ದೆಹಲಿಯಲ್ಲಿಂದು ಸಭೆಗೆ ಹಾಜರಾಗುವಂತೆ ಹೈಕಮಾಂಡ್​ನಿಂದ ಬುಲಾವ್ ಬಂದಿರೋದಷ್ಟೇ ಗೊತ್ತು, ವಿಷಯವೇನು ಅಂತ ಗೊತ್ತಿಲ್ಲ: ಕೆಎಸ್ ಈಶ್ವರಪ್ಪ

Updated on: Nov 02, 2023 | 12:33 PM

ವಿರೋಧ ಪಕ್ಷದ ಮತ್ತು ಪಕ್ಷದ ರಾಜ್ಯಾಧ್ಯಕ್ಷನ ಅಯ್ಕೆ ಬಗ್ಗೆ ಮಾತುಕತೆ ನಡೆಯಲಿದೆಯಾ ಅಂತ ಕೇಳಿದಾಗ ಅದ್ಯಾವುದೂ ಗೊತ್ತಿಲ್ಲ, ಆದರೆ ಸಭೆ ಮುಗಿದ ಕೂಡಲೇ ವಿವರಗಳನ್ನು ನೀಡುವುದಾಗಿ ಈಶ್ವರಪ್ಪ ಹೇಳಿದರು. ಕಳೆದ ವಾರ ಸಂಸದ ಡಿವಿ ಸದಾನಂದ ಗೌಡ ಆವರನ್ನು ದೆಹಲಿಗೆ ಕರೆಸಲಾಗಿತ್ತು. ಆದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸದಾನಂದ ಗೌಡರನ್ನು ಭೇಟಿ ಮಾಡದೆ ವಾಪಸ್ಸು ಕಳಿಸಿದ್ದರು.

ಬೆಂಗಳೂರು: ಬಿಜೆಪಿ ವರಿಷ್ಠರಿಗೆ ತಮ್ಮ ಪಕ್ಷದ ಕರ್ನಾಟಕ ನಾಯಕರೊಂದಿಗೆ ಮಾತಾಡಬೇಕು ಅಂತ ಈಗ ಅನಿಸಿರುವಂತಿದೆ. ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa), ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಮತ್ತು ಸಂಸದ ಪಿಸಿ ಮೋಹನ್ (PC Mohan, MP)-ಮೂವರಿಗೆ ಇಂದು ಮಧ್ಯಾಹ್ನ ದೆಹಲಿಯಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವಂತೆ ಬುಲಾವ್ ಬಂದಿದ್ದು ಅದರಲ್ಲಿ ಪಾಲ್ಗೊಳ್ಳಲು ಈಶ್ವರಪ್ಪ ಹೊರಟಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ದೆಹಲಿ ವಿಮಾನ ಹತ್ತುವ ಮೊದಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಭೆಗೆ ಬರುವಂತೆ ಮಾತ್ರ ತಿಳಿಸಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಮತ್ತು ಪಕ್ಷದ ರಾಜ್ಯಾಧ್ಯಕ್ಷನ ಅಯ್ಕೆ ಬಗ್ಗೆ ಮಾತುಕತೆ ನಡೆಯಲಿದೆಯಾ ಅಂತ ಕೇಳಿದಾಗ ಅದ್ಯಾವುದೂ ಗೊತ್ತಿಲ್ಲ, ಆದರೆ ಸಭೆ ಮುಗಿದ ಕೂಡಲೇ ವಿವರಗಳನ್ನು ನೀಡುವುದಾಗಿ ಈಶ್ವರಪ್ಪ ಹೇಳಿದರು. ನಿಮಗೆ ನೆನಪಿರಬಹುದು, ಕಳೆದ ವಾರ ಸಂಸದ ಡಿವಿ ಸದಾನಂದ ಗೌಡ ಆವರನ್ನು ದೆಹಲಿಗೆ ಕರೆಸಲಾಗಿತ್ತು. ಆದರೆ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸದಾನಂದ ಗೌಡರನ್ನು ಭೇಟಿ ಮಾಡದೆ ವಾಪಸ್ಸು ಕಳಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 02, 2023 12:32 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More