AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಿಂಧು ಆದೇಶಕ್ಕೆ ತಡೆ ಇಲ್ಲ: ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಪ್ರಜ್ವಲ್​ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಕಾರವೆತ್ತಿದೆ.

ಅಸಿಂಧು ಆದೇಶಕ್ಕೆ ತಡೆ ಇಲ್ಲ: ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಪ್ರಜ್ವಲ್ ರೇವಣ್ಣ
ಗಂಗಾಧರ​ ಬ. ಸಾಬೋಜಿ
|

Updated on:Sep 11, 2023 | 5:24 PM

Share

ಬೆಂಗಳೂರು, ಸೆಪ್ಟೆಂಬರ್​ 11: ಪ್ರಜ್ವಲ್ ರೇವಣ್ಣ (Prajwal Revanna) ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆ ಮೂಲಕ ಪ್ರಜ್ವಲ್​ ರೇವಣ್ಣಗೆ ಮಧ್ಯಂತರ ರಿಲೀಫ್ ನೀಡಲು ಹೈಕೋರ್ಟ್ ನಕಾರವೆತ್ತಿದೆ. ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿರುವ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಹೈಕೋರ್ಟ್ ಇತ್ತೀಚೆಗೆ ಅಸಿಂಧುಗೊಳಿಸಿತ್ತು. ಶಾಸಕ ಎ.ಮಂಜು ಹಾಗೂ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ನೀಡಿತ್ತು. ಪ್ರಜ್ವಲ್ ರೇವಣ್ಣ ಚುನಾವಣೆ ವೇಳೆ ಪ್ರಮಾಣಪತ್ರ ಸಲ್ಲಿಸುವಾಗ ಹಲವು ಆಸ್ತಿಗಳ ಮಾಹಿತಿ ಮುಚ್ಚಿಟ್ಟಿದ್ದಾರೆಂದು ಆರೋಪಿಸಲಾಗಿತ್ತು.

ಸತ್ಯಕ್ಕೆ ಸಿಕ್ಕ ಜಯ ಎಂದು ಹೇಳುತ್ತೇನೆ: ವಕೀಲ ದೇವರಾಜೇಗೌಡ

ಹೈಕೋರ್ಟ್‌‌ಗೆ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ ಹಾಸನದಲ್ಲಿ ದೂರುದಾರ ಹಾಗೂ ವಕೀಲ ದೇವರಾಜೇಗೌಡ ಹೇಳಿಕೆ ನೀಡಿದ್ದು, ತೀರ್ಪು ನೀಡಿದ ದಿನವೇ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಬೇಕಿತ್ತು. ತಾಂತ್ರಿಕ ಕಾರಣ ನೀಡಿ ಪ್ರಜ್ವಲ್ 4 ದಿನ ತಡವಾಗಿ ಅರ್ಜಿ ಹಾಕಿದ್ದರು. ಪ್ರಜ್ವಲ್ ಸದಸ್ಯತ್ವ ಅನರ್ಹಗೊಳಿಸುವಂತೆ ಎ.ಮಂಜು ಅರ್ಜಿ ಹಾಕಿದ್ದರು. ಸತ್ಯಕ್ಕೆ ಸಿಕ್ಕ ಜಯ ಎಂದು ಹೇಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಸಿಂಧು ಪ್ರಕರಣ; ವಕೀಲ ದೇವರಾಜೇಗೌಡ ವಿರುದ್ದ ವಂಚನೆ ಆರೋಪ ಮಾಡಿದ ಮೊದಲ ಪತ್ನಿ

ತಡೆಯಾಜ್ಞೆ ಸಿಗುವವರೆಗೂ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ. ಈಗಾಗಲೇ ಸುಪ್ರೀಂಕೋರ್ಟ್​​ನಲ್ಲಿ ಕೇವಿಯೆಟ್ ಫೈಲ್ ಮಾಡಿದ್ದೇನೆ. ನನ್ನ ವಿರುದ್ಧ ಮಾತನಾಡಲು ಒಬ್ಬ ಮಹಿಳೆಯನ್ನು ತಂದು ನಿಲ್ಲಿಸಿದ್ದಾರೆ. ಯಾವುದೇ ಅಡ್ಡದಾರಿಯಲ್ಲಿ ಹೋದರೂ ನಾನು ರಾಜಿಯಾಗುವುದಿಲ್ಲ. ಹೆಚ್​.ಡಿ.ರೇವಣ್ಣ ಕುಟುಂಬವನ್ನು ರಾಜಕೀಯವಾಗಿ ತೆಗೆಯಬೇಕು ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಸರ್ಕಾರಿ ಜಮೀನು ಖರೀದಿಸಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕ ಕನ್ವೆನ್‌ಷನ್ ಸೆಂಟರ್ ಕಟ್ಟಡ ಕನಿಷ್ಟ 5 ಕೋಟಿ ರೂ. ಬೆಲೆ ಬಾಳುತ್ತದೆ ಆದರೆ ಮೌಲ್ಯವನ್ನು 14 ಲಕ್ಷ ರೂ. ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್ ಶಾಕೆಯ ಕರ್ನಾಟಕ ಬ್ಯಾಂಕ್ ಖಾತೆಯಲ್ಲಿ 48 ಲಕ್ಷ ರೂಪಾಯಿ ಹಣ ಹೊಂದಿದ್ದರೂ ಅಲ್ಲಿ ಕೇವಲ 5 ಲಕ್ಷ ರೂಪಾಯಿ ಇದೆ ಎಂದು ತೋರಿಸಿದ್ದಾರೆಂದು ಕೋರ್ಟ್​ನಲ್ಲಿ ಹೇಳಿಕೆ ನೀಡಿದ್ದರು. ಅಲ್ಲದೇ ಚುನಾವಣಾ ಅಕ್ರಮಗಳ ಬಗ್ಗೆಯೂ ಪ್ರಸ್ತಾಪಿಸಿದ್ದರು. ಆದಾಯ ತೆರಿಗೆ ವಿವರಗಳ ಬಗ್ಗೆಯೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ಅನರ್ಹಕ್ಕೆ ಯಾವ್ಯಾವ ಕೇಸ್​ಗಳು ಗೊತ್ತಾ? ವಕೀಲರು ಹೇಳಿದ್ದಿಷ್ಟು

ಪ್ರಜ್ವಲ್ ಆಯ್ಕೆ ಅಸಿಂಧುಗೊಂಡ ಬಳಿಕ ತಮ್ಮನ್ನು ವಿಜಯಿ ಅಭ್ಯರ್ಥಿಯೆಂದು ಘೋಷಿಸಬೇಕು ಎಂದು  ಎ.ಮಂಜು ಹೈಕೋರ್ಟ್ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನೂ ಹೈಕೋರ್ಟ್ ತಿರಸ್ಕರಿಸಿತ್ತು. ಎ.ಮಂಜು ವಿರುದ್ಧವೂ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಪ್ರತಿಸವಾಲಿನ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿತ್ತು. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಂಡಿರುವುದರಿಂದ ಅವರು ಅನರ್ಹಗೊಂಡಂತೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:37 pm, Mon, 11 September 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?