AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ

ನಿರ್ಲಕ್ಷಿತ ಹಿರಿಯ ನಾಗರಿಕರ ಆರೈಕೆ ಮತ್ತು ರಕ್ಷಣೆಗಾಗಿ ಸಮಗ್ರ ಕಾಯ್ದೆ ರೂಪಿಸಲು ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಅಸಹಾಯಕ ವೃದ್ಧರಿಗೆ 24 ಗಂಟೆಗಳ ತುರ್ತು ಸ್ಪಂದನೆ, ಸಹಾಯವಾಣಿ, ತಾತ್ಕಾಲಿಕ ಆಶ್ರಯ ತಾಣಗಳು, ಸಮಗ್ರ ಆರೋಗ್ಯ ಸೇವೆಗಳು, ಮಾನಸಿಕ ಸಮಾಲೋಚನೆ ಮತ್ತು ಕಾನೂನು ನೆರವು ಒದಗಿಸುವ ಅಂಶಗಳನ್ನು ಈ ಕಾಯ್ದೆ ಒಳಗೊಂಡಿರಬೇಕು ಎಂದು ಪೀಠ ಸೂಚಿಸಿದೆ.

ನಿರ್ಲಕ್ಷಿತ ವೃದ್ಧರ ರಕ್ಷಣೆಗೆ ಹೊಸ ಕಾಯ್ದೆ: 24/7 ಸೇವೆ, ಆಶ್ರಯ ತಾಣಗಳಿಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಹೈಕೋರ್ಟ್ Image Credit source: Getty images
Ramesha M
| Edited By: |

Updated on: Jul 24, 2026 | 8:02 PM

Share

ಬೆಂಗಳೂರು, ಜುಲೈ 24: ರಾಜ್ಯದಲ್ಲಿ ಆಶ್ರಯವಿಲ್ಲದೆ ನಿರ್ಲಕ್ಷಿಸಲ್ಪಟ್ಟ ಹಾಗೂ ವಿವಿಧ ರೀತಿಯ ಶೋಷಣೆಗೆ ಒಳಗಾಗಿರುವ ಅಸಹಾಯಕ ಹಿರಿಯ ನಾಗರಿಕರ (Senior Citizen) ರಕ್ಷಣೆ ಮತ್ತು ಆರೈಕೆಗಾಗಿ ‘ಬಾಲ ನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯ್ದೆ’ಯ ಮಾದರಿಯಲ್ಲಿ ಸಮಗ್ರವಾದ ನೂತನ ಕಾಯ್ದೆಯನ್ನು ಜಾರಿಗೆ ತರುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ನಿರ್ದೇಶನ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ.

ಅಸಹಾಯಕ ವೃದ್ಧರಿಗೆ ರಕ್ಷಣೆ, ಆರೈಕೆ ಅಗತ್ಯ

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಶುಕ್ರವಾರ ಆದೇಶ ಹೊರಡಿಸಿದ್ದು, ವೃದ್ಧಾಪ್ಯದಲ್ಲಿ ಸೂಕ್ತ ಆರೈಕೆಯಿಲ್ಲದೆ ಕಷ್ಟಪಡುತ್ತಿರುವ ಪ್ರತಿಯೊಬ್ಬರಿಗೂ ಕಾನೂನಾತ್ಮಕ ಬೆಂಬಲ ಸಿಗಬೇಕು ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ? ಮಕ್ಕಳಿಗೆ ಹಕ್ಕು ಬರುವುದು ಹೇಗೆ? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ

ಆಶ್ರಯವಿಲ್ಲದವರು, ಮಕ್ಕಳಿಲ್ಲದ ವೃದ್ಧರು, ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಆರ್ಥಿಕ ಶೋಷಣೆಗೆ ಒಳಗಾದವರು ಮತ್ತು ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿದ್ದರೂ ಆರೈಕೆ ಸಿಗದ ಅಶಕ್ತ ಹಿರಿಯ ನಾಗರಿಕರನ್ನು ಈ ನೂತನ ಕಾಯ್ದೆಯ ವ್ಯಾಪ್ತಿಗೆ ಸೇರಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

24 ಗಂಟೆಗಳ ತುರ್ತು ಸ್ಪಂದನಾ ವ್ಯವಸ್ಥೆ

ಹಿರಿಯ ನಾಗರಿಕರ ಸುರಕ್ಷತೆಗಾಗಿ ಜಾರಿಗೆ ತರಬೇಕಾದ ಈ ವ್ಯವಸ್ಥೆಯಲ್ಲಿ 24 ಗಂಟೆಗಳ ತುರ್ತು ಸ್ಪಂದನಾ ವ್ಯವಸ್ಥೆ, ಉಚಿತ ಸಹಾಯವಾಣಿ, ತಾತ್ಕಾಲಿಕ ಆಶ್ರಯ ತಾಣಗಳು ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು. ಜೊತೆಗೆ, ಸಮಗ್ರ ವೃದ್ಧಾಪ್ಯ ಆರೋಗ್ಯ ಸೇವೆ, ನರ್ಸಿಂಗ್ ನೆರವು, ಮಾನಸಿಕ ಆರೋಗ್ಯ ಸೇವೆ, ಅಗತ್ಯ ಸಮಾಲೋಚನೆ ಮತ್ತು ಉಚಿತ ಕಾನೂನು ನೆರವಿನ ಅಂಶಗಳನ್ನು ಒಳಗೊಂಡಿರಬೇಕು ಎಂದು ಪೀಠ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಹಿಂದೂ ವಿವಾಹ ಒಪ್ಪಂದವಲ್ಲ, ಪವಿತ್ರ ಸಂಸ್ಕಾರ; ಆಸಕ್ತಿ ಇಲ್ಲ ಎಂದು ಹೇಳಿ ಸಂಗಾತಿಯನ್ನು ತೊರೆಯಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್

ಗ್ಯಾಂಗ್ರಿನ್ ಹಾಗೂ ಇತರೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ವೃದ್ಧೆಯ ಮಗ ಮತ್ತು ಮಗಳು ತಮ್ಮ ತಾಯಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಅತ್ತ ವೈದ್ಯರು ಚಿಕಿತ್ಸೆಯಿಂದ ಚೇತರಿಕೆ ಸಾಧ್ಯವಿಲ್ಲವೆಂದು ಡಿಸ್ಚಾರ್ಜ್ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು