AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ

ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಕೋರ್ಟ್​ ಪ್ರವೇಶ ಮಾಡಿದೆ. 3-4 ಎಫ್​ಐಆರ್​ಗಳನ್ನು ದಾಖಲಿಸಿಕೊಂಡು, ಅನುಮಾನದ ಮೇಲೆ ಹತ್ತಾರು ಮಂದಿಯನ್ನು ವಿಚಾರಣೆಗೆ ಕರೆಸುತ್ತಿರುವ ಪ್ರಕರಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್​ ಬಿಸಿ ಮುಟ್ಟಿಸಿದೆ.

ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕೋರ್ಟ್, ಯುವಕನನ್ನು ಶನಿವಾರ ಹಾಜರು ಪಡಿಸುವಂತೆ ಆದೇಶ
ಕರ್ನಾಟಕ ಹೈಕೋರ್ಟ್
KUSHAL V
|

Updated on:Mar 19, 2021 | 6:09 PM

Share

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಕೋರ್ಟ್​ ಪ್ರವೇಶ ಮಾಡಿದೆ. 3-4 ಎಫ್​ಐಆರ್​ಗಳನ್ನು ದಾಖಲಿಸಿಕೊಂಡು, ಅನುಮಾನದ ಮೇಲೆ ಹತ್ತಾರು ಮಂದಿಯನ್ನು ವಿಚಾರಣೆಗೆ ಕರೆಸುತ್ತಿರುವ ಪ್ರಕರಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್​ ಬಿಸಿ ಮುಟ್ಟಿಸಿದೆ. ಅಂತೆಯೇ, ಈ ಹಿಂದೆ, ಪ್ರಕರಣ ಸಂಬಂಧ ಆರೋಪಿಯೊಬ್ಬರ ಸಹೋದರನನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರಂತೆ. ಈ ಹಿನ್ನೆಲೆಯಲ್ಲಿ, ಆತನ ಪೋಷಕರು ತಮ್ಮ ಪುತ್ರ ಕಾಣೆಯಾಗಿದ್ದಾನೆ, ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಆಲಿಸಿದ ನ್ಯಾಯಪೀಠವು ನಾಳೆ ಬೆಳಗ್ಗೆ 10.30ಕ್ಕೆ ಚೇತನ್​ ಎಂಬ ಯುವಕನನ್ನು ಕೋರ್ಟ್​​ ಎದುರು ಹಾಜರುಪಡಿಸಿ ಎಂದು ಸೂಚಿಸಿದೆ.

ಪ್ರಕರಣದ ಆರೋಪಿಯಾದ ಶ್ರವಣ್​ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಆತನ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಆತನ ಸಹೋದರ ಚೇತನ್​ರನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಆದರೆ, ಆತ ಹಾಗೂ ಆರೋಪಿ ಶ್ರವಣ್ ಅವರ​ ತಂದೆ ಈ ಕುರಿತು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್​ ವಿಚಾರಣೆ ನಡೆಸಿದೆ.

ಈ ವೇಳೆ, ಮಾರ್ಚ್​ 16ರಿಂದ ನನ್ನ ಪುತ್ರ ಚೇತನ್ ನಾಪತ್ತೆಯಾಗಿದ್ದಾರೆ. ಚೇತನ್​ನನ್ನು ಪೊಲೀಸರು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ. ಕಬ್ಬನ್​ ಪಾರ್ಕ್​ ಠಾಣೆಗೆ ಹೋಗಿದ್ದ ಚೇತನ್​ ಮಾರ್ಚ್​ 16ರಿಂದ ಮರಳಿ ಬಂದಿಲ್ಲವೆಂದು ಯುವಕನ ತಂದೆ ಸೂರ್ಯಕುಮಾರ್​ ಪರ ವಕೀಲರು ತಮ್ಮ ವಾದ ಮಂಡಿಸಿದರು. ಇದಕ್ಕೆ, ಚೇತನ್​ ಎಲ್ಲಿದ್ದಾನೆ ಎಂದು ಹೈಕೋರ್ಟ್​ ಸರ್ಕಾರಿ ವಕೀಲರಿಗೆ ಪ್ರಶ್ನಿಸಿತು.

ಚೇತನ್ ಅವರ ಹೇಳಿಕೆ ಪಡೆಯಲು ಆತನನ್ನು ಠಾಣೆಗೆ ಕರೆಸಲಾಗಿತ್ತು. ಮಾರ್ಚ್​ 18ರಂದು ಚೇತನ್​ ವಿಚಾರಣೆಗೆ ಬಂದಿದ್ದ. ಈ ವೇಳೆ, ಮತ್ತೆ, ಮಾರ್ಚ್​ 20ರಂದು ಹಾಜರಾಗುವಂತೆ ಸೂಚಿಸಲಾಗಿತ್ತು. ಚೇತನ್​ರನ್ನು ನಾವು ಬಂಧಿಸಿಲ್ಲ ಎಂದು ಸರ್ಕಾರಿ ವಕೀಲರು ಪೀಠಕ್ಕೆ ತಿಳಿಸಿದರು. ಇದಲ್ಲದೆ, ಅವರ ಆಂಟಿ ಅಂಬುಜಾಕ್ಷಿಯವರ ಜೊತೆ ಕಳಿಸಲಾಗಿದೆ. ಆತ ಅಕ್ರಮ ಬಂಧನದಲ್ಲಿ ಇಲ್ಲ ಎಂದು ಸರ್ಕಾರಿ ವಕೀಲರು ಕೋರ್ಟ್​ಗೆ ತಿಳಿಸಿದರು. ನೋಟಿಸ್​ನಲ್ಲಿ ಸೂಚಿಸಿದ ಹಾಗೆ, ಆತ ಮಾ. 15, 16,18 ರಂದು ಹಾಜರಾಗಿದ್ದ. ಈ ಕುರಿತು, ಪ್ರಮಾಣ ಪತ್ರ ಸಲ್ಲಿಸುವುದಾಗಿ ವಕೀಲರು ತಿಳಿಸಿದರು.

ಅಂತಿಮವಾಗಿ, ನಾಳೆ ಬೆಳಗ್ಗೆ 10.30ಕ್ಕೆ ಚೇತನ್​ರನ್ನು ಹೈಕೋರ್ಟ್​ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದೆ. ನ್ಯಾ.ಬಿ.ವಿ.ನಾಗರತ್ನ, ನ್ಯಾ.ಸಂಜಯ್ ಗೌಡರವರಿದ್ದ ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸೂತ್ರಧಾರಿಗಳ ಹೆಸರು ಬಹಿರಂಗವಾಗುವ ಸಾಧ್ಯತೆ, ನಾಳೆ ಪ್ರತ್ಯಕ್ಷವಾಗಲಿದ್ದಾರಾ ಯುವತಿ ಪೋಷಕರು?

Published On - 6:01 pm, Fri, 19 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ