AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ

ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ಮಾಡುತ್ತಿದ್ದಾರೆ.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಆಯೇಷಾ ಬಾನು
| Edited By: |

Updated on:Jan 06, 2021 | 1:10 PM

Share

ಮೈಸೂರು: ಮಹಾಮಾರಿ ಕೊರೊನಾ ನಡುವೆ ಈಗ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಕೇರಳ ರಾಜ್ಯದಲ್ಲಿಯೂ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿಜ್ವರ ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಘೋಷಿಸಿದೆ. ರೋಗ ಹರಡುವಿಕೆಯನ್ನು ತಡೆಗಟ್ಟಲು 12,000ಕ್ಕೂ ಹೆಚ್ಚು ಪಕ್ಷಿಗಳನ್ನು  ಆ ರಾಜ್ಯದಲ್ಲಿ ನಾಶಪಡಿಸಲಾಗಿದೆ.

ಅಂತೆಯೇ, ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಆತಂಕ ಮನೆ‌ ಮಾಡಿದ್ದು ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕಳೆದ ಮಾರ್ಚ್‌ನಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯವನ್ನು ಬಂದ್ ಮಾಡಲಾಗಿತ್ತು. ಇದೀಗ, ಮತ್ತೆ ಹಕ್ಕಿಜ್ವರದಿಂದ ಮೃಗಾಲಯದ ಕಡೆ ಹೆಚ್ಚು ಎಚ್ಚರಿಕೆ ವಹಿಸಲಾಗುತ್ತಿದೆ.

ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ಮಾಡುತ್ತಿದ್ದಾರೆ. ಮೈಸೂರಿನ ಕೋಳಿ ಫಾರಂ, ನಾಟಿಕೋಳಿ, ವಲಸೆ ಪಕ್ಷಿ ಸೇರಿ ಯಾವುದೇ ಪಕ್ಷಿಗಳ ಸಾವು ಕಂಡರೆ ಮಾಹಿತಿ ನೀಡುವಂತೆ ಡಿಸಿ ಮನವಿ ಮಾಡಿಕೊಂಡಿದ್ದಾರೆ.

ಹಕ್ಕಿಜ್ವರದ ಪ್ರತಿನಿತ್ಯದ ಮಾಹಿತಿ ಪಡೆಯಲು ಕಂಟ್ರೋಲ್ ರೂಂ ಹಕ್ಕಿಜ್ವರ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಹಕ್ಕಿಜ್ವರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹಕ್ಕಿಜ್ವರದ ಪ್ರತಿನಿತ್ಯದ ಮಾಹಿತಿ ಪಡೆಯಲು ನವದೆಹಲಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲಪ್ರದೇಶ, ಕೇರಳದಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಕಂಟ್ರೋಲ್ ರೂಂ ಆರಂಭಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?

Published On - 10:21 am, Wed, 6 January 21

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು