AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ

ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತ ಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 10:10 PM

Share

ಬೆಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್​ ಚಾಲಕನಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

‌ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು. ಈ ಬಗ್ಗೆ ಎನ್ಇಕೆಆರ್​ಟಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ ಯಾದವ್, ಪಿ.ಎನ್.ದೇಸಾಯಿರವರಿದ್ದ ಪೀಠ ವಜಾಗೊಳಿಸಿತು.

ಈ ಮೂಲಕ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿಯಿತು. ಬಸ್​ ಚಾಲಕನಿಗೆ ಕಾರ್ಯಭಾರದ ಒತ್ತಡದಿಂದ ಹೃದಯಾಘಾತವಾದ ಸಾಧ್ಯತೆ ಇದೆ. ಹೀಗಾಗಿ, ಅವರ ಕುಟುಂಬ ಪರಿಹಾರ ಪಡೆಯಲು ಅರ್ಹವಾಗಿದೆ ಎಂದು ಕೋರ್ಟ್​ ಹೇಳಿದೆ.

ಕಬ್ಬನ್ ಪಾರ್ಕ್ ಒಳಾಂಗಣದಲ್ಲಿ ವಾಹನಗಳ ಓಡಾಟ ನಿಷೇಧಿಸಿ: 5 ತಿಂಗಳ ಮಗುವಿನಿಂದ ಹೈಕೋರ್ಟ್​ಗೆ ಅರ್ಜಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ