AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಪಿಐಎಲ್​ಗಳ ವಿಚಾರಣೆ

ಸಮಯದ ಅಭಾವದಿಂದ ವಿಚಾರಣೆ ಮುಂದೂಡುತ್ತಿರುವುದಾಗಿ ಹೈಕೋರ್ಟ್ ಹೇಳಿತು. ತನ್ನ ವಾದವನ್ನೂ ಆಲಿಸಬೇಕೆಂದು ಯುವತಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯೂ ಮುಂದೂಡಿಕೆಯಾಗಿದೆ.

ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ: ಪಿಐಎಲ್​ಗಳ ವಿಚಾರಣೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Jun 23, 2021 | 6:00 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆಯನ್ನು ಹೈಕೋರ್ಟ್ ಜೂನ್ 25ಕ್ಕೆ ಮುಂದೂಡಿದೆ. ಸಮಯದ ಅಭಾವದಿಂದ ವಿಚಾರಣೆ ಮುಂದೂಡುತ್ತಿರುವುದಾಗಿ ಹೈಕೋರ್ಟ್ ಹೇಳಿತು. ತನ್ನ ವಾದವನ್ನೂ ಆಲಿಸಬೇಕೆಂದು ಯುವತಿ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯೂ ಮುಂದೂಡಿಕೆಯಾಗಿದೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಜೂನ್ 18ರಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆ ತನ್ನನ್ನೂ ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ಎಸ್ಐಟಿ ತನಿಖೆ ಪ್ರಶ್ನಿಸಿ ಯುವತಿ ರಿಟ್ ಸಲ್ಲಿಸಿದ್ದರು. ಆ ಅರ್ಜಿಯನ್ನೂ ಪಿಐಎಲ್​​ನೊಂದಿಗೆ ವಿಚಾರಣೆ ನಡೆಸಿ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು. ಹೈಕೋರ್ಟ್ ಉಸ್ತುವಾರಿಯಲ್ಲಿದ್ದಾಗ ತನಿಖೆ ಮುಗಿಸಬಾರದು ಎಂದು ಯುವತಿ ಪರ ವಕೀಲರು ಹೈಕೋರ್ಟ್​​ಗೆ ಮನವಿ ಮಾಡಿದ್ದರು. ತನಿಖೆ ಮುಕ್ತಾಯಗೊಂಡಿಲ್ಲ. ತನಿಖೆಯ ಪ್ರಗತಿ ವರದಿಯನ್ನಷ್ಟೇ ಸಲ್ಲಿಸಲಾಗಿದೆ. ತನಿಖೆಯು ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರತಿಕ್ರಿಯಿಸಿದ್ದರು.

ಇದೀಗ ಯುವತಿಯ ಅರ್ಜಿಯೂ ಸೇರಿದಂತೆ ಇತರೆಲ್ಲ ಅರ್ಜಿಗಳನ್ನು ಹೈಕೋರ್ಟ್ ಜೂನ್ 25ಕ್ಕೆ ಮುಂದೂಡಿದೆ.

(High Court Adjurns Appeal by Lady of Ramesh Jarkiholi CD Case)

ಇದನ್ನೂ ಓದಿ: ಪ್ರತಿ ಪೊಲೀಸ್ ಠಾಣೆಗೆ 2 ಶಬ್ದ ಮಾಪಕ ಅಗತ್ಯ: ಹೈಕೋರ್ಟ್​ಗೆ ಪೊಲೀಸ್ ಇಲಾಖೆ ಮಾಹಿತಿ

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ; ಯುವತಿ ತಂದೆಯ ರಿಟ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ