AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಪಿಐಎಲ್, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಭಾರತದ ಮೊದಲ ತೃತೀಯ ಲಿಂಗಿ ವೈದ್ಯರಲ್ಲೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಕೋರಿ ಪಿಐಎಲ್, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: ಆಯೇಷಾ ಬಾನು|

Updated on:Mar 24, 2022 | 4:42 PM

Share

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ(Transgender Students) ಹಾಸ್ಟೆಲ್ ಕೋರಿ ಡಾ.ತ್ರಿನೇತ್ರ ಹಲ್ದಾರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆದಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ( State Government) ಹೈಕೋರ್ಟ್(Karnataka High Court) ವಿಭಾಗೀಯ ಪೀಠ ನೋಟಿಸ್ ನೀಡಿದೆ. ಸಾಮಾನ್ಯ ಹಾಸ್ಟೆಲ್ಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಶೌಚಾಲಯ ಸೇರಿದಂತೆ ಹಲವು ಸಮಸ್ಯೆ ಎದುರಿಸುತ್ತಾರೆ. ಇದರಿಂದಾಗಿಯೇ ಉನ್ನತ ಶಿಕ್ಷಣದಿಂದ‌ ವಂಚಿತರಾಗುತ್ತಾರೆ. ಹೀಗಾಗಿ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಕ್ಕೆ ಮನವಿ ಮಾಡಲಾಗಿತ್ತು. ಸದ್ಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ(ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು)ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಭಾರತದ ಮೊದಲ ತೃತೀಯ ಲಿಂಗಿ ವೈದ್ಯರಲ್ಲೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠವು ನೋಟಿಸ್ ಜಾರಿಗೊಳಿಸಿ ಜೂನ್ 6 ರಂದು ವಿಚಾರಣೆಯನ್ನು ಮುಂದೂಡಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ (ಲೈಂಗಿಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳು) ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್‌ ಅಗತ್ಯವಿದೆ. ಸೆ.25, 2020 ರಂದು ಲೈಂಗಿಕ ಅಲ್ಪಸಂಖ್ಯಾತರ ಹಕ್ಕಿನ ರಕ್ಷಣೆ ನಿಯಮಗಳನ್ನು ಅನುಷ್ಟಾನ ಗೊಳಿಸಲಾಗಿದೆ. ತಾತ್ಕಾಲಿಕ ವಸತಿ‌, ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್, ಶೌಚಾಲಯ ಸೇರಿದಂತೆ ಸಾಂಸ್ಥಿಕ ಮೂಲಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಅಧಿಕಾರವಿದೆ. ಆದರೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್, ವಸತಿ ಸೌಲಭ್ಯ ಒದಗಿಸಲು ನಿರ್ದೇಶನ ನೀಡಬೇಕಿದೆ. ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ. ಟಾಟಾ ಸಾಮಾಜಿಕ ವಿಜ್ಞಾನ ಸಂಸ್ಥೆಯಲ್ಲೂ ಪ್ರತ್ಯೇಕ ವಸತಿ ವ್ಯವಸ್ಥೆ ಇದೆ. ಸುಪ್ರೀಂ ಕೋರ್ಟ್ ಕೂಡಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಆಯ್ಕೆಯ ಲಿಂಗದ ಆಧಾರದಲ್ಲಿ ಹಾಸ್ಟೆಲ್ ಒದಗಿಸಲು ಸೂಚಿಸಿದೆ. ಹೀಗಾಗಿ ರಾಜ್ಯದಲ್ಲೂ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ಹಾಸ್ಟೆಲ್ ಪ್ರವೇಶದ ಅರ್ಜಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶವಿರುವಂತೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸದ್ಯ ರಾಜ್ಯಸರ್ಕಾರ, ಉನ್ನತ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಈ ಸಂಬಂಧ ನೋಟಿಸ್ ಜಾರಿಗೆ ಆದೇಶಿಸಿದೆ.

ಇದನ್ನೂ ಓದಿ: ಕಿರಿಕಿರಿ ಆಗುತ್ತಿದೆ ಎಂದು ಮೋಹಿನಿಯಾಟ್ಟಂ ನೃತ್ಯ ಅರ್ಧಕ್ಕೆ ನಿಲ್ಲಿಸಿದ ನ್ಯಾಯಾಧೀಶ ಕಲಂ ಪಾಷಾ; ಅವಮಾನದಿಂದ ಕಣ್ಣೀರು ಹಾಕಿದ ಕಲಾವಿದೆ

ಗಳಿಕೆ ವಿಚಾರದಲ್ಲಿ ‘ಬಾಹುಬಲಿ 2’ ದಾಖಲೆ ಮುರಿಯಲಿದೆ ‘RRR​’? 8,000 ಥಿಯೇಟರ್​ನಲ್ಲಿ ರಾಜಮೌಳಿ ಸಿನಿಮಾ 

Published On - 4:05 pm, Thu, 24 March 22

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್