AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದೇಶಗಳನ್ನು ಉಲ್ಲಂಘಿಸಿದ ಬಿಡಿಎಗೆ ಹೈಕೋರ್ಟ್ ತರಾಟೆ

ಬಿಡಿಎಗೆ ಆಯುಕ್ತರಾಗಿ ಬಂದು ಎರಡು ತಿಂಗಳಷ್ಟೇ ಆಗಿದೆ. ಕಂಪ್ಯೂಟರೀಕರಣ ಮಾಡಿ ಪರಿಸ್ಥಿತಿ ಸುಧಾರಿಸುತ್ತಿದ್ದೇವೆ. ಬಿಡಿಎ ಕಾನೂನು ವಿಭಾಗವನ್ನು ಬದಲಿಸಲಾಗಿದೆ. ಬಿಡಿಎ ಅಧಿಕಾರಿಗಳ ತಪ್ಪಿಗೆ ಕೋರ್ಟ್​ಗೆ ಓಡಾಡಬೇಕಿದೆ.

ಆದೇಶಗಳನ್ನು ಉಲ್ಲಂಘಿಸಿದ ಬಿಡಿಎಗೆ ಹೈಕೋರ್ಟ್ ತರಾಟೆ
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jul 19, 2021 | 2:20 PM

Share

ಬೆಂಗಳೂರು: ಪದೇ ಪದೇ ಹೈಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತಿರುವ ಬಿಡಿಎಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬಿಡಿಎ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಬಿಡಿಎ ಕಾರ್ಯನಿರ್ವಹಣೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೋರ್ಟ್ ಆದೇಶ ಜಾರಿಗೆ ಜನರು ಬಿಡಿಎನ ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ಅಲೆಯಬೇಕೇ. ಕೋರ್ಟ್ ಆದೇಶ ನೀಡಿದರೂ ಪಾಲಿಸಲು ವಿಳಂಬ ಮಾಡುತ್ತಿರುವುದೇಕೆ ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡರನ್ನು ಹೈಕೋರ್ಟ್ ಪ್ರಶ್ನಿಸಿದೆ.

ಬಿಡಿಎಗೆ ಆಯುಕ್ತರಾಗಿ ಬಂದು ಎರಡು ತಿಂಗಳಷ್ಟೇ ಆಗಿದೆ. ಕಂಪ್ಯೂಟರೀಕರಣ ಮಾಡಿ ಪರಿಸ್ಥಿತಿ ಸುಧಾರಿಸುತ್ತಿದ್ದೇವೆ. ಬಿಡಿಎ ಕಾನೂನು ವಿಭಾಗವನ್ನು ಬದಲಿಸಲಾಗಿದೆ. ಬಿಡಿಎ ಅಧಿಕಾರಿಗಳ ತಪ್ಪಿಗೆ ಕೋರ್ಟ್​ಗೆ ಓಡಾಡಬೇಕಿದೆ. ಬೇರೆ ಕೆಲಸ ಮಾಡಲಾಗುತ್ತಿಲ್ಲವೆಂದು ಆಯುಕ್ತರು ಉತ್ತರಿಸಿದರು. ಆಯುಕ್ತರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್, ನೀವು ಆರಾಮವಾಗಿ ಕಚೇರಿಯಲ್ಲಿ ಕುಳಿತು ವಿಸಿಯಲ್ಲಿ ಹಾಜರಾಗಿದ್ದೀರಿ. ಮೊದಲ ಬಾರಿಗೆ ನ್ಯಾಯಾಂಗ ನಿಂದನೆ ಕೇಸ್​​ನಲ್ಲಿ ಹಾಜರಾಗಿದ್ದೀರಿ. ಕೋರ್ಟ್ ಆದೇಶ ಪಾಲಿಸಲು ಬಿಡಿಎ ವಿಳಂಬ ಮಾಡುವುದೇಕೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಹೈಕೋರ್ಟ್​ನಲ್ಲಿರುವ ಅರ್ಧದಷ್ಟು ನ್ಯಾಯಾಂಗ ನಿಂದನೆ ಕೇಸ್​ಗಳು ಬಿಡಿಎ ವಿರುದ್ಧವಿದೆ. ಇದು ಬಿಡಿಎ ಶೋಚನೀಯ ಸ್ಥಿತಿಗೆ ನಿದರ್ಶನವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್​ರವರಿದ್ದ ವಿಭಾಗೀಯ ಪೀಠ ಬಿಡಿಎಯನ್ನು ತರಾಟೆಗೆ ತೆಗೆದುಕೊಂಡಿದೆ. 23 ರೊಳಗೆ ಪ್ರಮಾಣ ಪತ್ರ ಸಲ್ಲಿಸಲು ಆಯುಕ್ತರಿಗೆ ಸೂಚನೆ ನೀಡಿದೆ.

ಪ್ರಕರಣದ ಹಿನ್ನೆಲೆ ನಿಖಿಲ್ ಕನ್ಸ್ಟ್ರಕ್ಷನ್​ಗೆ ಸೇರಿದ ಬೆಂಗಳೂರು ಉತ್ತರ ತಾಲೂಕು ಚಿಕ್ಕಮಾರೇನಹಳ್ಳಿಯ 37 ಗುಂಟೆ ಜಮೀನನ್ನು ಬಿಡಿಎ ಅನಧಿಕೃತವಾಗಿ ಬಳಸಿಕೊಂಡಿತ್ತು. ಇದಕ್ಕೆ ಪ್ರತಿಯಾಗಿ ಶೇ.50 ರಷ್ಟು ಬದಲಿ ನಿವೇಶನ ನೀಡುವುದಾಗಿ ನಿಖಿಲ್ ಕನ್ಸ್ಟ್ರಕ್ಷನ್​ಗೆ ಬಿಡಿಎ ಭರವಸೆ ನೀಡಿತ್ತು. ಆದರೂ ನಿವೇಶನ ಹಂಚಿಕೆ ಮಾಡದ ಬಿಡಿಎ ವಿರುದ್ಧ ನಿಖಿಲ್ ಕನ್ಸ್ಟ್ರಕ್ಷನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಸೂಚನೆ ಹೊರತಾಗಿಯೂ ಬದಲಿ ನಿವೇಶನ ನೀಡದ ಬಿಡಿಎ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಿತ್ತು. ಹೈಕೋರ್ಟ್ ಬಿಡಿಎ ಆಯುಕ್ತರಿಗೆ ಸಮನ್ಸ್ ಜಾರಿಗೊಳಿಸಿದ ಕಾರಣ ಎಂ.ಬಿ.ರಾಜೇಶ್ ಗೌಡ ಹೈಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದರು.

ಇದನ್ನೂ ಓದಿ

ಬಕ್ರೀದ್ ಸ್ಪೆಷಲ್: 1.25 ಲಕ್ಷ ರೂ.ಗೆ ಬಂಡೂರು ತಳಿಯ 2 ಟಗರು ಮಾರಾಟ

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ? – ಜುಲೈ 26ಕ್ಕೆ ಮೊದಲ ಮುಹೂರ್ತ, ತಪ್ಪಿದರೆ ಆಗಸ್ಟ್​ 15

(High Court has upset the BDA for violating the High Court orders)

Published On - 2:20 pm, Mon, 19 July 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್