AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಸಿಗ್ನಲ್ ಗೆರೆ ದಾಟಿಲ್ಲವೆಂದು ಸವಾರ ತಕರಾರು ಎತ್ತಿದ್ದಕ್ಕೆ.. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್

ಸಣ್ಣ ಪ್ರಕರಣಗಳಲ್ಲಿ ಮೇಲ್ಮನವಿಗೆ ಅವಕಾಶ ಕೋರಿ ಸಲ್ಲಿಸಲಾದ ರಿಟ್​ನ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ನೋಟಿಸ್ ನೀಡಿದೆ. ಶ್ರೀಪತಿ ರಾವ್ ಎಂಬುವವರು CrPC ಸೆಕ್ಷನ್‌ 376ರ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಟ್ರಾಫಿಕ್ ಸಿಗ್ನಲ್ ಗೆರೆ ದಾಟಿಲ್ಲವೆಂದು ಸವಾರ ತಕರಾರು ಎತ್ತಿದ್ದಕ್ಕೆ.. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Jan 28, 2021 | 11:36 PM

Share

ಬೆಂಗಳೂರು: ಸಣ್ಣ ಪ್ರಕರಣಗಳಲ್ಲಿ ಮೇಲ್ಮನವಿಗೆ ಅವಕಾಶ ಕೋರಿ ಸಲ್ಲಿಸಲಾದ ರಿಟ್​ನ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ನೋಟಿಸ್ ನೀಡಿದೆ. ಶ್ರೀಪತಿ ರಾವ್ ಎಂಬುವವರು CrPC ಸೆಕ್ಷನ್‌ 376ರ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಏನಿದು ಪ್ರಕರಣ? ಟ್ರಾಫಿಕ್ ಸಿಗ್ನಲ್ ಗೆರೆ ಮೇಲೆ ವಾಹನ ನಿಲ್ಲಿಸಿದ ಆರೋಪದಡಿ ಶ್ರೀಪತಿ ರಾವ್​ಗೆ ಪೊಲೀಸರು 100 ರೂ. ದಂಡ ವಿಧಿಸಿದ್ದರು. ಆದರೆ, ತಾನು ಸಿಗ್ನಲ್ ದಾಟಿಲ್ಲವೆಂದು ಶ್ರೀಪತಿರಾವ್ ತಕರಾರು ಎತ್ತಿದ್ದ ಹಿನ್ನೆಲೆಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಜಯನಗರ ಟ್ರಾಫಿಕ್ ಪೊಲೀಸರು ಕೇಸ್ ದಾಖಲಿಸಿದ್ದರು.

ಇದಾದ ಬಳಿಕ, ನಗರದ ಟ್ರಾಫಿಕ್ ಕೋರ್ಟ್ 200 ರೂಪಾಯಿ ದಂಡ ವಿಧಿಸಿತ್ತು. ಜೊತೆಗೆ, ದಂಡ ತಪ್ಪಿಸಿದರೆ 15 ದಿನಗಳ ಸೆರೆವಾಸದ ಆದೇಶ ಸಹ ನೀಡಿತ್ತು. ಇದನ್ನು ಪ್ರಶ್ನಿಸಿ ಶ್ರೀಪತಿ ಸೆಷನ್ಸ್​ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, CrPC ಸೆಕ್ಷನ್‌ 376ರ ಅಡಿಯಲ್ಲಿ ಸಣ್ಣ ಪ್ರಕರಣಗಳಲ್ಲಿ ಮೇಲ್ಮನವಿಗೆ ಅವಕಾಶವಿಲ್ಲ. ಹೀಗಾಗಿ, ಸೆಷನ್ಸ್ ಕೋರ್ಟ್ ಶ್ರೀಪತಿ ರಾವ್​ರ ಮೇಲ್ಮನವಿಯನ್ನ ತಿರಸ್ಕರಿಸಿತ್ತು. ಆದ್ದರಿಂದ, CrPC ಸೆಕ್ಷನ್‌ 376 ರದ್ದು ಕೋರಿ ಶ್ರೀಪತಿ ರಾವ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಕೆರೆ ಒತ್ತುವರಿ ಮಾಡಿ ಮಸೀದಿ ನಿರ್ಮಾಣ ಆರೋಪ: ಸರ್ವೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ