AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳ ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Mar 09, 2021 | 4:52 PM

Share

ಬೆಂಗಳೂರು: ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ನಿಯಮಬಾಹಿರವಾಗಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿದೆ. ಥಣಿಸಂದ್ರ, ನಾಗವಾರ, HBR ಲೇಔಟ್‌ನ 16 ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನ ನಿಯಮಬಾಹಿರವಾಗಿ ಬಳಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೀಗಾಗಿ, ಶಬ್ದ ಮಾಲಿನ್ಯ ತಡೆಗೆ ನಿರ್ದೇಶನ ನೀಡಲು ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸದ್ಯ, PIL ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ PIL ಇತ್ತ, ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದ PILನ ವಿಚಾರಣೆ ಇಂದು ನಡೆಯಿತು. ಕಾಸರಗೋಡಿನ ಸುಬ್ಬಯ್ಯ ಶೆಟ್ಟಿ ಎಂಬುವವರಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ, ರಾಜ್ಯದ ಆದೇಶ ಕೇಂದ್ರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಅಭಿಪ್ರಾಯ ವ್ಯಕ್ತವಾಗಿದೆ. ಕಾಸರಗೋಡು ಭಾಗದಲ್ಲಿ ನಿರ್ಬಂಧ ವಿಧಿಸಲಾಗಿದೆ. 25 ರಸ್ತೆಗಳ ಪೈಕಿ 4 ರಸ್ತೆಗಳಲ್ಲಿ ಮಾತ್ರ ಪ್ರವೇಶ ನೀಡಿದ್ದಾರೆ. ಯಾವ ಕಾನೂನಿನಡಿ ಈ ರೀತಿಯ ನಿರ್ಬಂಧ ವಿಧಿಸಿದ್ದೀರಿ? ಬೇರೆ ಜಿಲ್ಲೆಗಳ ಮೂಲಕ ಪ್ರವೇಶಕ್ಕೆ ಅವಕಾಶ ನೀಡಿದ್ದೀರಿ. ಕಾಸರಗೋಡು ಜಿಲ್ಲೆಯಿಂದ ಪ್ರವೇಶಕ್ಕೆ ಏಕೆ ನಿರ್ಬಂಧ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಹಾಕಿತು.

ಇದೀಗ, ದಕ್ಷಿಣ ಕನ್ನಡ ಡಿಸಿಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸದ್ಯ, ವಿಚಾರಣೆಯನ್ನು ಮಾರ್ಚ್​ 18ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ