AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಗೃಹ ಕಾರ್ಯದರ್ಶಿ ಡಿ.ರೂಪಾ ಗಂಭೀರ ಆರೋಪ

ಈ ಟೆಂಡರ್​ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಗೃಹ ಕಾರ್ಯದರ್ಶಿ ಡಿ.ರೂಪಾ ಗಂಭೀರ ಆರೋಪ
ರೂಪಾ ಮೌದ್ಗೀಲ್
ರಾಜೇಶ್ ದುಗ್ಗುಮನೆ
| Edited By: |

Updated on: Dec 27, 2020 | 4:33 PM

Share

ಬೆಂಗಳೂರು: ‘ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ’ ಎಂದು ಗೃಹ ಕಾರ್ಯದರ್ಶಿ ಡಿ.ರೂಪಾ ಆರೋಪಿಸಿದ್ದಾರೆ. ನಿರ್ಭಯಾ ಟೆಂಡರ್​ನಲ್ಲಿ ಅವ್ಯವಹಾರ ನಡೆದಿದೆ ಎಂದು ರೂಪಾ ಅವರು ಬರೆದಿದ್ದ ಪತ್ರಕ್ಕೆ ಉತ್ತರಿಸಲೆಂದು ಹೇಮಂತ್ ನಿಂಬಾಳ್ಕರ್ ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದರು. ಹೇಮಂತ್​ ನಿಂಬಾಳ್ಕರ್​ ಈ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿರುವ ವಿಚಾರಗಳನ್ನು ರೂಪಾ ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಗೃಹ ಕಾರ್ಯದರ್ಶಿ​ ಡಿ.ರೂಪಾ, 2 ಬಾರಿ ಟೆಂಡರ್ ರದ್ದತಿಗೆ ಕಾರಣವಾದ ದೂರಿಗೆ ನಿಂಬಾಳ್ಕರ್ ಉತ್ತರಿಸಿಲ್ಲ. ಬೃಹತ್​ ಮೊತ್ತದ ಟೆಂಡರ್​ನಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಈ ಟೆಂಡರ್​ ಪ್ರಕ್ರಿಯೆಯಲ್ಲಿಯೇ ಸಾಕಷ್ಟು ಅಕ್ರಮಗಳು ನಡೆದಿದೆ. ಸರ್ಕಾರಕ್ಕೆ ಈ ಬಗ್ಗೆ ತಪ್ಪು ಮಾಹಿತಿ ಸಲ್ಲಿಕೆಯಾಗಿದೆ. ಹೇಮಂತ್​ ನಿಂಬಾಳ್ಕರ್​​ ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

₹ 4500 ಕೋಟಿ ಐಎಂಎ ಕಂಪನಿ ಹಗರಣದಲ್ಲಿ ಹೇಮಂತ್ ನಿಂಬಾಳ್ಕರ್ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ ಎಂದು ರೂಪಾ ನೆನಪಿಸಿಕೊಂಡಿದ್ದಾರೆ.  ನಿರ್ಭಯಾ ಸೇಫ್​ ಸಿಟಿ ಯೋಜನೆಯ ಇಡೀ ಪ್ರಕ್ರಿಯೆಯಲ್ಲಿ ಹೇಮಂತ್​ ನಿಂಬಾಳ್ಕರ್​​ ವಹಿಸಿದ ಪಾತ್ರದ ಬಗ್ಗೆ ತನಿಖೆ ನಡೆಸಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಇಂದು ಮುಂಜಾನೆ ಸುದ್ದಿಗೋಷ್ಠಿ ನಡೆಸಿದ್ದ ಹೇಮಂತ್ ನಿಂಬಾಳ್ಕರ್, ₹ 619 ಕೋಟಿ ಅಂದಾಜಿನ ನಿರ್ಭಯಾ ಸೇಫ್ ಸಿಟಿ ಟೆಂಡರ್ ಬಿಡ್ಡಿಂಗ್ ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಇದರಲ್ಲಿ ಗೊಂದಲ ಇಲ್ಲ ಎಂದು ಹೇಳಿದ್ದರು.

ಹೇಮಂತ್​ ನಿಂಬಾಳ್ಕರ್​ ಹೇಳಿದ್ದೇನು?

ಮಹಿಳೆಯರ ಸುರಕ್ಷಿತೆಗಾಗಿ ಈ ಟೆಂಡರ್ ಕರೆಯಲಾಗಿತ್ತು. ನಾನು ಬರೆದ ಪತ್ರದ ಬಳೀಕ ಅನೇಕ ಊಹೆಗಳು ಉದ್ಭವಿಸಿವೆ. ಮೊದಲೆನೆಯದಾಗಿ BEL ಡಿಸ್ ಕ್ವಾಲಿಫೈ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ BEL ಬಿಡ್ಡಿಂಗ್‌ನಲ್ಲಿ ಭಾಗಿಯಾಗಿರಲಿಲ್ಲ. ಕಾಲ್ ಒನ್‌ನಲ್ಲಿ ಬಿಇಎಲ್‌ ಟೆಂಡರ್ ಹಾಕಿರಲಿಲ್ಲ. ಬಿಡ್ಡಿಂಗ್‌ನಲ್ಲಿ ಮೂರು ಕಂಪನಿಗಳು ಭಾಗಿಯಾಗಿದ್ದವು. ಆ ಕಂಪನಿಗಳು ಮೊದಲ ಹಂತದಲ್ಲಿ ಕ್ವಾಲಿಫೈ ಆಗಿರಲಿಲ್ಲ. ಬಳಿಕ ಜೂನ್​ 20ರಂದು 3 ಕಂಪನಿಗಳು ಕ್ವಾಲಿಫೈ ಆಗಿದ್ದವು ಎಂದು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಸ್ಪಷ್ಟನೆ ನೀಡಿದ್ದರು.

ನಿರ್ಭಯಾ ಸೇಫ್ ಸಿಟಿ ಟೆಂಡರ್​ಗೆ ಬಿಇಎಲ್ ಬಿಡ್ ಮಾಡಿರಲಿಲ್ಲ: ಹೇಮಂತ್ ನಿಂಬಾಳ್ಕರ್

Follow Us
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!