AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳ ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Mar 09, 2021 | 4:52 PM

Share

ಬೆಂಗಳೂರು: ಥಣಿಸಂದ್ರದ 16 ಮಸೀದಿಗಳಿಂದ ಶಬ್ದ ಮಾಲಿನ್ಯ ಆರೋಪದಡಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ PIL ವಿಚಾರಣೆ ಇಂದು ನಡೆಯಿತು. ಇದೀಗ, ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಹೈಕೋರ್ಟ್​ ನೋಟಿಸ್ ನೀಡಿದೆ. ಇದಲ್ಲದೆ, ನಗರ ಪೊಲೀಸ್ ಆಯುಕ್ತರಿಗೂ ಹೈಕೋರ್ಟ್ ನೋಟಿಸ್ ಜಾರಿಮಾಡಿದೆ.

ನಿಯಮಬಾಹಿರವಾಗಿ ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿದೆ. ಥಣಿಸಂದ್ರ, ನಾಗವಾರ, HBR ಲೇಔಟ್‌ನ 16 ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನ ನಿಯಮಬಾಹಿರವಾಗಿ ಬಳಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೀಗಾಗಿ, ಶಬ್ದ ಮಾಲಿನ್ಯ ತಡೆಗೆ ನಿರ್ದೇಶನ ನೀಡಲು ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಸದ್ಯ, PIL ವಿಚಾರಣೆಯನ್ನು ಹೈಕೋರ್ಟ್ ಏಪ್ರಿಲ್ 15ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.

ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ PIL ಇತ್ತ, ಕೇರಳದಿಂದ ಕರ್ನಾಟಕ ಗಡಿ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಲಾಗಿದ್ದ PILನ ವಿಚಾರಣೆ ಇಂದು ನಡೆಯಿತು. ಕಾಸರಗೋಡಿನ ಸುಬ್ಬಯ್ಯ ಶೆಟ್ಟಿ ಎಂಬುವವರಿಂದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ನಡೆಯಿತು.

ವಿಚಾರಣೆ ವೇಳೆ, ರಾಜ್ಯದ ಆದೇಶ ಕೇಂದ್ರದ ಮಾರ್ಗಸೂಚಿಗೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಅಭಿಪ್ರಾಯ ವ್ಯಕ್ತವಾಗಿದೆ. ಕಾಸರಗೋಡು ಭಾಗದಲ್ಲಿ ನಿರ್ಬಂಧ ವಿಧಿಸಲಾಗಿದೆ. 25 ರಸ್ತೆಗಳ ಪೈಕಿ 4 ರಸ್ತೆಗಳಲ್ಲಿ ಮಾತ್ರ ಪ್ರವೇಶ ನೀಡಿದ್ದಾರೆ. ಯಾವ ಕಾನೂನಿನಡಿ ಈ ರೀತಿಯ ನಿರ್ಬಂಧ ವಿಧಿಸಿದ್ದೀರಿ? ಬೇರೆ ಜಿಲ್ಲೆಗಳ ಮೂಲಕ ಪ್ರವೇಶಕ್ಕೆ ಅವಕಾಶ ನೀಡಿದ್ದೀರಿ. ಕಾಸರಗೋಡು ಜಿಲ್ಲೆಯಿಂದ ಪ್ರವೇಶಕ್ಕೆ ಏಕೆ ನಿರ್ಬಂಧ? ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಹಾಕಿತು.

ಇದೀಗ, ದಕ್ಷಿಣ ಕನ್ನಡ ಡಿಸಿಗೆ ಪ್ರಮಾಣಪತ್ರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಸದ್ಯ, ವಿಚಾರಣೆಯನ್ನು ಮಾರ್ಚ್​ 18ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ: ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ

ಅಜಾನ್​ಗಾಗಿ ಧ್ವನಿವರ್ಧಕಗಳನ್ನು ಬಳಸುವುದು ಮೂಲಭೂತ ಹಕ್ಕಲ್ಲ: ಹೈಕೋರ್ಟ್

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?