸಿ ಮನೋಹರ ಕಾಮತ್ ಮತ್ತು ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 2 ಕಡೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿದ್ದಾರೆ. ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾತನಾಡಿದ ಅವರು, ಯಾರಿಗೆ ಪರಿಹಾರ ಕೊಡಬೇಕೋ ಅವರಿಗೆ ಕೊಡುತ್ತೇವೆ. ಉಳಿದುಕೊಳ್ಳಲು ಜಾಗದ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Bengaluru Rains

ಇದನ್ನೂ ಓದಿ
Image
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
Image
ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!
Image
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
Image
ಲೂಟಿಕೋರರ ಬೆಂಗಳೂರು: ಮಳೆ ಅವಾಂತರ ಬೆನ್ನಲ್ಲೇ ಹೆಚ್​ಡಿಕೆ ಟೀಕೆ

ಶಿರೂರು ದುರಂತದಲ್ಲಿ ಬದುಕುಳಿದಿದ್ದ ತಮ್ಮಣ್ಣಿ ಗೌಡ ಸಿಡಿಲಿಗೆ ಬಲಿ

ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆ ಶಿರೂರಿನಲ್ಲಿ ಭೂ ಕುಸಿತ ಉಂಟಾಗಿ, 11 ಜನ ಮೃತಪಟ್ಟಿದ್ದರು. ಆ ಈ ದುರಂತದಲ್ಲಿ ಅಂಕೋಲ ತಾಲೂಕಿನ ಉಳವರೆಯ ಈ ತಮ್ಮಣ್ಣಿಗೌಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಅಂದು ಗುಡ್ಡ ಕುಸಿತದಲ್ಲಿ ಉಳವರೆಯ ತಮ್ಮಣ್ಣಿಗೌಡರ ಮನೆಯೂ ಧ್ವಂಸವಾಗಿತ್ತು. ಅಂದು ಮನೆಯಿಂದ ಹೊರಗೆ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದ ತಮ್ಮಣ್ಣಿ ಗೌಡ, ಸೋಮವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ, ಯೆಲ್ಲೋ ಅಲರ್ಟ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಗ್ರೇಟರ್ ಅಲ್ಲ ಲೂಟಿಕೋರರ ಬೆಂಗಳೂರು: ಮಳೆ ಅವಾಂತರದ ಬೆನ್ನಲ್ಲೇ ಕುಮಾರಸ್ವಾಮಿ ಟೀಕೆ

ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ 22 ಜಿಲ್ಲೆಗಳಿಗೂ ಮೂರು ದಿನ ಮಳೆ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಮತ್ತು ನಾಡಿದ್ದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂದು ಮತ್ತು ನಾಳೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ