AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ಎಲ್ಲರೂ ಬದ್ಧ: ಕೆಎನ್ ರಾಜಣ್ಣ

ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯಕ್ಕೆ ಎಲ್ಲರೂ ಬದ್ಧ: ಕೆಎನ್ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 28, 2025 | 3:57 PM

Share

ಇಕ್ಬಾಲ್ ಹುಸ್ಸೇನ್ ಅವರು ಶಿವಕುಮಾರ್ ಬಣದವರು ಮತ್ತು ರಾಜಣ್ಣ ಅವರು ಸಿದ್ದರಾಮಯ್ಯ ಬಣದವರು ಅಂತ ಕನ್ನಡಿಗರಿಗೆ ಗೊತ್ತಿಲ್ಲದೇನಿಲ್ಲ, ಆದರೆ ಕೆಪಿಸಿಸಿ ಅಧ್ಯಕ್ಷನ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ವಿಷಯ ಪ್ರಸ್ತಾಪವಾದಾಗ ರಾಜಣ್ಣ ತಮ್ಮ ಅಭಿಪ್ರಾಯ ಹೇಳಿದ ಬಳಿಕವೇ ಸುಮ್ಮನಾಗುತ್ತಾರೆ. ಇವತ್ತು ಬೆಳಗ್ಗೆಯಷ್ಟೇ ಕಡೂರು ಶಾಸಕ ಆನಂದ್ ಕೆಎಸ್ ರಾಜಣ್ಣನ ಧೋರಣೆ ಖಂಡಿಸಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಶಾಸಕರ ಬೆಂಬಲ ಇರಲೇಬೇಕು ಅಂತೇನಿಲ್ಲ, ಹೈಕಮಾಂಡ್ ಹೇಳಿದರೆ ಸಾಕು ಎಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಹಕಾರ ಸಚಿವ ಕೆಎನ್ ರಾಜಣ್ಣ, ಶಾಸಕಾಂಗ ಪಕ್ಷದ ನಿರ್ಧಾರವನ್ನು ಪಡೆದೇ ಹೈಕಮಾಂಡ್ ನಿರ್ಣಯಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ವರಿಷ್ಠರು ಯಾವತ್ತೂ ಏಕಪಕ್ಷೀಯ ನಿರ್ಣಯಗಳಮ್ಮು ತೆಗೆದುಕೊಳ್ಳಲ್ಲ, ಶಾಸಕರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಾರೆ, ಅವರು ತೆಗೆದುಕೊಳ್ಳುವ ಅಂತಿಮ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ರಾಜಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ!