AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಿಂದ ಯಾದಗಿರಿಗೆ ಬಂದಿದ್ದವರು ಕೊವಿಡ್ ಟೆಸ್ಟ್‌ಗೆ ಹೆದರಿ ರೈಲ್ವೇ ಸ್ಟೇಷನ್ ಕಾಂಪೌಂಡ್ ಹಾರಿ ಪರಾರಿ

ಕೊವಿಡ್ ಟೆಸ್ಟ್​ಗೆ ಹೆದರಿ ಕಂಪೌಂಡ್ ಹಾರಿ ಮುಂಬೈನಿಂದ ಬಂದಿರುವ ವಲಸೆ ಕಾರ್ಮಿಕರು ಪರಾರಿಯಾಗಿದ್ದಾರೆ.

ಮುಂಬೈನಿಂದ ಯಾದಗಿರಿಗೆ ಬಂದಿದ್ದವರು ಕೊವಿಡ್ ಟೆಸ್ಟ್‌ಗೆ ಹೆದರಿ ರೈಲ್ವೇ ಸ್ಟೇಷನ್ ಕಾಂಪೌಂಡ್ ಹಾರಿ ಪರಾರಿ
ಕೊರೊನಾ ಟೆಸ್ಟ್
shruti hegde
| Edited By: |

Updated on: Apr 11, 2021 | 7:44 PM

Share

ಯಾದಗಿರಿ: ಮುಂಬೈನಿಂದ ಬಂದಿರುವ ವಲಸೆ ಕಾರ್ಮಿಕರು ಕೊವಿಡ್ ಟೆಸ್ಟ್​ಗೆ ಹೆದರಿ ಕಂಪೌಂಡ್ ಹಾರಿ ಪರಾರಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಕೊವಿಡ್​ ಟೆಸ್ಟ್​ ಮಾಡಿಸಬೇಕೆಂದು ವಿಷಯ ತಿಳಿದು, ನಗರದ ರೈಲ್ವೆ ನಿಲ್ದಾಣದಲ್ಲಿ ರೈಲಿನಿಂದ ಇಳಿದ ತಕ್ಷಣ ಪರಾರಿಯಾಗಿಬಿಟ್ಟಿದ್ದಾರೆ. ಯಾದಗಿರಿ ಮೂಲದ, ಮುಂಬೈನಲ್ಲಿ ಕೆಲಸಕ್ಕೆಂದು ಹೋಗಿದ್ದ ವಲಸಿಗರು ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳ ದಾರಿ ತಪ್ಪಿಸುತ್ತಿದ್ದಾರೆ. ಊರಿಗೆ ತಲುಪುವಾಗ ರೈಲ್ವೆ ನಿಲ್ದಾಣದ ಹಿಂಭಾಗದ ಕಂಪೌಂಡ್ ದಾಟಿ ಕೊವಿಡ್ ಟೆಸ್ಟ್ ತಪ್ಪಿಸಿಕೊಳ್ಳುತ್ತಿದ್ದಾರೆ. ಮಕ್ಕಳು, ಮಹಿಳೆಯರು ಹಾಗೂ ಯುವಕರು ಅಪಾಯದ ನಡುವೆ ಕಂಪೌಂಡ್ ಹಾರಿ ಊರಿಗೆ ಪರಾರಿಯಾಗುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್​ಡೌನ್ ಭೀತಿ ಕಾಡುತ್ತಿದೆ. ಆದ್ದರಿಂದ ಮಹಾರಾಷ್ಟ್ರ ಬಿಟ್ಟು ವಲಸೆ ಕಾರ್ಮಿಕರು ತಮ್ಮ ಊರಿಗೆ ಹಿಂದಿರುಗುತ್ತಿದ್ದಾರೆ. ರೈಲ್ವೇ ನಿಲ್ದಾಣದ ಮುಖ್ಯ ಗೇಟ್​ನಲ್ಲಿ ಕೊವಿಡ್​ ಟೆಸ್ಟ್​ ಕಡ್ಡಾಯ ಮಾಡಲಾಗಿದೆ. ಟೆಸ್ಟ್​ ಮಾಡಿಸಿದರೆ ಮಾತ್ರ ರೈಲ್ವೆ ನಿಲ್ದಾಣದಿಂದ ಹೊರಗಡೆ ಕಳುಹಿಸಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ವಲಸೆ ಕಾರ್ಮಿಕರು ಕಂಪೌಂಡ್​ ಹಾರಿ ಪರಾರಿಯಾಗುತ್ತಿದ್ದಾರೆ. ಯಾವುದೇ ಟೆಸ್ಟ್ ಮಾಡಿಸದೇ ಊರಿಗೆ ಸೇರುವ ಕಾರ್ಮಿಕರಿಂದ ಯಾದಗಿರಿ ಜಿಲ್ಲೆಗೆ ಎರಡನೇ ಕೊರೊನಾ ಅಲೆ ಆತಂಕ ಶುರುವಾಗಿದೆ. ಕಳ್ಳದಾರಿ ಹಿಡಿದು ಓಡುವ ಕಾರ್ಮಿಕರನ್ನು ಜಿಲ್ಲಾಡಳಿತ ಕಡಿವಾಣ ಹಾಕುತ್ತಾ? ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಕೊವಿಡ್ ಪರಿಸ್ಥಿತಿ ಗಂಭೀರ, ಲಾಕ್​ಡೌನ್ ಇದಕ್ಕೆ ಪರಿಹಾರವಲ್ಲ: ಅರವಿಂದ್ ಕೇಜ್ರಿವಾಲ್

Coronavirus India Update: ಭಾರತದಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 1.52ಲಕ್ಷ, ಇಂದಿನಿಂದ ‘ಲಸಿಕೆ ಉತ್ಸವ’

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ