AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್

ಸದ್ಯ ಶೇ 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ ಎಂದು ಹೈಕೋರ್ಟ್​ ತಿಳಿಸಿದೆ

ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್
sandhya thejappa
|

Updated on:Apr 20, 2021 | 5:11 PM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮಷ್ಕರ ನಡೆಯುತ್ತಿದೆ. ಕೊರೊನಾ ನಡುವೆ ಈ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಆದರೆ ಹೈಕೋರ್ಟ್ ವಿಭಾಗೀಯ ಪೀಠ ಇಂದು ಕೊರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಸಾರಿಗೆ ನೌಕರರ ಸಂಘಕ್ಕೆ ಸೂಚನೆ ನೀಡಿದೆ.

ಬಸ್ ಸೇವೆಗಳ ವ್ಯತ್ಯಯದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸದ್ಯ ಶೇ. 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ. ಜನಸಾಮಾನ್ಯರ ಮೂಲಭೂತ ಹಕ್ಕಿಗೆ ಧಕ್ಕೆಯಾಗಲಿದೆ ಎಂದು ಹೈಕೋರ್ಟ್ ಸಿಜೆ ಎ.ಎಸ್. ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ರವರ ಪೀಠ ಅಭಿಪ್ರಾಯಪಟ್ಟಿದ್ದು, ಸಾರಿಗೆ ನೌಕರರೊಂದಿಗೆ ಮಧ್ಯಸ್ಥಿಕೆಗೂ ಹೈಕೋರ್ಟ್ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಲೇಬರ್ ಕೋರ್ಟ್​ಗೂ ಅರ್ಜಿ ಸಲ್ಲಿಸಿದೆ. ಸಾರಿಗೆ ಮುಷ್ಕರ ಕಾನೂನುಬಾಹಿರವೆಂದು ಘೋಷಿಸಲಾಗಿದೆ. ಕೆಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣನೆ ಸಾಧ್ಯವಿಲ್ಲ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ ಕೆ.ನಾವದಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಯಲಹಂಕ ವಿದ್ಯುತ್ ಚಿತಾಗಾರದಲ್ಲಿ 22 ಆಂಬುಲೆನ್ಸ್​ ಕ್ಯೂ: ಎಂಟ್ರಿ ಗೇಟ್ ಕ್ಲೋಸ್ ಮಾಡಿದ ಚಿತಾಗಾರದ ಸಿಬ್ಬಂದಿ!

ಕೊರೊನಾ ಡೆತ್​ ಬಗ್ಗೆ ಅಡಿಟಿಂಗ್​ ಆಗಲಿ, ಆಸ್ಪತ್ರೆಗಳ ಬೆಡ್​ ರಿಯಾಲಿಟಿ ಚೆಕ್​ಗೆ ನಾನೇ ಬರುತ್ತೇನೆ: ಡಿ.ಕೆ.ಶಿವಕುಮಾರ್​

(High Court has instructed the Transport Workers Union to start the service immediately)

Published On - 3:56 pm, Tue, 20 April 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!