ಅಷ್ಟೊಂದು ಹಣ ಪತ್ತೆಯಾಗಿದ್ದರೂ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದ್ದೇಕೆ? ಇಲ್ಲಿವೆ ಕಾರಣಗಳು

ಕೆಎಸ್​ಡಿಎಲ್​ ಮಾಜಿ ಅಧ್ಯಕ್ಷ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಗಂಭೀರ ಆರೋಪವಿದ್ದರೂ ಜಾಮೀನು ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಬಂಧನದ ಭೀತಿಯಲ್ಲಿದ್ದ ಮಾಡಾಳ್​ಗೆ ಮಧ್ಯಂತರ ಜಾಮೀನು ಸಿಗಲು ಕಾರಣಗಳು ಏನು? ಇಲ್ಲಿವೆ ನೋಡಿ

ಅಷ್ಟೊಂದು ಹಣ ಪತ್ತೆಯಾಗಿದ್ದರೂ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದ್ದೇಕೆ? ಇಲ್ಲಿವೆ ಕಾರಣಗಳು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Mar 08, 2023 | 9:07 AM

ಬೆಂಗಳೂರು: ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿ ಕಳೆದ ಆರು ದಿನಗಳಿಂದ ತಲೆಮರಿಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ( BJP MLA Madal Virupakshappa) ಕರ್ನಾಟಕ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಕೆ. ನಟರಾಜನ್​ ಏಕಸದಸ್ಯತ್ವದ ಪೀಠ, 5 ಲಕ್ಷ ರೂ. ಮೌಲ್ಯದ ಬಾಂಡ್​, ಇಬ್ಬರು ಶ್ಯೂರಿಟಿ ನೀಡುವಂತೆ ಆದೇಶಿಸಿದೆ. ಅಲ್ಲದೇ ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ. ಹಾಗಾದ್ರೆ, ಗಂಭೀರ ಆರೋಪ ಇರುವ ಕೆಎಸ್​ಡಿಎಲ್​ ಮಾಜಿ ಅಧ್ಯಕ್ಷ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಹಾಗಾದ್ರೆ, ಬಂಧನದ ಭೀತಿಯಲ್ಲಿದ್ದ ಮಾಡಾಳ್​ಗೆ ಮಧ್ಯಂತರ ಜಾಮೀನು ಸಿಗಲು ಕಾರಣಗಳು ಏನು? ಎನ್ನುವುದು ಈ ಕೆಳಗಿನಂತಿವೆ ನೋಡಿ.

ಇದನ್ನೂ ಓದಿ: ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪ್ರಕರಣದ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ, ಅನುಮಾನ ಹುಟ್ಟುಹಾಕಿದ ಬದಲಾವಣೆ

ಶ್ರೇಯಸ್ ಕಶ್ಯಪ್ ನೀಡಿದ್ದ ದೂರಿನಲ್ಲಿರುವ ಲೋಪ ದೋಷಗಳನ್ನೇ ಆಧಾರವಾಗಿಟ್ಟುಕೊಂಡು ಮಾಡಾಳ್ ವಿರೂಪಾಕ್ಷಪ್ಪ ಪರ ಹಿರಿಯ ವಕೀಲ ಕೆ. ಸುಮನ್ ಅವರು ವಾದ ಮಾಡಿದರು. ಎಫ್ಐಆರ್​ನಲ್ಲಿ ಯಾವುದೇ ಆರೋಪಗಳಿಲ್ಲ. ಲೋಕಾಯುಕ್ತ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ. ಟೆಂಡರ್ ಹಾಗೂ ಖರೀದಿ ಆದೇಶ ನೀಡಲಾಗಿದೆ. ಆದ್ರೆ, ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ. ಲಂಚಕ್ಕೆ ಯಾವುದೇ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ. ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಆರೋಪಿಸಲಾಗಿದೆ. ಆದರೆ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಆರೋಪವಿಲ್ಲ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಕಾರಣಗಳು ಇಂತಿವೆ

  • ದೂರಿನಲ್ಲಿ ಶಾಸಕ ಮಾಡಾಳ್ ಲಂಚಕ್ಕೆ ಡಿಮಾಂಡ್, ಲಂಚ ಪಡೆದ ಉಲ್ಲೇಖವಿಲ್ಲ
  • ಮಾಡಾಳ್ ವಿರುದ್ಧದ ಎಫ್ಐಆರ್ ನಲ್ಲಿ ಅಪರಾಧವೆನ್ನಿಸುವಂತಹ ಯಾವುದೇ ಆರೋಪಗಳಿಲ್ಲ
  • ಟೆಂಡರ್ ನೀಡುವ ಮೊದಲು ಲಂಚ ಕೇಳಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ
  • ಕಾನೂನು ಪ್ರಕಾರವೇ ಟೆಂಡರ್ ಕರೆದು ಖರೀದಿ ಆದೇಶ ನೀಡಲಾಗಿದೆ
  • ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ
  • ಟೆಂಡರ್ ಅಂತಿಮಗೊಳಿಸುವುದಕ್ಕೆ ಅಧಿಕಾರಿಗಳ ಪ್ರತ್ಯೇಕ ಸಮಿತಿ ಇದೆ
  • ಶಾಸಕ ಮಾಡಾಳ್ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ
  • ಕೇವಲ ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಉಲ್ಲೇಖ
  • ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ
  • ಬಂಧಿಸಿದ ಆರೋಪಿಗಳ ಕಸ್ಟಡಿ ಕೋರಿಯೂ ಲೋಕಾಯುಕ್ತ ಪೊಲೀಸರು ಯಾವುದೇ ಅರ್ಜಿ ಸಲ್ಲಿಸಿಲ್ಲ.
  • ರಿಮಾಂಡ್ ಅರ್ಜಿಯಲ್ಲಿ ಶಾಸಕರ ವಿರುದ್ಧ ದಾಖಲೆಗಳನ್ನು ನೀಡಿಲ್ಲ
  • ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದ್ದು, ಕೆಎಸ್‌ಡಿಎಲ್ ನ ಅಧ್ಯಕ್ಷರಿಗೆ ಟೆಂಡರ್ ನೀಡುವ ಅಧಿಕಾರವಿಲ್ಲ.

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್