ದೆಹಲಿಯಲ್ಲಿಂದು ಸಭೆಗೆ ಹಾಜರಾಗುವಂತೆ ಹೈಕಮಾಂಡ್​ನಿಂದ ಬುಲಾವ್ ಬಂದಿರೋದಷ್ಟೇ ಗೊತ್ತು, ವಿಷಯವೇನು ಅಂತ ಗೊತ್ತಿಲ್ಲ: ಕೆಎಸ್ ಈಶ್ವರಪ್ಪ

ವಿರೋಧ ಪಕ್ಷದ ಮತ್ತು ಪಕ್ಷದ ರಾಜ್ಯಾಧ್ಯಕ್ಷನ ಅಯ್ಕೆ ಬಗ್ಗೆ ಮಾತುಕತೆ ನಡೆಯಲಿದೆಯಾ ಅಂತ ಕೇಳಿದಾಗ ಅದ್ಯಾವುದೂ ಗೊತ್ತಿಲ್ಲ, ಆದರೆ ಸಭೆ ಮುಗಿದ ಕೂಡಲೇ ವಿವರಗಳನ್ನು ನೀಡುವುದಾಗಿ ಈಶ್ವರಪ್ಪ ಹೇಳಿದರು. ಕಳೆದ ವಾರ ಸಂಸದ ಡಿವಿ ಸದಾನಂದ ಗೌಡ ಆವರನ್ನು ದೆಹಲಿಗೆ ಕರೆಸಲಾಗಿತ್ತು. ಆದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸದಾನಂದ ಗೌಡರನ್ನು ಭೇಟಿ ಮಾಡದೆ ವಾಪಸ್ಸು ಕಳಿಸಿದ್ದರು.

ದೆಹಲಿಯಲ್ಲಿಂದು ಸಭೆಗೆ ಹಾಜರಾಗುವಂತೆ ಹೈಕಮಾಂಡ್​ನಿಂದ ಬುಲಾವ್ ಬಂದಿರೋದಷ್ಟೇ ಗೊತ್ತು, ವಿಷಯವೇನು ಅಂತ ಗೊತ್ತಿಲ್ಲ: ಕೆಎಸ್ ಈಶ್ವರಪ್ಪ
|

Updated on:Nov 02, 2023 | 12:33 PM

ಬೆಂಗಳೂರು: ಬಿಜೆಪಿ ವರಿಷ್ಠರಿಗೆ ತಮ್ಮ ಪಕ್ಷದ ಕರ್ನಾಟಕ ನಾಯಕರೊಂದಿಗೆ ಮಾತಾಡಬೇಕು ಅಂತ ಈಗ ಅನಿಸಿರುವಂತಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa), ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಮತ್ತು ಸಂಸದ ಪಿಸಿ ಮೋಹನ್ (PC Mohan, MP)-ಮೂವರಿಗೆ ಇಂದು ಮಧ್ಯಾಹ್ನ ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವಂತೆ ಬುಲಾವ್ ಬಂದಿದ್ದು ಅದರಲ್ಲಿ ಪಾಲ್ಗೊಳ್ಳಲು ಈಶ್ವರಪ್ಪ ಹೊರಟಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ದೆಹಲಿ ವಿಮಾನ ಹತ್ತುವ ಮೊದಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಭೆಗೆ ಬರುವಂತೆ ಮಾತ್ರ ತಿಳಿಸಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಮತ್ತು ಪಕ್ಷದ ರಾಜ್ಯಾಧ್ಯಕ್ಷನ ಅಯ್ಕೆ ಬಗ್ಗೆ ಮಾತುಕತೆ ನಡೆಯಲಿದೆಯಾ ಅಂತ ಕೇಳಿದಾಗ ಅದ್ಯಾವುದೂ ಗೊತ್ತಿಲ್ಲ, ಆದರೆ ಸಭೆ ಮುಗಿದ ಕೂಡಲೇ ವಿವರಗಳನ್ನು ನೀಡುವುದಾಗಿ ಈಶ್ವರಪ್ಪ ಹೇಳಿದರು. ನಿಮಗೆ ನೆನಪಿರಬಹುದು, ಕಳೆದ ವಾರ ಸಂಸದ ಡಿವಿ ಸದಾನಂದ ಗೌಡ ಆವರನ್ನು ದೆಹಲಿಗೆ ಕರೆಸಲಾಗಿತ್ತು. ಆದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸದಾನಂದ ಗೌಡರನ್ನು ಭೇಟಿ ಮಾಡದೆ ವಾಪಸ್ಸು ಕಳಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Thu, 2 November 23

Follow us
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ