AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ; ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ, ಬೆಳ್ಳಂ ಬೆಳಿಗ್ಗೆ ಟ್ರಾಫಿಕ್ ಜಾಮ್

102-103ನೇ ಪಿಲ್ಲರ್ ನಡುವಿನ ಸ್ಲಾಬ್‌ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಗೊರಗುಂಟೆಪಾಳ್ಯ-ನಾಗಸಂದ್ರದ 4 ಕಿಲೋಮೀಟರ್ ದೂರದ ಫ್ಲೈಓವರ್ ಬಂದ್ ಮಾಡಲಾಗಿದ್ದು ಬೆಳ್ಳಂಬೆಳಗ್ಗೆ ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ.

102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ; ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ, ಬೆಳ್ಳಂ ಬೆಳಿಗ್ಗೆ ಟ್ರಾಫಿಕ್ ಜಾಮ್
ತುಮಕೂರು ರಸ್ತೆ ಫ್ಲೈಓವರ್ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Dec 26, 2021 | 8:33 AM

Share

ಬೆಂಗಳೂರು: 102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ ಹಿನ್ನೆಲೆಯಲ್ಲಿ ಬೆಂಗಳೂರಿನ ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಫ್ಲೈಓವರ್ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು ತುಮಕೂರು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಉಂಟಾಗಿದೆ.

102-103ನೇ ಪಿಲ್ಲರ್ ನಡುವಿನ ಸ್ಲಾಬ್‌ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಗೊರಗುಂಟೆಪಾಳ್ಯ-ನಾಗಸಂದ್ರದ 4 ಕಿಲೋಮೀಟರ್ ದೂರದ ಫ್ಲೈಓವರ್ ಬಂದ್ ಮಾಡಲಾಗಿದ್ದು ಬೆಳ್ಳಂಬೆಳಗ್ಗೆ ಸರ್ವೀಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಇನ್ನು ಡಿಸೆಂಬರ್ 31ರವರೆಗೆ ಫ್ಲೈ ಓವರ್ ಮೇಲೆ ಸಂಚಾರ ಬಂದ್ ಮಾಡಲಾಗಿದೆ.

ಹತ್ತು ವರ್ಷದ ಹಿಂದೆಯಷ್ಟೇ ಜನರಿಗೆ ಲಭ್ಯವಾದ 4ಕಿಲೋಮೀಟರ್ ಉದ್ದದ ಗೊರಗುಂಟೆಪಾಳ್ಯ-ನಾಗಸಂದ್ರ, ಎಲಿವೇಟೆಡ್ ಫ್ಲೈಓವರ್ ಈಗ ಒಂದು ವಾರ ಬಂದ್ ಆಗಲಿದೆ. ಫ್ಲೈ ಓವರ್​ಗೆ ಅಳವಡಿಸಿರುವ ಕೇಬಲ್ ದುರಸ್ತಿ ಹಿನ್ನಲೆ ದುರಸ್ತಿ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೆಕ್ನಿಕಲ್ ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಫ್ಲೈ ಓವರ್ ದುರಸ್ತಿ ಹಿನ್ನಲೆ ಎರಡು ಬದಿ ಸಂಚಾರ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರವರೆಗೆ ಫ್ಲೈ ಓವರ್ ಬಂದ್ ಆಗಿರಲಿದೆ. ಫ್ಲೈ ಓವರ್ ಬಂದ್ ಹಾಗೂ ಮಾರ್ಗ ಬದಲಾವಣೆ ಬಗ್ಗೆ ಸಂಚಾರಿ ಪೊಲೀಸರು ಪ್ರಕಟಣೆ‌ ಹೊರಡಿಸಿದ್ದಾರೆ.

Tumkur road flyover traffic jam 1

ಪ್ರಕಟಣೆ‌

ಸಂಚಾರ ದಟ್ಟಣ ನಿಯಂತ್ರಿಸಲು ಅನುಸರಿಸಬೇಕು ಬದಲಿ ಮಾರ್ಗಗಳ ವ್ಯವಸ್ಥೆ ಹಾಸನ -ನೆಲಮಂಗಲ -ಬೆಂಗಳೂರು ಸಂಚಾರಿಸುವವರು ಮಾರ್ಗ ಬದಲಿಸಿದರೆ ತಪ್ಪುತ್ತೆ ಭಾರಿ ಟ್ರಾಫಿಕ್‌ ಜಾಮ್. ಹಾಸನ -ಕುಣಿಗಲ್ -ಕೆ‌ಎಂ ರಸ್ತೆ -ಮಾಗಡಿ -ತಾವರೆಕೆರೆ -ಬೆಂಗಳೂರು ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಔಟರ್ ರಿಂಗ್ ರೋಡ್ ಮೂಲಕ ಬೆಂಗಳೂರಿನ ವಿವಿದೆಡೆಗೆ ಸಂಚಾರ ಮಾಡಬಹುದು. ವೀಕೆಂಡ್ ಆಗಿರೋದ್ರಿಂದ‌ ವಾಹನ ಸವಾರರು ಮಾರ್ಗ ಬದಲಾವಣೆ ಮಾಡೋದೆ ಒಳ್ಳೆದು. ಇಲ್ಲದಿದ್ದರೆ ಗಂಟೆಗಟ್ಟಲೆ ಹೆದ್ದಾರಿಯಲ್ಲಿ ಕಾಯುವ ಪರಿಸ್ಥಿತಿ ಬರುತ್ತದೆ.

ತುಮಕೂರು ಮಾರ್ಗವಾಗಿ ಬರುವ ವಾಹನಗಳು ನೈಸ್ ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸಿದರೆ ಉತ್ತಮ. ನೆಲಮಂಗಲ -ಮಾದವಾರ -ನೈಸ್ ರಸ್ತೆ ಮೂಲಕ‌ ಬೆಂಗಳೂರಿನ ವಿವಿಧ ರಸ್ತೆಗಳಿಂದ ಸಂಪರ್ಕ ಪಡೆಯಬಹುದು. ಬದಲಿ ಮಾರ್ಗ ಅನುಸರಿಸುವ ಮೂಲಕ ಸಂಚಾರ ದಟ್ಟಣೆಯಿಂದ ದೂರ ಇರಬಹುದು. ಗಂಟೆ ಗಟ್ಟಲೆ‌ ಟ್ರಾಫಿಕ್ ಜಾಮ್ನಲ್ಲಿ ಸಿಲುಕುವ ಬದಲಿಗೆ ಮಾರ್ಗ ಬದಲಾವಣೆ ಅನಿವಾರ್ಯ.

ಇದನ್ನೂ ಓದಿ: Confession : ಅಭಿಜ್ಞಾನ ; ಪ್ರಗತಿ ಮತ್ತು ಪರಿಪೂರ್ಣತೆಗಳಿಗೆ ಅನಂತತೆಯಲ್ಲಿ ಯಾವ ಅರ್ಥವೂ ಇಲ್ಲ ದಿಕ್ಕೂ ಇಲ್ಲ

Published On - 8:21 am, Sun, 26 December 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್