AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ

ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ಮಾಡುತ್ತಿದ್ದಾರೆ.

ಹೆಚ್ಚಾಯ್ತು ಹಕ್ಕಿಜ್ವರ ಆತಂಕ.. ಮೈಸೂರು-ಕೇರಳ ಗಡಿಯಲ್ಲಿ DC ಸಿಂಧೂರಿಯಿಂದ ಕಟ್ಟೆಚ್ಚರದ ಆದೇಶ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಆಯೇಷಾ ಬಾನು
| Edited By: |

Updated on:Jan 06, 2021 | 1:10 PM

Share

ಮೈಸೂರು: ಮಹಾಮಾರಿ ಕೊರೊನಾ ನಡುವೆ ಈಗ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಕೇರಳ ರಾಜ್ಯದಲ್ಲಿಯೂ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಕ್ಕಿಜ್ವರ ರಾಜ್ಯ ವಿಪತ್ತು ಎಂದು ಕೇರಳ ಸರ್ಕಾರ ಘೋಷಿಸಿದೆ. ರೋಗ ಹರಡುವಿಕೆಯನ್ನು ತಡೆಗಟ್ಟಲು 12,000ಕ್ಕೂ ಹೆಚ್ಚು ಪಕ್ಷಿಗಳನ್ನು  ಆ ರಾಜ್ಯದಲ್ಲಿ ನಾಶಪಡಿಸಲಾಗಿದೆ.

ಅಂತೆಯೇ, ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಆತಂಕ ಮನೆ‌ ಮಾಡಿದ್ದು ಮೈಸೂರು ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಕಳೆದ ಮಾರ್ಚ್‌ನಲ್ಲಿ ಹಕ್ಕಿಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯವನ್ನು ಬಂದ್ ಮಾಡಲಾಗಿತ್ತು. ಇದೀಗ, ಮತ್ತೆ ಹಕ್ಕಿಜ್ವರದಿಂದ ಮೃಗಾಲಯದ ಕಡೆ ಹೆಚ್ಚು ಎಚ್ಚರಿಕೆ ವಹಿಸಲಾಗುತ್ತಿದೆ.

ಮೈಸೂರು-ಕೇರಳ ಗಡಿಯಲ್ಲಿ ಕೋಳಿ, ಪಕ್ಷಿಗಳ ಸಾಗಾಟವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಗೂ H.D.ಕೋಟೆಯ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಕೇರಳದಿಂದ ಬರುವ ಪ್ರತಿ ವಾಹನವನ್ನು ರೋಹಿಣಿ ಸಿಂಧೂರಿ ಪರಿಶೀಲನೆ ನಡೆಸಿ, ಸ್ಯಾನಿಟೈಸ್ ಮಾಡುತ್ತಿದ್ದಾರೆ. ಮೈಸೂರಿನ ಕೋಳಿ ಫಾರಂ, ನಾಟಿಕೋಳಿ, ವಲಸೆ ಪಕ್ಷಿ ಸೇರಿ ಯಾವುದೇ ಪಕ್ಷಿಗಳ ಸಾವು ಕಂಡರೆ ಮಾಹಿತಿ ನೀಡುವಂತೆ ಡಿಸಿ ಮನವಿ ಮಾಡಿಕೊಂಡಿದ್ದಾರೆ.

ಹಕ್ಕಿಜ್ವರದ ಪ್ರತಿನಿತ್ಯದ ಮಾಹಿತಿ ಪಡೆಯಲು ಕಂಟ್ರೋಲ್ ರೂಂ ಹಕ್ಕಿಜ್ವರ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಹಕ್ಕಿಜ್ವರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಹಕ್ಕಿಜ್ವರದ ಪ್ರತಿನಿತ್ಯದ ಮಾಹಿತಿ ಪಡೆಯಲು ನವದೆಹಲಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲಪ್ರದೇಶ, ಕೇರಳದಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಕಂಟ್ರೋಲ್ ರೂಂ ಆರಂಭಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಗೆಗಳ ನಿಗೂಢ ಸಾವು.. ಹಕ್ಕಿಜ್ವರ ಸಾಧ್ಯತೆ?

Published On - 10:21 am, Wed, 6 January 21

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ