AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲೂ ಕಬಂಧ ಬಾಹು ಚಾಚಿದ ಕೊರೊನಾ: ಗಡಿ ಪ್ರದೇಶ ವ್ಯಾಪ್ತಿಯಲ್ಲೂ ಹೈ ಅಲರ್ಟ್

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಇಡೀ ಚೀನಾ ದೇಶವನ್ನೇ ಹುರಿದು ಮುಕ್ಕುತ್ತಿದೆ. 300ಕ್ಕೂ ಹೆಚ್ಚು ಅಮಾಯಕರನ್ನು ಬಲಿಪಡೆದು ಸಾವಿನ ಕೇಕೆ ಹಾಕುತ್ತಿದೆ. ಸಾಲ್ದು ಅಂತಾ ಇಡೀ ಜಗತ್ತನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದ್ದು, ಭಾರತಕ್ಕೂ ಎಂಟ್ರಿ ಕೊಟ್ಟಿದೆ. ಆದ್ರೆ, ಆ ಡೆಡ್ಲಿ ವೈರಸ್ ರಾಜ್ಯಕ್ಕೆ ಬರದಂತೆ ನೋಡಿಕೊಳ್ಳಲು ಕಟ್ಟೆಚ್ಚರ ವಹಿಸಲಾಗಿದೆ. ಹೆಚ್ಚಿದ ಕೊರೊನಾ ಭೀತಿ.. ಹುಬ್ಬಳ್ಳಿಯಲ್ಲಿ ಹೈ ಅಲರ್ಟ್..! ಹುಬ್ಬಳ್ಳಿಯ ಕೇಶ್ವಾಪುರ ನಿವಾಸಿ ಸಂದೀಪ್ ತೇಳಸಂಗದ್ ಚೀನಾದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ರು. ಆದ್ರೆ, ಜನವರಿ 18 ರಂದು ಹುಬ್ಬಳ್ಳಿಗೆ ಬಂದಿದ್ರು. […]

ಕೇರಳದಲ್ಲೂ ಕಬಂಧ ಬಾಹು ಚಾಚಿದ ಕೊರೊನಾ: ಗಡಿ ಪ್ರದೇಶ ವ್ಯಾಪ್ತಿಯಲ್ಲೂ ಹೈ ಅಲರ್ಟ್
Follow us
ಸಾಧು ಶ್ರೀನಾಥ್​
|

Updated on: Feb 04, 2020 | 7:51 AM

ಹುಬ್ಬಳ್ಳಿ: ಮಹಾಮಾರಿ ಕೊರೊನಾ ಇಡೀ ಚೀನಾ ದೇಶವನ್ನೇ ಹುರಿದು ಮುಕ್ಕುತ್ತಿದೆ. 300ಕ್ಕೂ ಹೆಚ್ಚು ಅಮಾಯಕರನ್ನು ಬಲಿಪಡೆದು ಸಾವಿನ ಕೇಕೆ ಹಾಕುತ್ತಿದೆ. ಸಾಲ್ದು ಅಂತಾ ಇಡೀ ಜಗತ್ತನ್ನೇ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದ್ದು, ಭಾರತಕ್ಕೂ ಎಂಟ್ರಿ ಕೊಟ್ಟಿದೆ. ಆದ್ರೆ, ಆ ಡೆಡ್ಲಿ ವೈರಸ್ ರಾಜ್ಯಕ್ಕೆ ಬರದಂತೆ ನೋಡಿಕೊಳ್ಳಲು ಕಟ್ಟೆಚ್ಚರ ವಹಿಸಲಾಗಿದೆ.

ಹೆಚ್ಚಿದ ಕೊರೊನಾ ಭೀತಿ.. ಹುಬ್ಬಳ್ಳಿಯಲ್ಲಿ ಹೈ ಅಲರ್ಟ್..! ಹುಬ್ಬಳ್ಳಿಯ ಕೇಶ್ವಾಪುರ ನಿವಾಸಿ ಸಂದೀಪ್ ತೇಳಸಂಗದ್ ಚೀನಾದಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ರು. ಆದ್ರೆ, ಜನವರಿ 18 ರಂದು ಹುಬ್ಬಳ್ಳಿಗೆ ಬಂದಿದ್ರು. ಅದೇ ಹೊತ್ತಲ್ಲಿ ಚೀನಾದಲ್ಲಿ ಕೊರೊನಾ ವೈರಸ್ ಮರಣ ಮೃದಂಗ ಬಾರಿಸಲು ಶುರು ಮಾಡಿತ್ತು. ಆದ್ರೆ, 14 ದಿನಗಳ ನಂತ್ರ ಸಂದೀಪ್​ಗೆ ಮೊನ್ನೆ ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡಿದೆ.

ತಕ್ಷಣವೇ ಕುಟುಂಬಸ್ಥರು ಸಂದೀಪ್​ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ರು.‌ ನಂತರ ಧಾರವಾಡ ಡಿಹೆಚ್​ಒ ಮಾರ್ಗದರ್ಶನದ ಮೇಲೆ ಕಿಮ್ಸ್​ನ ಸ್ಪೆಷಲ್‌ ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗ್ತಿದೆ. ಅಲ್ದೆ ಸಂದೀಪ್ ರಕ್ತದ ಮಾದರಿಯನ್ನ ಮಂಬೈಗೆ ಕಳುಹಿಸಲಾಗಿದ್ದು, ರಿಪೋರ್ಟ್​ ಬಂದ ಮೇಲೆ ಮುಂದಿನ ನಿರ್ಧಾರ ಮಾಡ್ತೇವೆ ಅಂತಾ ವೈದ್ಯರು ಹೇಳಿದ್ದಾರೆ.

ಯಾರನ್ನೂ ವಾರ್ಡ್​ಗೆ ಬಿಡದಂತೆ ನೋಡಿಕೊಳ್ಳಲಾಗುತ್ತಿದೆ. ಈ ಮಧ್ಯೆ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್​ ಘೋಷಿಸಲಾಗಿದ್ದು, ಯಾವುದೇ ಕ್ಷಣದಲ್ಲೂ ವೈದ್ಯರು, ಸಿಬ್ಬಂದಿ ಚಿಕಿತ್ಸೆ ನೀಡಲು ತುರ್ತು ಸೂಚನೆ‌ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟೆಚ್ಚರ..! ಕೇರಳದಲ್ಲಿ ಕೊರೊನಾ ವೈರಸ್ ಎಂಟ್ರಿ ಕೊಟ್ಟಿದೆ. ಹೀಗಾಗಿ, ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆತಂಕ ಮೂಡಿಸಿದೆ. ಕರಾವಳಿಯಲ್ಲಿ ಈವರೆಗೂ ಸೋಂಕು ಬಾಧಿತರು ಕಂಡು ಬರದಿದ್ರೂ, ಕೇರಳದಿಂದ ರೋಗಿಗಳು ಮಂಗಳೂರಿನ ಆಸ್ಪತ್ರೆಗಳಿಗೆ ಬರ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಏರ್​ಪೋರ್ಟ್​, ನವಮಂಗಳೂರು ಬಂದರು, ರೈಲ್ವೆ ಸ್ಟೇಷನ್, ಕೆಎಸ್ಆರ್​ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಜಾಗೃತಿ ನೀಡುವ ಕಾರ್ಯ ನಡೆಯುತ್ತಿದೆ.

ವಿದೇಶದಿಂದ ಬರುವ ಯಾವುದೇ ವ್ಯಕ್ತಿ ಬಗ್ಗೆ ಆರೋಗ್ಯ ಸಂಶಯವಿದ್ದರೆ ತಕ್ಷಣವೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಜನರಲ್ಲಿ ಮನವಿ ಮಾಡಲಾಗಿದೆ. ಇದ್ರ ಜತೆಗೆ ಕೊರೊನಾ ವೈರಸ್ ಬಾಧಿತರು ಕಂಡು ಬಂದಲ್ಲಿ ತಕ್ಷಣ ಚಿಕಿತ್ಸೆಗೆಂದು ವೆನ್ಲಾಕ್ ಆಸ್ಪತ್ರೆಯಲ್ಲಿ ಪ್ರತ್ಯೇಕ 10 ಬೆಡ್​ಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಖಾಸಗಿ ಬೆಡ್​ನಲ್ಲೂ ತಲಾ‌ 5 ಬೆಡ್​ಗಳನ್ನು ಮೀಸಲಿಡಲಾಗಿದ್ದು, ಸಹಾಯವಾಣಿ ನಂಬರ್​ನ್ನೂ ತೆರೆಯಲಾಗಿದೆ. ಒಟ್ನಲ್ಲಿ, ರಾಜ್ಯದಲ್ಲೂ ಕೊರೊನಾ ವೈರಸ್ ಆತಂಕ ಮೂಡಿಸಿದ್ದು, ಹುಬ್ಬಳ್ಳಿ, ಮಂಗಳೂರಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು