AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್

ಸದ್ಯ ಶೇ 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ ಎಂದು ಹೈಕೋರ್ಟ್​ ತಿಳಿಸಿದೆ

ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ; ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್
sandhya thejappa
sandhya thejappa|

Updated on:Apr 20, 2021 | 5:11 PM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮಷ್ಕರ ನಡೆಯುತ್ತಿದೆ. ಕೊರೊನಾ ನಡುವೆ ಈ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಆದರೆ ಹೈಕೋರ್ಟ್ ವಿಭಾಗೀಯ ಪೀಠ ಇಂದು ಕೊರೊನಾ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣ ಸೇವೆ ಆರಂಭಿಸಿ ಎಂದು ಸಾರಿಗೆ ನೌಕರರ ಸಂಘಕ್ಕೆ ಸೂಚನೆ ನೀಡಿದೆ.

ಬಸ್ ಸೇವೆಗಳ ವ್ಯತ್ಯಯದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸದ್ಯ ಶೇ. 44 ರಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸಿವೆ. ಕೊವಿಡ್ 19 ನಿಂದ ಈಗಾಗಲೇ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಲಸಿಕೆ ಕೇಂದ್ರಗಳಿಗೂ ಜನ ತೆರಳಲು ಆಗುತ್ತಿಲ್ಲ. ಜನರ ಕೈಗೆಟುಕುವ ಸರ್ಕಾರಿ ಬಸ್​ಗಳ ಅಗತ್ಯವಿದೆ. ಆಸ್ಪತ್ರೆಗಳಿಗೆ ಹೋಗಲು ಬಸ್​ಗಳ ಅಗತ್ಯವಿದೆ. ಈ ವೇಳೆ ಮುಷ್ಕರ ಹೂಡುವುದಕ್ಕೆ ಸೂಕ್ತ ಕಾಲವಲ್ಲ. ಜನಸಾಮಾನ್ಯರ ಮೂಲಭೂತ ಹಕ್ಕಿಗೆ ಧಕ್ಕೆಯಾಗಲಿದೆ ಎಂದು ಹೈಕೋರ್ಟ್ ಸಿಜೆ ಎ.ಎಸ್. ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ರವರ ಪೀಠ ಅಭಿಪ್ರಾಯಪಟ್ಟಿದ್ದು, ಸಾರಿಗೆ ನೌಕರರೊಂದಿಗೆ ಮಧ್ಯಸ್ಥಿಕೆಗೂ ಹೈಕೋರ್ಟ್ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮುಷ್ಕರ ನಿರತರ ವಿರುದ್ಧ ಎಸ್ಮಾ ಜಾರಿಗೊಳಿಸಲಾಗಿದೆ. ಸರ್ಕಾರ ಲೇಬರ್ ಕೋರ್ಟ್​ಗೂ ಅರ್ಜಿ ಸಲ್ಲಿಸಿದೆ. ಸಾರಿಗೆ ಮುಷ್ಕರ ಕಾನೂನುಬಾಹಿರವೆಂದು ಘೋಷಿಸಲಾಗಿದೆ. ಕೆಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಸರ್ಕಾರಿ ನೌಕರರಾಗಿಸುವ ಬೇಡಿಕೆ ಪರಿಗಣನೆ ಸಾಧ್ಯವಿಲ್ಲ ಎಂದು ಹೈಕೋರ್ಟ್​ಗೆ ಎಜಿ ಪ್ರಭುಲಿಂಗ ಕೆ.ನಾವದಗಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಯಲಹಂಕ ವಿದ್ಯುತ್ ಚಿತಾಗಾರದಲ್ಲಿ 22 ಆಂಬುಲೆನ್ಸ್​ ಕ್ಯೂ: ಎಂಟ್ರಿ ಗೇಟ್ ಕ್ಲೋಸ್ ಮಾಡಿದ ಚಿತಾಗಾರದ ಸಿಬ್ಬಂದಿ!

ಕೊರೊನಾ ಡೆತ್​ ಬಗ್ಗೆ ಅಡಿಟಿಂಗ್​ ಆಗಲಿ, ಆಸ್ಪತ್ರೆಗಳ ಬೆಡ್​ ರಿಯಾಲಿಟಿ ಚೆಕ್​ಗೆ ನಾನೇ ಬರುತ್ತೇನೆ: ಡಿ.ಕೆ.ಶಿವಕುಮಾರ್​

(High Court has instructed the Transport Workers Union to start the service immediately)

Published On - 3:56 pm, Tue, 20 April 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು