AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ಬೆನ್ನಲ್ಲೇ ದೇವಸ್ಥಾನಗಳ ಆಸ್ತಿ ರಕ್ಷಣೆಗೆ ತೀರ್ಮಾನ, ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ಸಹಾಯ ಧನ

ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವೈಷ್ಣೋದೇವಿಗೆ ತೆರಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಸಹಾಯ ಧನ , ದೇವಸ್ಥಾನಗಳ ಆಸ್ತಿಗಳನ್ನು ರಕ್ಷಣೆ ಸೇರಿದಂತೆ ಇನ್ನು ಕೆಲ ಮಹತ್ವದ ತೀರ್ಮಾನನ್ನು ಕೈಗೊಂಡಿದ್ದು, ಅವು ಈ ಕೆಳಗಿನಂತಿವೆ ನೋಡಿ.

ವಕ್ಫ್​ ಬೆನ್ನಲ್ಲೇ ದೇವಸ್ಥಾನಗಳ ಆಸ್ತಿ ರಕ್ಷಣೆಗೆ ತೀರ್ಮಾನ, ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ಸಹಾಯ ಧನ
ಸಚಿವ ರಾಮಲಿಂಗಾ ರೆಡ್ಡಿ ಸಭೆ
TV9 Web
| Edited By: ವಿವೇಕ ಬಿರಾದಾರ|

Updated on:Nov 14, 2024 | 2:40 PM

Share

ಬೆಂಗಳೂರು, (ನವೆಂಬರ್ 13): ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇಗುಲಕ್ಕೆ ತೆರಳುವ ಕರ್ನಾಟಕದ ಯಾತ್ರಾರ್ಥಿಗಳಿಗೆ ಸಹಾಯ ಧನ ನೀಡಲು ತೀರ್ಮಾನಿಸಲಾಗಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆ ವಕ್ಫ್​ ಆಸ್ತಿ ಬೆನ್ನಲ್ಲೇ ದೇವಸ್ಥಾನಗಳ ಆಸ್ತಿ ರಕ್ಷಣೆಗಾಗಿ ಸರ್ವೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಪ್ರಮುಖವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್​ ಆಸ್ತಿ ವಿವಾದದ ಬಳಿಕ ಮುಜುರಾಯಿ ಇಲಾಖೆಯ ಅಡಿಯಲ್ಲಿ ಬರುವ ದೇವಸ್ಥಾನಗಳ ಆಸ್ತಿ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಕೂಡಲೇ ಸರ್ವೆ ಮಾಡಲು ತೀರ್ಮಾನಿಸಲಾಗಿದೆ.

ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು

  • ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್ ಎದುರು ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಾಣ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ.
  • ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯ ಅನುದಾನ ಬಿಡುಗಡೆ ಮಾಡಲು ತೀರ್ಮಾನ.
  • ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಿಸಿ ಡಿ. 31 ರವರೆಗೂ ಕಾಲಾವಕಾಶ.
  • ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನ.
  • ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು ತೀರ್ಮಾನ.
  • ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ತೀರ್ಮಾನ.
  • ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನ.

Published On - 10:02 pm, Wed, 13 November 24

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ