AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್

ಕೊರೊನಾ ಮಹಾಮಾರಿಯ ಎರಡನೇ ಅಲೆ ಕೇವಲ ಮನುಷ್ಯರನ್ನ ಮಾತ್ರವಲ್ಲ ಪ್ರಾಣಿಗಳನ್ನು ಸಹ ಕಾಡುತ್ತಿದೆ. ಹೈದರಾಬಾದ್ ಮೃಗಾಲಯದ ಸಿಂಹಗಳಲ್ಲಿ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದ ಮೃಗಾಲಯದ ಪ್ರಾಣಿಗಳ ಬಗ್ಗೆ ಅಧಿಕಾರಿಗಳಲ್ಲಿ ಆತಂಕ ಉಂಟಾಗಿದೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅವರು ಕೈಗೊಳ್ಳುತ್ತಿದ್ದಾರೆ.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:May 12, 2021 | 7:07 AM

Share

ಮೈಸೂರು: ಕೊರೊನಾ ಮಾನವ ಕುಲವನ್ನೇ ಅಲುಗಾಡಿಸಿದೆ. ಮನುಷ್ಯರನ್ನ ಬಲಿ ಪಡೆಯುತ್ತಾ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕೊರೊನಾ ಬಗ್ಗೆ ಮತ್ತೆ ನಾನಾ ಪ್ರಶ್ನೆಗಳು ಎದ್ದಿವೆ. ಕೊರೊನಾ ಮಹಾಮಾರಿ ಎರಡನೇ ಅಲೆ ಜನರನ್ನು ಮಾತ್ರವಲ್ಲ ಪ್ರಾಣಿಗಳನ್ನೂ ಕಾಡುತ್ತಾ? ಪ್ರಾಣಿಗಳ ಪ್ರಾಣಕ್ಕೂ ಸಂಚಕಾರ ತರುತ್ತಾ? ಅನ್ನೋ ಪ್ರಶ್ನೆಗಳು ಎದ್ದಿವೆ. ಹೀಗಾಗಿ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ರಾಜ್ಯದ 5 ಮೃಗಾಲಯದಲ್ಲಿ ಹುಲಿ, ಸಿಂಹ, ಚಿರತೆಗಳಿವೆ. ಯಾವಾಗ ಹೈದರಾಬಾದ್ ಮೃಗಾಲಯದ ಸಿಂಹಗಳಿಗೆ ಕೊರೊನಾ ಮಹಾಮಾರಿ ವಕ್ಕರಿಸಿತೋ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಪ್ರತಿದಿನ ಹುಲಿ, ಸಿಂಹ ಹಾಗೂ ಚಿರತೆಗಳ‌ ಮೇಲೆ‌ ನಿಗಾ ಇಡ್ತಿದ್ದಾರೆ. ಪ್ರತಿದಿನ ವೈದ್ಯರು ಪ್ರಾಣಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಸದ್ಯ ರಾಜ್ಯದ ಮೃಗಾಲಯದಲ್ಲಿರುವ ಯಾವ ಪ್ರಾಣಿಗಳಲ್ಲೂ ಮಹಾಮಾರಿಯ ರೋಗ ಲಕ್ಷಣಗಳು ಕಂಡುಬಂದಿಲ್ಲ. ಇನ್ನು ಅಚ್ಚರಿ ಅಂದ್ರೆ ಪ್ರಾಣಿಗಳಿಗೆ ಕೊರೊನಾ ಸೋಂಕು ವಕ್ಕರಿಸಿದ್ರೆ ಪ್ರಾಣಿಗಳು ಸಹ ಕೆಮ್ಮಲು ಶುರು ಮಾಡುತ್ತವೆ. ಮನುಷ್ಯರಂತೆ ಪ್ರಾಣಿಗಳಿಗೂ ಬೇಗ ಸುಸ್ತಾಗುತ್ತೆ. ಅಷ್ಟೇ ಅಲ್ಲ ಊಟವನ್ನೂ ಮಾಡುವುದಿಲ್ಲ. ಈ ಎಲ್ಲಾ ಮಾಹಿತಿಗಳನ್ನ ಹೈದರಾಬಾದ್ ಮೃಗಾಲಯದ ಅಧಿಕಾರಿಗಳಿಂದ ತರಿಸಿಕೊಳ್ಳಲಾಗಿದೆ. ಇದರ ಆಧಾರದಲ್ಲಿ ಪ್ರಾಣಿಗಳನ್ನ ನಿರಂತರವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ‌.

ಹೈದರಾಬಾದ್‌ನಲ್ಲಿ ಪ್ರಾಣಿಗಳಿಗೆ ಸೋಂಕು ಹೇಗೆ ತಗುಲಿತು ಅನ್ನೋ‌ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಪ್ರಾಣಿಗಳನ್ನ ನೋಡಿಕೊಳ್ಳುವವರಿಂದಲೇ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಣಿಗಳನ್ನ ನೋಡಿಕೊಳ್ಳುವವರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್‌ ಆಗಿ ಸೂಚಿಸಲಾಗಿದೆ. ಒಟ್ಟಾರೆ ಮಹಾಮಾರಿಯ ಎರಡನೇ ಅಲೆ ಮನುಷ್ಯರ ಜೊತೆ ಪ್ರಾಣಿಗಳಿಗೂ ವ್ಯಾಪಾಕವಾಗಿ ಹರಡಿದ್ರೆ ಮುಂದಿನ ಪರಿಸ್ಥಿತಿ ಊಹಿಸಲೂ ಸಾಧ್ಯವಾಗೋದಿಲ್ಲ.

ಇದನ್ನೂ ಓದಿ: ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

Published On - 7:02 am, Wed, 12 May 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!