AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಪಿಐಎಲ್​ಗಳ ವಿಚಾರಣೆ

ಸಮಯದ ಅಭಾವದಿಂದ ವಿಚಾರಣೆ ಮುಂದೂಡುತ್ತಿರುವುದಾಗಿ ಹೈಕೋರ್ಟ್ ಹೇಳಿತು. ತನ್ನ ವಾದವನ್ನೂ ಆಲಿಸಬೇಕೆಂದು ಯುವತಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯೂ ಮುಂದೂಡಿಕೆಯಾಗಿದೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಪಿಐಎಲ್​ಗಳ ವಿಚಾರಣೆ
ಕರ್ನಾಟಕ ಹೈಕೋರ್ಟ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jun 23, 2021 | 6:00 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆಯನ್ನು ಹೈಕೋರ್ಟ್ ಜೂನ್ 25ಕ್ಕೆ ಮುಂದೂಡಿದೆ. ಸಮಯದ ಅಭಾವದಿಂದ ವಿಚಾರಣೆ ಮುಂದೂಡುತ್ತಿರುವುದಾಗಿ ಹೈಕೋರ್ಟ್ ಹೇಳಿತು. ತನ್ನ ವಾದವನ್ನೂ ಆಲಿಸಬೇಕೆಂದು ಯುವತಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯೂ ಮುಂದೂಡಿಕೆಯಾಗಿದೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಜೂನ್ 18ರಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆ ತನ್ನನ್ನೂ ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ಎಸ್ಐಟಿ ತನಿಖೆ ಪ್ರಶ್ನಿಸಿ ಯುವತಿ ರಿಟ್ ಸಲ್ಲಿಸಿದ್ದರು. ಆ ಅರ್ಜಿಯನ್ನೂ ಪಿಐಎಲ್​​ನೊಂದಿಗೆ ವಿಚಾರಣೆ ನಡೆಸಿ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು. ಹೈಕೋರ್ಟ್ ಉಸ್ತುವಾರಿಯಲ್ಲಿದ್ದಾಗ ತನಿಖೆ ಮುಗಿಸಬಾರದು ಎಂದು ಯುವತಿ ಪರ ವಕೀಲರು ಹೈಕೋರ್ಟ್​​ಗೆ ಮನವಿ ಮಾಡಿದ್ದರು. ತನಿಖೆ ಮುಕ್ತಾಯಗೊಂಡಿಲ್ಲ. ತನಿಖೆಯ ಪ್ರಗತಿ ವರದಿಯನ್ನಷ್ಟೇ ಸಲ್ಲಿಸಲಾಗಿದೆ. ತನಿಖೆಯು ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರತಿಕ್ರಿಯಿಸಿದ್ದರು.

ಇದೀಗ ಯುವತಿಯ ಅರ್ಜಿಯೂ ಸೇರಿದಂತೆ ಇತರೆಲ್ಲ ಅರ್ಜಿಗಳನ್ನು ಹೈಕೋರ್ಟ್ ಜೂನ್ 25ಕ್ಕೆ ಮುಂದೂಡಿದೆ.

(High Court Adjurns Appeal by Lady of Ramesh Jarkiholi CD Case)

ಇದನ್ನೂ ಓದಿ: ಪ್ರತಿ ಪೊಲೀಸ್ ಠಾಣೆಗೆ 2 ಶಬ್ದ ಮಾಪಕ ಅಗತ್ಯ: ಹೈಕೋರ್ಟ್​ಗೆ ಪೊಲೀಸ್ ಇಲಾಖೆ ಮಾಹಿತಿ

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ; ಯುವತಿ ತಂದೆಯ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!