ಬೆಂಗಳೂರು: 2018ರ ಕರ್ನಾಟಕ ಬಂದ್ಗೆ ಕರೆಕೊಟ್ಟವರಿಗೆ ಇದೀಗ ಸಂಕಷ್ಟ ಎದುರಾಗಿದೆ. 2018ರ ಜ.25, ಫೆ.14 ಹಾಗೂ ಏ.12ರಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಜ್ಯ ಬಂದ್ಗೆ ಕರೆ ನೀಡಿದ್ದರು. ಬಂದ್ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಷ್ಟವುಂಟು ಮಾಡಿದವರಿಂದಲೇ ಪರಿಹಾರ ವಸೂಲಿಗೆ ಆದೇಶ ನೀಡಿದೆ.
ಸಾರ್ವಜನಿಕ ಆಸ್ತಿಪಾಸ್ತಿ ಹಾನಿಮಾಡಿದವರಿಂದಲೇ ಪರಿಹಾರ ವಸೂಲಿ ಮಾಡಲು ಹಾಗೂ ನಷ್ಟ ಅಂದಾಜಿಸಲು ನಿವೃತ್ತ ನ್ಯಾ.ಮಹಮ್ಮದ್ ಗೌಸ್ ಅವರನ್ನು ಹೈಕೋರ್ಟ್ ನೇಮಿಸಿದೆ. ಇನ್ನು ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವೇಳೆಯೂ ರಾಜ್ಯಾದ್ಯಂತ ಬಂದ್ ಮಾಡಲಾಗಿತ್ತು. 2019ರ ಸೆಪ್ಟೆಂಬರ್ 4ರಿಂದ ಸೆ.11ರವರೆಗೂ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು. ಹಾಗಾಗಿ ನಷ್ಟ ಅಂದಾಜಿಸಲು 6 ವಾರದಲ್ಲಿ ನಿವೃತ್ತ ನ್ಯಾಯಾಧೀಶರನ್ನ ನೇಮಕ ಮಾಡಿ ಮೂಲಸೌಕರ್ಯ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.