AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್

ಕೊರೊನಾ ಮಹಾಮಾರಿಯ ಎರಡನೇ ಅಲೆ ಕೇವಲ ಮನುಷ್ಯರನ್ನ ಮಾತ್ರವಲ್ಲ ಪ್ರಾಣಿಗಳನ್ನು ಸಹ ಕಾಡುತ್ತಿದೆ. ಹೈದರಾಬಾದ್ ಮೃಗಾಲಯದ ಸಿಂಹಗಳಲ್ಲಿ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ರಾಜ್ಯದ ಮೃಗಾಲಯದ ಪ್ರಾಣಿಗಳ ಬಗ್ಗೆ ಅಧಿಕಾರಿಗಳಲ್ಲಿ ಆತಂಕ ಉಂಟಾಗಿದೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅವರು ಕೈಗೊಳ್ಳುತ್ತಿದ್ದಾರೆ.

ಪ್ರಾಣಿಗಳಿಗೂ ವಕ್ಕರಿಸುತ್ತೆ ಕೊರೊನಾ.. ಕರ್ನಾಟಕ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್
ಸಂಗ್ರಹ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:May 12, 2021 | 7:07 AM

Share

ಮೈಸೂರು: ಕೊರೊನಾ ಮಾನವ ಕುಲವನ್ನೇ ಅಲುಗಾಡಿಸಿದೆ. ಮನುಷ್ಯರನ್ನ ಬಲಿ ಪಡೆಯುತ್ತಾ ಅಟ್ಟಹಾಸ ಮೆರೆಯುತ್ತಿದೆ. ಈ ನಡುವೆ ಕೊರೊನಾ ಬಗ್ಗೆ ಮತ್ತೆ ನಾನಾ ಪ್ರಶ್ನೆಗಳು ಎದ್ದಿವೆ. ಕೊರೊನಾ ಮಹಾಮಾರಿ ಎರಡನೇ ಅಲೆ ಜನರನ್ನು ಮಾತ್ರವಲ್ಲ ಪ್ರಾಣಿಗಳನ್ನೂ ಕಾಡುತ್ತಾ? ಪ್ರಾಣಿಗಳ ಪ್ರಾಣಕ್ಕೂ ಸಂಚಕಾರ ತರುತ್ತಾ? ಅನ್ನೋ ಪ್ರಶ್ನೆಗಳು ಎದ್ದಿವೆ. ಹೀಗಾಗಿ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ರಾಜ್ಯದ 5 ಮೃಗಾಲಯದಲ್ಲಿ ಹುಲಿ, ಸಿಂಹ, ಚಿರತೆಗಳಿವೆ. ಯಾವಾಗ ಹೈದರಾಬಾದ್ ಮೃಗಾಲಯದ ಸಿಂಹಗಳಿಗೆ ಕೊರೊನಾ ಮಹಾಮಾರಿ ವಕ್ಕರಿಸಿತೋ ರಾಜ್ಯದ ಮೃಗಾಲಯದ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಪ್ರತಿದಿನ ಹುಲಿ, ಸಿಂಹ ಹಾಗೂ ಚಿರತೆಗಳ‌ ಮೇಲೆ‌ ನಿಗಾ ಇಡ್ತಿದ್ದಾರೆ. ಪ್ರತಿದಿನ ವೈದ್ಯರು ಪ್ರಾಣಿಗಳ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಸದ್ಯ ರಾಜ್ಯದ ಮೃಗಾಲಯದಲ್ಲಿರುವ ಯಾವ ಪ್ರಾಣಿಗಳಲ್ಲೂ ಮಹಾಮಾರಿಯ ರೋಗ ಲಕ್ಷಣಗಳು ಕಂಡುಬಂದಿಲ್ಲ. ಇನ್ನು ಅಚ್ಚರಿ ಅಂದ್ರೆ ಪ್ರಾಣಿಗಳಿಗೆ ಕೊರೊನಾ ಸೋಂಕು ವಕ್ಕರಿಸಿದ್ರೆ ಪ್ರಾಣಿಗಳು ಸಹ ಕೆಮ್ಮಲು ಶುರು ಮಾಡುತ್ತವೆ. ಮನುಷ್ಯರಂತೆ ಪ್ರಾಣಿಗಳಿಗೂ ಬೇಗ ಸುಸ್ತಾಗುತ್ತೆ. ಅಷ್ಟೇ ಅಲ್ಲ ಊಟವನ್ನೂ ಮಾಡುವುದಿಲ್ಲ. ಈ ಎಲ್ಲಾ ಮಾಹಿತಿಗಳನ್ನ ಹೈದರಾಬಾದ್ ಮೃಗಾಲಯದ ಅಧಿಕಾರಿಗಳಿಂದ ತರಿಸಿಕೊಳ್ಳಲಾಗಿದೆ. ಇದರ ಆಧಾರದಲ್ಲಿ ಪ್ರಾಣಿಗಳನ್ನ ನಿರಂತರವಾಗಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದೆ‌.

ಹೈದರಾಬಾದ್‌ನಲ್ಲಿ ಪ್ರಾಣಿಗಳಿಗೆ ಸೋಂಕು ಹೇಗೆ ತಗುಲಿತು ಅನ್ನೋ‌ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಪ್ರಾಣಿಗಳನ್ನ ನೋಡಿಕೊಳ್ಳುವವರಿಂದಲೇ ಹರಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪ್ರಾಣಿಗಳನ್ನ ನೋಡಿಕೊಳ್ಳುವವರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಕೊವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಖಡಕ್‌ ಆಗಿ ಸೂಚಿಸಲಾಗಿದೆ. ಒಟ್ಟಾರೆ ಮಹಾಮಾರಿಯ ಎರಡನೇ ಅಲೆ ಮನುಷ್ಯರ ಜೊತೆ ಪ್ರಾಣಿಗಳಿಗೂ ವ್ಯಾಪಾಕವಾಗಿ ಹರಡಿದ್ರೆ ಮುಂದಿನ ಪರಿಸ್ಥಿತಿ ಊಹಿಸಲೂ ಸಾಧ್ಯವಾಗೋದಿಲ್ಲ.

ಇದನ್ನೂ ಓದಿ: ಹೈದರಾಬಾದ್​ ಮೃಗಾಲಯದಲ್ಲಿರುವ 8 ಸಿಂಹಗಳಿಗೆ ಕೊರೊನಾ ಸೋಂಕು; ದೇಶದಲ್ಲೇ ಮೊದಲ ಪ್ರಕರಣ ಇದು

Published On - 7:02 am, Wed, 12 May 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ