Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿನಾಡ ಜನರ ಸಂಕಷ್ಟಕ್ಕೆ ಮಿಡಿದ ಸಾಗರದಾಚೆ ಕನ್ನಡಿಗರು; ದುಬೈನಿಂದ ಕರ್ನಾಟಕಕ್ಕೆ ಹರಿದು ಬಂತು ಸಹಾಯ ಹಸ್ತ

ಹೆಮ್ಮೆಯ ಕನ್ನಡಿಗರು ಎಂಬ ಕನ್ನಡ ಸಂಘವು ಕಳೆದ ಹಲವು ದಿನಗಳಿಂದ ಆಹಾರ ಪೊಟ್ಟಣಗಳು ಮತ್ತು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಒಂದು ತಿಂಗಳಿಗಾಗುವಷ್ಟು ಆಹಾರ ಪದಾರ್ಥದ ರೇಷನ್ ಕಿಟ್ ವಿತರಿಸುತ್ತಿದೆ. ಈಗಾಗಲೇ ಇವರು ಬೆಂಗಳೂರಿನ ಮತ್ತು ಮೈಸೂರಿನ ಹಲವು ಭಾಗಗಳಲ್ಲಿ ಊರಿನಲ್ಲಿರುವ ತಮ್ಮ ಸ್ನೇಹಿತರು ಮತ್ತು ಸಂಘ-ಸಂಸ್ಥೆಗಳ ಮೂಲಕ ಹಸಿದವರಿಗೆ ಊಟ ತಲುಪಿಸುತ್ತಿದ್ದಾರೆ.

ತಾಯಿನಾಡ ಜನರ ಸಂಕಷ್ಟಕ್ಕೆ ಮಿಡಿದ ಸಾಗರದಾಚೆ ಕನ್ನಡಿಗರು; ದುಬೈನಿಂದ ಕರ್ನಾಟಕಕ್ಕೆ ಹರಿದು ಬಂತು ಸಹಾಯ ಹಸ್ತ
ಹೆಮ್ಮೆಯ ಕನ್ನಡಿಗರು ತಂಡದಿಂದ ನೆರವು
Follow us
preethi shettigar
|

Updated on: May 16, 2021 | 5:25 PM

ಬೆಂಗಳೂರು: ಕೊರೊನಾ ಎರಡನೇ ಅಲೆ ಭಾರತದಲ್ಲಿ ಬಹಳ ವೇಗದಲ್ಲಿ ಮತ್ತು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಕೊವಿಡ್ ಕಾರಣ ಸಾವು-ನೋವುಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಕರ್ನಾಟಕವನ್ನು ಲಾಕ್​ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಗೂಲಿ ಜನರು ಮತ್ತು ನಿರ್ಗದಿಕರು ಸೇರಿ ಹಲವು ಬಡವರು ಜೀವನ ಸಾಗಿಸುವುದೇ  ಕಷ್ಟವಾಗಿದೆ. ಕೆಲವರಿಗೆ ಒಂದೊತ್ತಿನ ಊಟಕ್ಕೆ ಸಹ ಇಲ್ಲದ ಪರಿಸ್ಥಿತಿ ಇದ್ದು, ಇಂತಹರವರ ನೆರವಿಗೆ ಈಗ ದುಬೈನ ಕನ್ನಡಿಗರು ನಿಂತಿದ್ದಾರೆ.

ದುಬೈನಲ್ಲಿ ಕಾರ್ಯಾಚರಿಸುತ್ತಿರುವ  ಹೆಮ್ಮೆಯ ಕನ್ನಡಿಗರು ಎಂಬ ಕನ್ನಡ ಸಂಘವು ಕಳೆದ ಹಲವು ದಿನಗಳಿಂದ ಆಹಾರ ಪೊಟ್ಟಣಗಳು ಮತ್ತು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಒಂದು ತಿಂಗಳಿಗಾಗುವಷ್ಟು ಆಹಾರ ಪದಾರ್ಥದ ರೇಷನ್ ಕಿಟ್ ವಿತರಿಸುತ್ತಿದೆ. ಈಗಾಗಲೇ ಇವರು ಬೆಂಗಳೂರಿನ ಮತ್ತು ಮೈಸೂರಿನ ಹಲವು ಭಾಗಗಳಲ್ಲಿ ಊರಿನಲ್ಲಿರುವ ತಮ್ಮ ಸ್ನೇಹಿತರು ಮತ್ತು ಸಂಘ-ಸಂಸ್ಥೆಗಳ ಮೂಲಕ ಹಸಿದವರಿಗೆ ಊಟ ತಲುಪಿಸುತ್ತಿದ್ದಾರೆ.

ಹೆಮ್ಮೆಯ ಕನ್ನಡಿಗರು ತಂಡದ ಸದಸ್ಯರಾದ ಹಾದಿಯ ಮಂಡ್ಯ ಅವರ ಮಗನಾದ ಅಸಿಫ್ ಅವರ ಮುಂದಾಳತ್ವದಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಆಹಾರ ಕಿಟ್ ವಿತರಣೆ ನಡೆಯಿತು. ಹೆಮ್ಮೆಯ ಕನ್ನಡಿಗರು ತಂಡದ ಅಧ್ಯಕ್ಷರಾದ ಶ್ರೀಮತಿ ಮಮತಾ, ಮೈಸೂರು ಸಂಚಾಲಕರಾದ ಸುದೀಪ್ ದಾವಣಗೆರೆ, ರಫೀಕಲಿ ಕೊಡಗು, ಕಾರ್ಯದರ್ಶಿ ಸೆಂತಿಲ್ ಬೆಂಗಳೂರು, ಸಮಿತಿ ಸದಸ್ಯರುಗಳಾದ ವಿಷ್ಣುಮೂರ್ತಿ ಮೈಸೂರು, ಶ್ರೀಮತಿ ಮಮತಾ ಶಾರ್ಜಾ, ಶ್ರೀಮತಿ ಪಲ್ಲವಿ ದಾವಣಗೆರೆ, ಶ್ರೀಮತಿ ಹಾದಿಯ ಮಂಡ್ಯ, ಡಾ. ಸವಿತಾ ಮೈಸೂರು, ಶ್ರೀಮತಿ ಅನಿತಾ ಬೆಂಗಳೂರು, ಶಂಕರ್ ಬೆಳಗಾವಿ, ಮೊಯಿನುದ್ದೀನ್ ಹುಬ್ಬಳ್ಳಿ ಹಾಗೂ ಉಪಸಮಿತಿ ಸದಸ್ಯರುಗಳ ಪರಿಶ್ರಮದಿಂದ ದುಬೈಯಲ್ಲಿರುವ ಕನ್ನಡಿಗ ದಾನಿಗಳ ಸಹಾಯದಿಂದ ಈ ಕಾರ್ಯ ಮಾಡಲು ಸಾಧ್ಯವಾಯಿತು.

ಕಳೆದ ವರ್ಷ ದುಬೈಯಲ್ಲಿ ಲಾಕ್​ಡೌನ್ ಸಮಯದಲ್ಲಿ 19ಲಕ್ಷ ರೂಪಾಯಿಗಳ ಆಹಾರ ಕಿಟ್ ವಿತರಿಸಿದ್ದಲ್ಲದೆ, ಸಂಕಷ್ಟದಲ್ಲಿದ್ದವರಿಗೆ ತಾಯಿನಾಡಿಗೆ ಮರಳಲು ಉಚಿತ ವಿಮಾನ ಟಿಕೆಟ್, ಉಚಿತ ಚಿಕಿತ್ಸೆ ಮುಂತಾದ ಕಾರ್ಯಗಳನ್ನು ಮಾಡಿದ್ದರು. ಅದನ್ನೆ ಮುಂದು ವರಿಸಿದ ಈ ತಂಡ ಈ ಬಾರಿ ಆಹಾರ ಕಿಟ್​ ನೀಡಿದೆ. ಇನ್ನು ಮುಂದೆ ತಾಯಿನಾಡಿಗೆ ದುಬೈಯಿಂದ ಆಕ್ಸಿಜನ್ ತಲುಪಿಸುವ ಪ್ರಯತ್ನದಲ್ಲಿದ್ದಾರೆ ಎನ್ನುವುದು ಸಂತೋಷದ ವಿಚಾರ.

ಇದನ್ನೂ ಓದಿ:

ಬಿಗ್​ ಬಾಸ್​ನಿಂದ ಹೊರಬಂದು ನುಡಿದಂತೆ ನಡೆದ ಶುಭಾ ಪೂಂಜಾ; ಬಡವರಿಗೆ ಫುಡ್​ ಕಿಟ್​ ನೀಡಿದ ನಟಿ

ಬಡವರಿಗೆ ಫುಡ್ ಕಿಟ್ ವಿತರಣೆ; ಮಾನವೀಯತೆ ಮೆರೆದ ಹೋಂ ಪ್ರಾಡಕ್ಟ್ ಮಾರಾಟ ಮಾಡುವ ಉತ್ತರ ಕನ್ನಡದ ಮಹಿಳೆ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್