AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಗೃಹ ಕಾರ್ಯದರ್ಶಿ ಡಿ.ರೂಪಾ ಗಂಭೀರ ಆರೋಪ

ಈ ಟೆಂಡರ್​ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಗೃಹ ಕಾರ್ಯದರ್ಶಿ ಡಿ.ರೂಪಾ ಗಂಭೀರ ಆರೋಪ
ರೂಪಾ ಮೌದ್ಗೀಲ್
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 4:33 PM

Share

ಬೆಂಗಳೂರು: ‘ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಗೃಹ ಕಾರ್ಯದರ್ಶಿ ಡಿ.ರೂಪಾ ಆರೋಪಿಸಿದ್ದಾರೆ. ನಿರ್ಭಯಾ ಟೆಂಡರ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ರೂಪಾ ಅವರು ಬರೆದಿದ್ದ ಪತ್ರಕ್ಕೆ ಉತ್ತರಿಸಲೆಂದು ಹೇಮಂತ್ ನಿಂಬಾಳ್ಕರ್ ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದರು. ಹೇಮಂತ್​ ನಿಂಬಾಳ್ಕರ್​ ಈ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿರುವ ವಿಚಾರಗಳನ್ನು ರೂಪಾ ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಗೃಹ ಕಾರ್ಯದರ್ಶಿ​ ಡಿ.ರೂಪಾ, 2 ಬಾರಿ ಟೆಂಡರ್ ರದ್ದತಿಗೆ ಕಾರಣವಾದ ದೂರಿಗೆ ನಿಂಬಾಳ್ಕರ್ ಉತ್ತರಿಸಿಲ್ಲ. ಬೃಹತ್​ ಮೊತ್ತದ ಟೆಂಡರ್​ನಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಟೆಂಡರ್​ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

₹ 4500 ಕೋಟಿ ಐಎಂಎ ಕಂಪನಿ ಹಗರಣದಲ್ಲಿ ಹೇಮಂತ್ ನಿಂಬಾಳ್ಕರ್ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ರೂಪಾ ನೆನಪಿಸಿಕೊಂಡಿದ್ದಾರೆ.  ನಿರ್ಭಯಾ ಸೇಫ್​ ಸಿಟಿ ಯೋಜನೆಯ ಇಡೀ ಪ್ರಕ್ರಿಯೆಯಲ್ಲಿ ಹೇಮಂತ್​ ನಿಂಬಾಳ್ಕರ್​​ ವಹಿಸಿದ ಪಾತ್ರದ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದ ಹೇಮಂತ್ ನಿಂಬಾಳ್ಕರ್, ₹ 619 ಕೋಟಿ ಅಂದಾಜಿನ ನಿರ್ಭಯಾ ಸೇಫ್ ಸಿಟಿ ಟೆಂಡರ್ ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇಲ್ಲ ಎಂದು ಹೇಳಿದ್ದರು.

ಹೇಮಂತ್​ ನಿಂಬಾಳ್ಕರ್​ ಹೇಳಿದ್ದೇನು?

ಮಹಿಳೆಯರ ಸುರಕ್ಷಿತೆಗಾಗಿ ಈ ಟೆಂಡರ್ ಕರೆಯಲಾಗಿತ್ತು. ನಾನು ಬರೆದ ಪತ್ರದ ಬಳೀಕ ಅನೇಕ ಊಹೆಗಳು ಉದ್ಭವಿಸಿವೆ. ಮೊದಲೆನೆಯದಾಗಿ BEL ಡಿಸ್ ಕ್ವಾಲಿಫೈ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ BEL ಬಿಡ್ಡಿಂಗ್‌ನಲ್ಲಿ ಭಾಗಿಯಾಗಿರಲಿಲ್ಲ. ಕಾಲ್ ಒನ್‌ನಲ್ಲಿ ಬಿಇಎಲ್‌ ಟೆಂಡರ್ ಹಾಕಿರಲಿಲ್ಲ. ಬಿಡ್ಡಿಂಗ್‌ನಲ್ಲಿ ಮೂರು ಕಂಪನಿಗಳು ಭಾಗಿಯಾಗಿದ್ದವು. ಆ ಕಂಪನಿಗಳು ಮೊದಲ ಹಂತದಲ್ಲಿ ಕ್ವಾಲಿಫೈ ಆಗಿರಲಿಲ್ಲ. ಬಳಿಕ ಜೂನ್​ 20ರಂದು 3 ಕಂಪನಿಗಳು ಕ್ವಾಲಿಫೈ ಆಗಿದ್ದವು ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದ್ದರು.

ನಿರ್ಭಯಾ ಸೇಫ್ ಸಿಟಿ ಟೆಂಡರ್​ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ಹೇಮಂತ್ ನಿಂಬಾಳ್ಕರ್

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?