AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್​ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್​ ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಬೆನ್ನೆಲ್ಲೇ ಹೈಕೋರ್ಟ್ ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಸೂಚಿಸಲಾಗಿದೆ. 

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಹೈಕೋರ್ಟ್​​
Ramesha M
| Edited By: |

Updated on: Aug 02, 2024 | 11:10 PM

Share

ಬೆಂಗಳೂರು, ಆಗಸ್ಟ್​ 02: ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ (muda) ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಗೆ ಈಗಾಗಲೇ ಹೈಕೋರ್ಟ್ (High Court) ಅನುಮತಿ ನೀಡಿದ್ದು, ಇದೀಗ ಕೆಂಗೇರಿಯಿಂದ ಮೈಸೂರುವರೆಗೆ ನಡೆಯುವ ಪಾದಯಾತ್ರೆಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಬಿಜೆಪಿ ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಆ. 3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಅನುಮತಿ ನೀಡಲು ನಿರ್ದೇಶಿಸುವಂತೆ ಹೈಕೋರ್ಟ್​​ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ ಅನುಮತಿ ನೀಡಿದೆ. ಇದೀಗ ಕೋರ್ಟ್, ಕಾನೂನು ಪ್ರಕಾರ ಪಾದಯಾತ್ರೆ ಭದ್ರತೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ರಾಮನಗರ, ಮಂಡ್ಯ ಎಸ್ಪಿ ಹಾಗೂ ಮೈಸೂರು ಪೊಲೀಸ್​ರಿಗೆ ಸೂಚಿಸಿದೆ.

ನಾಳೆ ಪಾದಯಾತ್ರೆ ಆರಂಭಗೊಳ್ಳುತ್ತಿದ್ದು, ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. 8 ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಮುಂದಿನ ಶನಿವಾರ ಮೈಸೂರು ತಲುಪಲಿದೆ.

ಇದನ್ನೂ ಓದಿ: ಮುಡಾ ಹಗರಣದ ದೂರಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಟಿಜೆ ಅಬ್ರಹಾಂ ಮತ್ತೊಂದು ಖಡಕ್ ಎಚ್ಚರಿಕೆ

ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಜೆಡಿಎಸ್​ ಪಕ್ಷದಿಂದ ಹಾಲಿ, ಮಾಜಿ ಶಾಸಕರು, ಕಾರ್ಯಕರ್ತರಿಗೆ ಕರೆ ನೀಡಲಾಗಿದೆ. ಈ ಮೊದಲು ಪಾದಯಾತ್ರೆಗೆ ಬೆಂಬಲ ಕೊಡಲ್ಲ ಅಂದಿದ್ದ ಕುಮಾರಸ್ವಾಮಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದರ ಮನವೊಲಿಸಲು ಯಶಸ್ವಿಯಾಗಿದ್ದರು. ಇವತ್ತು ಈ ಬಗ್ಗೆ ಮಾತನಾಡಿದ ವಿಜಯೇಂದ್ರ 2 ಪಕ್ಷಗಳು ಒಂದಾಗಿ ಪಾದಯಾತ್ರೆ ನಡೆಯುತ್ತೆ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮೀ ಹಣ, ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್​ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಮೊದಲು ಪಾದಯಾತ್ರೆಗೆ ಅವಕಾಶ ಕೊಡಬಾರದು ಅಂದುಕೊಂಡಿದ್ವಿ, ಶಾಂತಿಯುತವಾಗಿ ಮಾಡ್ತೀವಿ ಅಂದಿದ್ದಕ್ಕೆ ಅವಕಾಶ ಕೊಡ್ತೀವಿ ಅಂತಾ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಇದಕ್ಕೂ ಮೊದಲು ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಯಾವುದೇ ಅವಕಾಶವಿಲ್ಲ ಅಂತ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ