AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳ ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Mar 09, 2021 | 4:52 PM

Share

ಬೆಂಗಳೂರು: ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ನಿಯಮಬಾಹಿರವಾಗಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿದೆ. ಥಣಿಸಂದ್ರ, ನಾಗವಾರ, HBR ಲೇಔಟ್‌ನ 16 ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನ ನಿಯಮಬಾಹಿರವಾಗಿ ಬಳಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೀಗಾಗಿ, ಶಬ್ದ ಮಾಲಿನ್ಯ ತಡೆಗೆ ನಿರ್ದೇಶನ ನೀಡಲು ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸದ್ಯ, PIL ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ PIL ಇತ್ತ, ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದ PILನ ವಿಚಾರಣೆ ಇಂದು ನಡೆಯಿತು. ಕಾಸರಗೋಡಿನ ಸುಬ್ಬಯ್ಯ ಶೆಟ್ಟಿ ಎಂಬುವವರಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ, ರಾಜ್ಯದ ಆದೇಶ ಕೇಂದ್ರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಅಭಿಪ್ರಾಯ ವ್ಯಕ್ತವಾಗಿದೆ. ಕಾಸರಗೋಡು ಭಾಗದಲ್ಲಿ ನಿರ್ಬಂಧ ವಿಧಿಸಲಾಗಿದೆ. 25 ರಸ್ತೆಗಳ ಪೈಕಿ 4 ರಸ್ತೆಗಳಲ್ಲಿ ಮಾತ್ರ ಪ್ರವೇಶ ನೀಡಿದ್ದಾರೆ. ಯಾವ ಕಾನೂನಿನಡಿ ಈ ರೀತಿಯ ನಿರ್ಬಂಧ ವಿಧಿಸಿದ್ದೀರಿ? ಬೇರೆ ಜಿಲ್ಲೆಗಳ ಮೂಲಕ ಪ್ರವೇಶಕ್ಕೆ ಅವಕಾಶ ನೀಡಿದ್ದೀರಿ. ಕಾಸರಗೋಡು ಜಿಲ್ಲೆಯಿಂದ ಪ್ರವೇಶಕ್ಕೆ ಏಕೆ ನಿರ್ಬಂಧ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಹಾಕಿತು.

ಇದೀಗ, ದಕ್ಷಿಣ ಕನ್ನಡ ಡಿಸಿಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸದ್ಯ, ವಿಚಾರಣೆಯನ್ನು ಮಾರ್ಚ್​ 18ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ