AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯನ ನೇಮಕ ಆರೋಪ; ಹೈಕೋರ್ಟ್ ಗರಂ

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಶಿಫಾರಸಿನಂತೆ BWSSB ಸದಸ್ಯರಾಗಿ ರುದ್ರೇಗೌಡರ ನೇಮಕವನ್ನು ಪ್ರಶ್ನಿಸಿ ಜಲಮಂಡಳಿಯ SC, STನೌಕರರ ಸಂಘ ಹೈಕೋರ್ಟ್​ಗೆ PIL ಸಲ್ಲಿಸಿದ್ದರು.

ಕೇಂದ್ರ ಸಚಿವ ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯನ ನೇಮಕ ಆರೋಪ; ಹೈಕೋರ್ಟ್ ಗರಂ
D.V.ಸದಾನಂದ ಗೌಡ
KUSHAL V
|

Updated on:Feb 12, 2021 | 5:44 PM

Share

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಶಿಫಾರಸಿನಂತೆ BWSSB ಸದಸ್ಯರನ್ನಾಗಿ ರುದ್ರೇಗೌಡ ಎಂಬವವರು ನೇಮಕವಾಗಿರುವುದನ್ನು ಪ್ರಶ್ನಿಸಿ ಜಲಮಂಡಳಿಯ SC, ST ನೌಕರರ ಸಂಘ ಹೈಕೋರ್ಟ್​ಗೆ PIL ಸಲ್ಲಿಸಿತ್ತು.  ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹುದ್ದೆಗೆ ಸೂಕ್ತ ಅರ್ಹತೆ ಇಲ್ಲದ ರುದ್ರೇಗೌಡರನ್ನು ನೇಮಕ ಮಾಡಲಾಗಿದೆ ಎಂದು ಸಂಘ ಉಲ್ಲೇಖಿಸಿತ್ತು. High Court expresses displeasure against DV Sadananda Gowda

ಇದೀಗ, ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಕೇಂದ್ರ ಸಚಿವರ ಶಿಫಾರಸಿನ ನೇಮಕಕ್ಕೆ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಜೊತೆಗೆ, ಸಂಜೆ 4.45ರೊಳಗೆ ನೇಮಕಾತಿ ಕುರಿತು ನಿಲುವು ತಿಳಿಸಿ ಇಲ್ಲವಾದ್ರೆ ಕೇಂದ್ರ ಸಚಿವರನ್ನ ಪ್ರತಿವಾದಿ ಮಾಡುವುದಾಗಿ ಎಚ್ಚರಿಕೆ ಸಹ ನೀಡಿದೆ. ಸಿಜೆ A.S.ಒಕಾ, ನ್ಯಾ.ಸಚಿನ್ ಶಂಕರ್ ಮಗದುಮ್​ರವರ ಪೀಠ ಈ ಎಚ್ಚರಿಕೆ ನೀಡಿದೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ BWSSB ಸದಸ್ಯರಾಗಿ ರುದ್ರೇಗೌಡರ ನೇಮಕಕ್ಕೆ ಶಿಫಾರಸು ಮಾಡಿದ್ದರು. ಶಿಫಾರಸಿನಂತೆ ನೇಮಕಾತಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಇನ್ನು, ಹೈಕೋರ್ಟ್​ ಸೂಚನೆಯಂತೆ ನಿಲುವು ತಿಳಿಸಿದ ಸರ್ಕಾರ  3 ವಾರಗಳಲ್ಲಿ ಜಲಮಂಡಳಿ ಪುನರ್ ರಚಿಸುವುದಾಗಿ ಹೇಳಿದೆ. ಹೈಕೋರ್ಟ್​​ಗೆ ಸರ್ಕಾರಿ ವಕೀಲರು ಈ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ 3 ವಾರಗಳ ಕಾಲ‌ ಮುಂದೂಡಿದೆ.

ಇದೂ ಓದಿ: BDAನಲ್ಲಿ ಮತ್ತೊಂದು ಕರ್ಮಕಾಂಡ: BBMP ಮಾಜಿ ಕಾರ್ಪೊರೇಟರ್ ವಿರುದ್ಧವೇ FIR ದಾಖಲು

Published On - 4:58 pm, Fri, 12 February 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ