ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ

ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತ ಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು.

ಹೃದಯಾಘಾತದಿಂದ ಮೃತಪಟ್ಟರೂ ಬಸ್​ ಚಾಲಕನಿಗೆ ಪರಿಹಾರ; ಹೈಕೋರ್ಟ್​ ಮಹತ್ವದ ಆದೇಶ
ಸಾಂಕೇತಿಕ ಚಿತ್ರ
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 28, 2020 | 10:10 PM

ಬೆಂಗಳೂರು: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್​ ಚಾಲಕನಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ನೀಡಿದೆ.

‌ಎನ್ಇಕೆಆರ್​ಟಿಸಿ ಚಾಲಕ ವಿಜಯಕುಮಾರ್​​ ಸತತ 11 ಗಂಟೆ ಕರ್ತವ್ಯ ನಿರ್ವಹಣೆ ಮಾಡಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೃದಯಾಘಾತ ಕೂಡ ಅಪಘಾತವೆಂದು ಪರಿಗಣಿಸಿ 21,98,090 ರೂಪಾಯಿ ಪರಿಹಾರಕ್ಕೆ ಕಾರ್ಮಿಕ ಆಯುಕ್ತರು ಆದೇಶಿಸಿದ್ದರು. ಈ ಬಗ್ಗೆ ಎನ್ಇಕೆಆರ್​ಟಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಸುನಿಲ್ ದತ್ ಯಾದವ್, ಪಿ.ಎನ್.ದೇಸಾಯಿರವರಿದ್ದ ಪೀಠ ವಜಾಗೊಳಿಸಿತು.

ಈ ಮೂಲಕ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿಯಿತು. ಬಸ್​ ಚಾಲಕನಿಗೆ ಕಾರ್ಯಭಾರದ ಒತ್ತಡದಿಂದ ಹೃದಯಾಘಾತವಾದ ಸಾಧ್ಯತೆ ಇದೆ. ಹೀಗಾಗಿ, ಅವರ ಕುಟುಂಬ ಪರಿಹಾರ ಪಡೆಯಲು ಅರ್ಹವಾಗಿದೆ ಎಂದು ಕೋರ್ಟ್​ ಹೇಳಿದೆ.

ಕಬ್ಬನ್ ಪಾರ್ಕ್ ಒಳಾಂಗಣದಲ್ಲಿ ವಾಹನಗಳ ಓಡಾಟ ನಿಷೇಧಿಸಿ: 5 ತಿಂಗಳ ಮಗುವಿನಿಂದ ಹೈಕೋರ್ಟ್​ಗೆ ಅರ್ಜಿ