AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಕೋರ್ಟ್​ ಪ್ರವೇಶ ಮಾಡಿದೆ. 3-4 ಎಫ್​ಐಆರ್​ಗಳನ್ನು ದಾಖಲಿಸಿಕೊಂಡು, ಅನುಮಾನದ ಮೇಲೆ ಹತ್ತಾರು ಮಂದಿಯನ್ನು ವಿಚಾರಣೆಗೆ ಕರೆಸುತ್ತಿರುವ ಪ್ರಕರಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್​ ಬಿಸಿ ಮುಟ್ಟಿಸಿದೆ.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ
ಕರ್ನಾಟಕ ಹೈಕೋರ್ಟ್
KUSHAL V
|

Updated on:Mar 19, 2021 | 6:09 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಕೋರ್ಟ್​ ಪ್ರವೇಶ ಮಾಡಿದೆ. 3-4 ಎಫ್​ಐಆರ್​ಗಳನ್ನು ದಾಖಲಿಸಿಕೊಂಡು, ಅನುಮಾನದ ಮೇಲೆ ಹತ್ತಾರು ಮಂದಿಯನ್ನು ವಿಚಾರಣೆಗೆ ಕರೆಸುತ್ತಿರುವ ಪ್ರಕರಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್​ ಬಿಸಿ ಮುಟ್ಟಿಸಿದೆ. ಅಂತೆಯೇ, ಈ ಹಿಂದೆ, ಪ್ರಕರಣ ಸಂಬಂಧ ಆರೋಪಿಯೊಬ್ಬರ ಸಹೋದರನನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರಂತೆ. ಈ ಹಿನ್ನೆಲೆಯಲ್ಲಿ, ಆತನ ಪೋಷಕರು ತಮ್ಮ ಪುತ್ರ ಕಾಣೆಯಾಗಿದ್ದಾನೆ, ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆಲಿಸಿದ ನ್ಯಾಯಪೀಠವು ನಾಳೆ ಬೆಳಗ್ಗೆ 10.30ಕ್ಕೆ ಚೇತನ್​ ಎಂಬ ಯುವಕನನ್ನು ಕೋರ್ಟ್​​ ಎದುರು ಹಾಜರುಪಡಿಸಿ ಎಂದು ಸೂಚಿಸಿದೆ.

ಪ್ರಕರಣದ ಆರೋಪಿಯಾದ ಶ್ರವಣ್​ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಆತನ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಆತನ ಸಹೋದರ ಚೇತನ್​ರನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಆದರೆ, ಆತ ಹಾಗೂ ಆರೋಪಿ ಶ್ರವಣ್ ಅವರ​ ತಂದೆ ಈ ಕುರಿತು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್​ ವಿಚಾರಣೆ ನಡೆಸಿದೆ.

ಈ ವೇಳೆ, ಮಾರ್ಚ್​ 16ರಿಂದ ನನ್ನ ಪುತ್ರ ಚೇತನ್ ನಾಪತ್ತೆಯಾಗಿದ್ದಾರೆ. ಚೇತನ್​ನನ್ನು ಪೊಲೀಸರು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಕಬ್ಬನ್​ ಪಾರ್ಕ್​ ಠಾಣೆಗೆ ಹೋಗಿದ್ದ ಚೇತನ್​ ಮಾರ್ಚ್​ 16ರಿಂದ ಮರಳಿ ಬಂದಿಲ್ಲವೆಂದು ಯುವಕನ ತಂದೆ ಸೂರ್ಯಕುಮಾರ್​ ಪರ ವಕೀಲರು ತಮ್ಮ ವಾದ ಮಂಡಿಸಿದರು. ಇದಕ್ಕೆ, ಚೇತನ್​ ಎಲ್ಲಿದ್ದಾನೆ ಎಂದು ಹೈಕೋರ್ಟ್​ ಸರ್ಕಾರಿ ವಕೀಲರಿಗೆ ಪ್ರಶ್ನಿಸಿತು.

ಚೇತನ್ ಅವರ ಹೇಳಿಕೆ ಪಡೆಯಲು ಆತನನ್ನು ಠಾಣೆಗೆ ಕರೆಸಲಾಗಿತ್ತು. ಮಾರ್ಚ್​ 18ರಂದು ಚೇತನ್​ ವಿಚಾರಣೆಗೆ ಬಂದಿದ್ದ. ಈ ವೇಳೆ, ಮತ್ತೆ, ಮಾರ್ಚ್​ 20ರಂದು ಹಾಜರಾಗುವಂತೆ ಸೂಚಿಸಲಾಗಿತ್ತು. ಚೇತನ್​ರನ್ನು ನಾವು ಬಂಧಿಸಿಲ್ಲ ಎಂದು ಸರ್ಕಾರಿ ವಕೀಲರು ಪೀಠಕ್ಕೆ ತಿಳಿಸಿದರು. ಇದಲ್ಲದೆ, ಅವರ ಆಂಟಿ ಅಂಬುಜಾಕ್ಷಿಯವರ ಜೊತೆ ಕಳಿಸಲಾಗಿದೆ. ಆತ ಅಕ್ರಮ ಬಂಧನದಲ್ಲಿ ಇಲ್ಲ ಎಂದು ಸರ್ಕಾರಿ ವಕೀಲರು ಕೋರ್ಟ್​ಗೆ ತಿಳಿಸಿದರು. ನೋಟಿಸ್​ನಲ್ಲಿ ಸೂಚಿಸಿದ ಹಾಗೆ, ಆತ ಮಾ. 15, 16,18 ರಂದು ಹಾಜರಾಗಿದ್ದ. ಈ ಕುರಿತು, ಪ್ರಮಾಣ ಪತ್ರ ಸಲ್ಲಿಸುವುದಾಗಿ ವಕೀಲರು ತಿಳಿಸಿದರು.

ಅಂತಿಮವಾಗಿ, ನಾಳೆ ಬೆಳಗ್ಗೆ 10.30ಕ್ಕೆ ಚೇತನ್​ರನ್ನು ಹೈಕೋರ್ಟ್​ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ. ನ್ಯಾ.ಬಿ.ವಿ.ನಾಗರತ್ನ, ನ್ಯಾ.ಸಂಜಯ್ ಗೌಡರವರಿದ್ದ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸೂತ್ರಧಾರಿಗಳ ಹೆಸರು ಬಹಿರಂಗವಾಗುವ ಸಾಧ್ಯತೆ, ನಾಳೆ ಪ್ರತ್ಯಕ್ಷವಾಗಲಿದ್ದಾರಾ ಯುವತಿ ಪೋಷಕರು?

Published On - 6:01 pm, Fri, 19 March 21

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್