ಸೋಂಕಿತರ ಅಂತ್ಯಕ್ರಿಯೆಗೆ ಎಷ್ಟು ಮಂದಿ ಭಾಗಿಯಾಗಬಹುದು.. ಹೈಕೋರ್ಟ್ ಹೇಳಿದ್ದೇನು?

ಬೆಂಗಳೂರು:ಕೊರೊನಾದಿಂದಾಗಿ ಮೃತಪಟ್ಟವರ ಮೃತ ದೇಹಗಳನ್ನ ಆರೋಗ್ಯ ಇಲಾಖೆಯ ಸಿಬ್ಬಂದಿ ತೀರ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದ ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಾಗಾಗಿ ಹೈಕೋರ್ಟ್ ಪ್ರಕರಣದ ಹಿನ್ನೆಲೆಯಲ್ಲಿ ಸೋಂಕಿತರ ಅಂತ್ಯಕ್ರಿಯೆ ಶಿಷ್ಟಾಚಾರದಲ್ಲಿ ಕೆಲವೊಂದು ಬದಲಾವಣೆ ತಂದಿದೆ. ಅಂತ್ಯಕ್ರಿಯೆ ವೇಳೆ ಕುಟುಂಬದ ಐವರು ಭಾಗಿಯಾಗಬಹುದು ಎಂಬ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ದೇಹವನ್ನು ಕವರ್ ನಿಂದ ಮುಚ್ಚಿ ಚಿತಾಗಾರಕ್ಕೆ ರವಾನೆ ಮಾಡಬೇಕೆಂದು ತಿಳಿಸಿದೆ. ಜೊತೆಗೆ ಹೈಕೋರ್ಟ್ ಅಂತ್ಯಸಂಸ್ಕಾರ ಸಂಬಂಧವಾಗಿ ಸರ್ಕಾರದಿಂದ ಕೆಲ ಸ್ಪಷ್ಟನೆ ಕೇಳಿದೆ. ಅವುಗಳೆಂದರೆ: 1) ಮೃತದೇಹವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗುವುದೇ? […]

ಸೋಂಕಿತರ ಅಂತ್ಯಕ್ರಿಯೆಗೆ ಎಷ್ಟು ಮಂದಿ ಭಾಗಿಯಾಗಬಹುದು.. ಹೈಕೋರ್ಟ್ ಹೇಳಿದ್ದೇನು?
ಕರ್ನಾಟಕ ಹೈಕೋರ್ಟ್​
ಸಾಧು ಶ್ರೀನಾಥ್​

Updated on: Jul 20, 2020 | 7:18 PM

ಬೆಂಗಳೂರು:ಕೊರೊನಾದಿಂದಾಗಿ ಮೃತಪಟ್ಟವರ ಮೃತ ದೇಹಗಳನ್ನ ಆರೋಗ್ಯ ಇಲಾಖೆಯ ಸಿಬ್ಬಂದಿ ತೀರ ಅಮಾನವೀಯವಾಗಿ ಅಂತ್ಯಸಂಸ್ಕಾರ ಮಾಡುತ್ತಿದ್ದ ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಹಾಗಾಗಿ ಹೈಕೋರ್ಟ್ ಪ್ರಕರಣದ ಹಿನ್ನೆಲೆಯಲ್ಲಿ ಸೋಂಕಿತರ ಅಂತ್ಯಕ್ರಿಯೆ ಶಿಷ್ಟಾಚಾರದಲ್ಲಿ ಕೆಲವೊಂದು ಬದಲಾವಣೆ ತಂದಿದೆ.

ಅಂತ್ಯಕ್ರಿಯೆ ವೇಳೆ ಕುಟುಂಬದ ಐವರು ಭಾಗಿಯಾಗಬಹುದು ಎಂಬ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ದೇಹವನ್ನು ಕವರ್ ನಿಂದ ಮುಚ್ಚಿ ಚಿತಾಗಾರಕ್ಕೆ ರವಾನೆ ಮಾಡಬೇಕೆಂದು ತಿಳಿಸಿದೆ. ಜೊತೆಗೆ ಹೈಕೋರ್ಟ್ ಅಂತ್ಯಸಂಸ್ಕಾರ ಸಂಬಂಧವಾಗಿ ಸರ್ಕಾರದಿಂದ ಕೆಲ ಸ್ಪಷ್ಟನೆ ಕೇಳಿದೆ.

ಅವುಗಳೆಂದರೆ:
1) ಮೃತದೇಹವನ್ನು ಕುಟುಂಬಸ್ಥರ ವಶಕ್ಕೆ ನೀಡಲಾಗುವುದೇ?
2) ಮುಖವನ್ನೂ ಮುಚ್ಚಲಾಗುವುದರಿಂದ ಮೃತಪಟ್ಟವರ ಗುರುತು ಪತ್ತೆ ಹೇಗೆ?
3) ಮೃತದೇಹದಿಂದ ಕೊರೊನಾ ಹರಡುವುದಕ್ಕೆ ವೈಜ್ಞಾನಿಕ ಆಧಾರವಿದೆಯೇ?
4) ಕುಟುಂಬಸ್ಥರಿಗೆ ಅಂತಿಮ ಕ್ರಿಯೆ ನೆರವೇರಿಸುವ ಸ್ವಾತಂತ್ರ್ಯ ನೀಡಲಾಗುತ್ತದೆಯೇ?
ಎಂಬಿತ್ಯಾದಿ ಸ್ಪಷ್ಟನೆ ಕೇಳಿರುವ ಹೈಕೋರ್ಟ್ ಈ ಬಗ್ಗೆ ಜು. 23ರಂದು ಉತ್ತರಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us