AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್

ಕೊರೊನಾ ಮಹಾಮಾರಿಯ ಎರಡನೇ ಅಲೆ ಕೇವಲ ಮನುಷ್ಯರನ್ನ ಮಾತ್ರವಲ್ಲ ಪ್ರಾಣಿಗಳನ್ನು ಸಹ ಕಾಡುತ್ತಿದೆ. ಹೈದರಾಬಾದ್ ಮೃಗಾಲಯದ ಸಿಂಹಗಳಲ್ಲಿ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದ ಮೃಗಾಲಯದ ಪ್ರಾಣಿಗಳ ಬಗ್ಗೆ ಅಧಿಕಾರಿಗಳಲ್ಲಿ ಆತಂಕ ಉಂಟಾಗಿದೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅವರು ಕೈಗೊಳ್ಳುತ್ತಿದ್ದಾರೆ.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on:May 12, 2021 | 7:07 AM

Share

ಮೈಸೂರು: ಕೊರೊನಾ ಮಾನವ ಕುಲವನ್ನೇ ಅಲುಗಾಡಿಸಿದೆ. ಮನುಷ್ಯರನ್ನ ಬಲಿ ಪಡೆಯುತ್ತಾ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕೊರೊನಾ ಬಗ್ಗೆ ಮತ್ತೆ ನಾನಾ ಪ್ರಶ್ನೆಗಳು ಎದ್ದಿವೆ. ಕೊರೊನಾ ಮಹಾಮಾರಿ ಎರಡನೇ ಅಲೆ ಜನರನ್ನು ಮಾತ್ರವಲ್ಲ ಪ್ರಾಣಿಗಳನ್ನೂ ಕಾಡುತ್ತಾ? ಪ್ರಾಣಿಗಳ ಪ್ರಾಣಕ್ಕೂ ಸಂಚಕಾರ ತರುತ್ತಾ? ಅನ್ನೋ ಪ್ರಶ್ನೆಗಳು ಎದ್ದಿವೆ. ಹೀಗಾಗಿ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ರಾಜ್ಯದ 5 ಮೃಗಾಲಯದಲ್ಲಿ ಹುಲಿ, ಸಿಂಹ, ಚಿರತೆಗಳಿವೆ. ಯಾವಾಗ ಹೈದರಾಬಾದ್ ಮೃಗಾಲಯದ ಸಿಂಹಗಳಿಗೆ ಕೊರೊನಾ ಮಹಾಮಾರಿ ವಕ್ಕರಿಸಿತೋ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಪ್ರತಿದಿನ ಹುಲಿ, ಸಿಂಹ ಹಾಗೂ ಚಿರತೆಗಳ‌ ಮೇಲೆ‌ ನಿಗಾ ಇಡ್ತಿದ್ದಾರೆ. ಪ್ರತಿದಿನ ವೈದ್ಯರು ಪ್ರಾಣಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಸದ್ಯ ರಾಜ್ಯದ ಮೃಗಾಲಯದಲ್ಲಿರುವ ಯಾವ ಪ್ರಾಣಿಗಳಲ್ಲೂ ಮಹಾಮಾರಿಯ ರೋಗ ಲಕ್ಷಣಗಳು ಕಂಡುಬಂದಿಲ್ಲ. ಇನ್ನು ಅಚ್ಚರಿ ಅಂದ್ರೆ ಪ್ರಾಣಿಗಳಿಗೆ ಕೊರೊನಾ ಸೋಂಕು ವಕ್ಕರಿಸಿದ್ರೆ ಪ್ರಾಣಿಗಳು ಸಹ ಕೆಮ್ಮಲು ಶುರು ಮಾಡುತ್ತವೆ. ಮನುಷ್ಯರಂತೆ ಪ್ರಾಣಿಗಳಿಗೂ ಬೇಗ ಸುಸ್ತಾಗುತ್ತೆ. ಅಷ್ಟೇ ಅಲ್ಲ ಊಟವನ್ನೂ ಮಾಡುವುದಿಲ್ಲ. ಈ ಎಲ್ಲಾ ಮಾಹಿತಿಗಳನ್ನ ಹೈದರಾಬಾದ್ ಮೃಗಾಲಯದ ಅಧಿಕಾರಿಗಳಿಂದ ತರಿಸಿಕೊಳ್ಳಲಾಗಿದೆ. ಇದರ ಆಧಾರದಲ್ಲಿ ಪ್ರಾಣಿಗಳನ್ನ ನಿರಂತರವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ‌.

ಹೈದರಾಬಾದ್‌ನಲ್ಲಿ ಪ್ರಾಣಿಗಳಿಗೆ ಸೋಂಕು ಹೇಗೆ ತಗುಲಿತು ಅನ್ನೋ‌ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಪ್ರಾಣಿಗಳನ್ನ ನೋಡಿಕೊಳ್ಳುವವರಿಂದಲೇ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಣಿಗಳನ್ನ ನೋಡಿಕೊಳ್ಳುವವರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್‌ ಆಗಿ ಸೂಚಿಸಲಾಗಿದೆ. ಒಟ್ಟಾರೆ ಮಹಾಮಾರಿಯ ಎರಡನೇ ಅಲೆ ಮನುಷ್ಯರ ಜೊತೆ ಪ್ರಾಣಿಗಳಿಗೂ ವ್ಯಾಪಾಕವಾಗಿ ಹರಡಿದ್ರೆ ಮುಂದಿನ ಪರಿಸ್ಥಿತಿ ಊಹಿಸಲೂ ಸಾಧ್ಯವಾಗೋದಿಲ್ಲ.

ಇದನ್ನೂ ಓದಿ: ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

Published On - 7:02 am, Wed, 12 May 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?