AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ, ಲಾಕ್​ಡೌನ್​ ಉಲ್ಲಂಘಿಸಿದ್ದಕ್ಕೆ ಕಾರಣ ಹೇಳಿದ ಗದಗ ವ್ಯಕ್ತಿ; ವಿಡಿಯೋ ವೈರಲ್
‘ನನ್ನ ಕೋಳಿಗೆ ಮಲ ಬದ್ಧತೆ ಸಮಸ್ಯೆ’ ಚಿಕಿತ್ಸೆಗೆಂದು ಹೊರಬಂದೆ!
TV9 Web
| Edited By: |

Updated on: Jun 04, 2021 | 10:27 AM

Share

ಗದಗ: ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಲಾಕ್​ಡೌನ್​ ಜಾರಿಯಲ್ಲಿದ್ದು ಸಾಂಕ್ರಾಮಿಕ ಹರಡುವಿಕೆಯ ನಿಯಂತ್ರಣಕ್ಕಾಗಿ ಹೋರಾಟವೇ ನಡೆಯುತ್ತಿದೆ. ಹೀಗಾಗಿ ಅನಗತ್ಯವಾಗಿ ಜನರು ಹೊರಬಾರದಂತೆ ಪೊಲೀಸರು ಕಟ್ಟೆಚ್ಚರದಿಂದ ಕಾಯುತ್ತಿದ್ದಾರೆ. ಹೀಗಿದ್ದರೂ ಸಹ ಜನರು ಕೆಲವು ಕಾರಣಗಳನ್ನು ಒಡ್ಡುತ್ತಾ ಹೊರಗಡೆ ಓಡಾಡುತ್ತಿರುವ ಘಟನೆಗಳು ಕಿವಿಗೆ ಬೀಳುತ್ತಲೇ ಇದೆ. ಇಲ್ಲೋರ್ವ ವ್ಯಕ್ತಿ ಮನೆಯಿಂದ ಹೊರಬರಲು ಪೊಲೀಸರಿಗೆ ಹೇಳಿದ ಕಾರಣ ಕೇಳಿ ಪೊಲೀಸರು ಮುಸಿ-ಮುಸಿ ನಕ್ಕಿದ್ದಾರೆ. ಈತನು ಹೇಳಿದ ಕಾರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ಲಾಕ್​ಡೌನ್​ ಸಮಯದಲ್ಲಿ ಮನೆಯಿಂದ ಹೊರಟಿದ್ದ ಗದಗ ಜಿಲ್ಲೆ ವ್ಯಕ್ತಿಯೊಬ್ಬರು, ನನ್ನ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡುತ್ತಿದ್ದೆ. ಹಾಗಾಗಿ ಚಿಕಿತ್ಸೆ ಕೊಡಲು ಪಶುವೈದ್ಯರ ಬಳಿ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಹಾಗೆಯೇ ಬುಟ್ಟಿಯಲ್ಲಿದ್ದ ಕೋಳಿಯನ್ನು ಹೊರ ತೆಗೆದು ನೋಡಿ ಎಂದು ತೋರಿಸಿದ್ದಾರೆ. ಕಾರಣ ಕೇಳಿ ನಕ್ಕ ಪೊಲೀಸರು, ಆತನಿಗೆ ಬುದ್ಧಿವಾದ ಹೇಳಿ ಹಿಂತಿರುಗಿ ಮನೆಗೆ ಕಳುಹಿಸಿದ್ದಾರೆ.

30 ಸೆಕೆಂಡುಗಳ ವಿಡಿಯೋ ಕ್ಲಿಪ್​ಅನ್ನು ಮೇ 29ನೇ ತಾರೀಕಿನಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ವಿಡಿಯೋ ವೈರಲ್​ ಆಗುತ್ತಿದ್ದಂತೆಯೇ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ವ್ಯಕ್ತಿಯ ಕಾರಣ ಕೇಳಿ ಮೆಚ್ಚುಗೆ ವ್ಯಕ್ತಿಪಡಿಸಿದ್ದಾರೆ, ಪ್ರಾಣಿ ಪ್ರಿಯರಾದ ಇನ್ನಿತರರು ನಿಜವಾಗಿಯೂ ಆತ ಸಾಕಿದ ಕೋಳಿಗೆ ಮಲಬದ್ಧತೆ ಸಮಸ್ಯೆ ಕಾಡಿರಬಹುದು ಎಂದು ವ್ಯಕ್ತಿಯ ಪರ ನಿಂತಿದ್ದಾರೆ. ಒಟ್ಟಿನಲ್ಲಿ ಲಾಕ್​ಡೌನ್​ ಸಮಯದಲ್ಲಿ ವಿಚಿತ್ರ ಕಾರಣಗಳನ್ನು ಕೊಟ್ಟು ಜನರು ಹೊರಬರುವ ಪ್ರಸಂಗಗಳು ಇತ್ತೀಚೆಗೆ ಬಾರೀ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 

ಗದಗದ ಹೂವು ಬೆಳೆಗಾರರಲ್ಲಿ ಹೆಚ್ಚಿದ ಆತಂಕ; ವ್ಯಾಪಾರವಿಲ್ಲದೆ ಹುಬ್ಬಳ್ಳಿ ಮಾರುಕಟ್ಟೆಯ ಕಸದ ತೊಟ್ಟಿಗೆ ಸೇವಂತಿ ಎಸೆದ ರೈತರು

ವೃದ್ಧಾಪ್ಯ ವೇತನ ಪಡೆಯುವುದಕ್ಕೆ ಗದಗದಲ್ಲಿ ಅಜ್ಜಿ ಪರದಾಟ; ವಾಪಸ್ ಊರಿಗೆ ಕಳುಹಿಸಿದ ಪೊಲೀಸರು

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್