AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಸೇಫ್ ಸಿಟಿ ಟೆಂಡರ್​ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ಹೇಮಂತ್ ನಿಂಬಾಳ್ಕರ್

ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಕೇಸ್​ಗೆ ಸಂಬಂಧಿಸಿ ಇಂದು ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಐಜಿಪಿ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ನಿರ್ಭಯಾ ಸೇಫ್ ಸಿಟಿ ಟೆಂಡರ್​ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ಹೇಮಂತ್ ನಿಂಬಾಳ್ಕರ್
ಐಜಿಪಿ ಹೇಮಂತ್ ನಿಂಬಾಳ್ಕರ್
ಆಯೇಷಾ ಬಾನು
|

Updated on:Dec 27, 2020 | 1:28 PM

Share

ಬೆಂಗಳೂರು:619 ಕೋಟಿ ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಕೇಸ್​ಗೆ ಸಂಬಂಧಿಸಿ ಇಂದು ಬೆಂಗಳೂರು ನಗರದಲ್ಲಿ ಪೊಲೀಸ್ ಆಡಳಿತ ವಿಭಾಗದ ಐಜಿಪಿ ಹೇಮಂತ್ ನಿಂಬಾಳ್ಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಮೂಲಕ ಐಪಿಎಸ್ ಅಧಿಕಾರಿ ಡಿ.ರೂಪಾ ಮಾಡಿದ್ದ ಆರೋಪಗಳಿಗೆ ಉತ್ತರಿಸಿದ್ದಾರೆ.

ಬೆಂಗಳೂರಿನಲ್ಲಿ ನಿರ್ಭಯಾ ಹೆಸರಿನ ಸೇಫ್ ಸಿಟಿ ಪ್ರಾಜೆಕ್ಟ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಊಹೆಗಳು ಹರಿದಾಡ್ತಿವೆ. ಟೆಂಡರ್ ಪ್ರಕ್ರಿಯೆ ಅನ್ ಫೇರ್ ಎಂದು ಟೀಕಿಸುತ್ತಿದ್ದಾರೆ. ಆದರೆ ಸರ್ಕಾರವು ಸ್ಟೇಟ್ ಲೆವೆಲ್ ಅಪೆಕ್ಸ್ ಕಮಿಟಿ(ಉನ್ನತ ಸಮಿತಿ), ಟೆಂಡರ್ ಇನ್​ವೈಟಿಂಗ್ ಕಮಿಟಿ(ಟೆಂಡರ್ ಆಹ್ವಾನ), ಟೆಂಡರ್ ಸ್ಕ್ರೂಟನಿಂಗ್ ಕಮಿಟಿ(ಟೆಂಡರ್ ದಾಖಲೆಗಳ ಪರಾಮರ್ಶೆ) 3 ಹಂತಗಳಲ್ಲಿ ಕಮಿಟಿ ಸಮಿತಿಗಳನ್ನು ರಚಿಸಿತ್ತು.

ಮಹಿಳೆಯರ ಸುರಕ್ಷಿತೆಗಾಗಿ ಈ ಟೆಂಡರ್ ಕರೆಯಲಾಗಿತ್ತು. ನಾನು ಬರೆದ ಪತ್ರದ ಬಳೀಕ ಅನೇಕ ಊಹೆಗಳು ಉದ್ಭವಿಸಿವೆ. ಮೊದಲೆನೆಯದಾಗಿ BEL ಡಿಸ್ ಕ್ವಾಲಿಫೈ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ BEL ಬಿಡ್ಡಿಂಗ್‌ನಲ್ಲಿ ಭಾಗಿಯಾಗಿರಲಿಲ್ಲ. ಕಾಲ್ ಒನ್‌ನಲ್ಲಿ ಬಿಇಎಲ್‌ ಟೆಂಡರ್ ಹಾಕಿರಲಿಲ್ಲ. ಬಿಡ್ಡಿಂಗ್‌ನಲ್ಲಿ ಮೂರು ಕಂಪನಿಗಳು ಭಾಗಿಯಾಗಿದ್ದವು. ಆ ಕಂಪನಿಗಳು ಮೊದಲ ಹಂತದಲ್ಲಿ ಕ್ವಾಲಿಫೈ ಆಗಿರಲಿಲ್ಲ. ಬಳಿಕ ಜೂನ್​ 20ರಂದು 3 ಕಂಪನಿಗಳು ಕ್ವಾಲಿಫೈ ಆಗಿದ್ದವು ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದರು.

ಇನ್ನು 2ನೇ ಕಾಲ್‌ನಲ್ಲಿ L&T, ಮ್ಯಾಟ್ರಿಕ್ಸ್, BEL ಮೂರು ಕಂಪನಿಗಳು ಕ್ವಾಲಿಫೈ ಆದವು. ಆದರೆ ಚೀನಾ ವಸ್ತುಗಳು ಬಳಸದಂತೆ ಕೇಂದ್ರ ಸರ್ಕಾರ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಟೆಂಡರ್ ಸ್ಕ್ರೂಟನಿಂಗ್ ಕಮಿಟಿ ಹಾಗೂ ಅಪೆಕ್ಸ್ ಕಮಿಟಿ ತೀರ್ಮಾನಕ್ಕೆ ಬಂದು 2ನೇ ಕಾಲ್‌ ಕ್ಯಾನ್ಸಲ್ ಮಾಡಿದವು. ಬಳಿಕ ನವೆಂಬರ್‌ 11ರಲ್ಲಿ ಮತ್ತೆ ಮೂರನೇ ಬಿಡ್ಡಿಂಗ್ ಕರೆಯಲಾಗಿದ್ದು ಜನವರಿ 8ರವರೆಗೆ ಇದು ಚಾಲ್ತಿಯಲ್ಲಿರುತ್ತದೆ. ಯಾರು ಬೇಕಾದರೂ ಬಿಡ್ ಮಾಡಬಹುದಾಗಿದೆ. ನಾನು ಬರೆದ ಲೆಟರ್ ಪರಿಗಣಿಸಿದ ಸಮಿತಿ ರಚನೆಯಾಗಿರುವ ಹಿನ್ನೆಲೆ ನಾನು ಮಾತಾಡಲ್ಲ ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ತಿಳಿಸಿದ್ರು.

ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇಲ್ಲ. ಇಲ್ಲಿ ಯಾವುದೇ ಪಕ್ಷಪಾತ ಪ್ರಕ್ರಿಯೆ ಇಲ್ಲ, ಎಲ್ಲವೂ ಪಾರದರ್ಶಕ. ನನ್ನ ಮೇಲಿನ ಆರೋಪ ವಿಚಾರ ನ್ಯಾಯಾಲಯದಲ್ಲಿ ಇದೆ. ಹೀಗಾಗಿ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಮಂತ್ ನಿಂಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ.

ನಿರ್ಭಯಾ ನಿಧಿ ಮಹಿಳಾ ಸುರಕ್ಷತಾ ಯೋಜನೆ: ಗೃಹ ಕಾರ್ಯದರ್ಶಿ ರೂಪಾ ಅವರಿಂದ ದಾಖಲೆ ಬಿಡುಗಡೆ, ವಿವಾದಕ್ಕೆ ಹೊಸ ಆಯಾಮ

Published On - 12:01 pm, Sun, 27 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ