AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮುಷ್ಕರ ನಡೆಸಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಕೋರ್ಟ್

ವಿವಿಧ ಬೇಡಿಕೆ ಈಡೇರಿಸುವಂತೆ ಸಾರಿಗೆ ನೌಕರರು ಮುಷ್ಕರ ನಡೆಸಲು ಕರೆ ನೀಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಆಗಸ್ಟ 04) ಸಂಧಾನ ಸಭೆ ನಡೆಸಿದರು. ಆದರೆ, ಈ ಸಂಧಾನ ಸಭೆ ವಿಫಲವಾಗಿದೆ. ಸಾರಿಗೆ ನೌಕರರು ನಾಳೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ, ಇದೀಗ ಸಾರಿಗೆ ನೌಕರರಿಗೆ ಹೈಕೋರ್ಟ್​ ಶಾಕ್​ ನೀಡಿದೆ.

ನಾಳೆ ಮುಷ್ಕರ ನಡೆಸಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ ಕೋರ್ಟ್
ಕೆಎಸ್​ಆರ್​ಟಿಸಿ, ಹೈಕೋರ್ಟ್​
Ramesha M
| Updated By: ವಿವೇಕ ಬಿರಾದಾರ|

Updated on:Aug 04, 2025 | 3:50 PM

Share

ಬೆಂಗಳೂರು, ಆಗಸ್ಟ್​ 04: ಸಾರಿಗೆ ನೌಕರರ ಮುಷ್ಕರ (Transport Employees Strike) ಪ್ರಶ್ನಿಸಿ ಹೈಕೋರ್ಟ್​​ಗೆ (High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು. ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಹೈಕೋರ್ಟ್​ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಗೆ ಸೂಚನೆ ನೀಡಿದೆ. ಬಳಿಕ, ನ್ಯಾ.ಕೆ.ಎಸ್.ಮುದಗಲ್, ಎಂ.ಜಿ.ಎಸ್.ಕಮಲ್ ಅವರು ಇದ್ದ ವಿಭಾಗೀಯ ಪೀಠವು  ರಾಜ್ಯ ಸರ್ಕಾರ, ಸಾರಿಗೆ ನಿಗಮಗಳಿಗೆ ಹಾಗೂ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಗೂನೋಟಿಸ್ ಜಾರಿ ಮಾಡಿದೆ.

ಇಂದು ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್ ಕಲಾಪವಿರಲಿಲ್ಲ. ಹೀಗಾಗಿ, ಇಂದು (ಆ.04) ನ್ಯಾ.ಕೆ.ಎಸ್.ಮುದಗಲ್, ನ್ಯಾ.ಎಂ.ಜಿ.ಎಸ್.ಕಮಲ್ ಅವರ ಪೀಠದಲ್ಲಿ ಪಿಐಎಲ್‌ ವಿಚಾರಣೆ ನಡೆದಿತ್ತು. ನಾಳೆ (ಆ.05) ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲೇ ವಿಚಾರಣೆ ನಡೆಯಲಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು. ಈ ಸಂಬಂಧ ವಿಚಾರಣೆಯನ್ನು ಮಂಗಳವಾರಕ್ಕೆ (ಆ.05) ಮುಂದೂಡಿದೆ.

ಇದನ್ನೂ ಓದಿ: ಸಿಎಂ ಸಂಧಾನ ಸಭೆ ವಿಫಲ: ಸಾರಿಗೆ ಮುಷ್ಕರ ಫಿಕ್ಸ್, ನಾಳೆ ಸಾರಿಗೆ ಬಸ್​ಗಳು ರಸ್ತೆಗೆ ಇಳಿಯಲ್ಲ

ಇದನ್ನೂ ಓದಿ
Image
ಸಿಎಂ ಜೊತೆ ಮಾತುಕತೆ ವಿಫಲವಾದರೆ ಮಧ್ಯರಾತ್ರಿಯಿಂದಲೇ ಬಸ್​ಸೇವೆ ಬಂದ್
Image
ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು ರಸ್ತೆಗಿಳಯೋದು ಅನುಮಾನ
Image
ಆಗಸ್ಟ್​ 5 ರಂದು ಸಾರಿಗೆ ನೌಕರರು ಬಸ್ ಸಂಚಾರ​ ಬಂದ್ ಮಾಡಿ ಪ್ರತಿಭಟನೆ
Image
ಸಾರಿಗೆ ನೌಕರರ ಮುಷ್ಕರಕ್ಕೆ ಟಕ್ಕರ್ ಕೊಡಲು ಮುಂದಾದ ಸರ್ಕಾರ!

ವಾದ-ಪ್ರತಿವಾದ

ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್ ವಾದ: ಸಾರಿಗೆ ನೌಕರರ ಮುಷ್ಕರದಿಂದ ನಾಗರಿಕರಿಗೆ ಸಂಚಾರ ಸಮಸ್ಯೆ ಆಗಲಿದೆ. ಮಂಗಳವಾರ (ಆ.05) ದಿಂದ ಮುಷ್ಕರ ನಡೆಸಲು ಸಂಘಟನೆಗಳು ಮುಂದಾಗಿವೆ. ಈ ಹಿಂದೆ ಮುಷ್ಕರ ನಡೆಸಿದಾಗ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಬೇಡಿಕೆಯಿಂದ 2200 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಜುಲೈ 28, ಆಗಸ್ಟ್ 2 ರಂದು ಸಭೆ ನಡೆದು ಈಗ ಆಗಸ್ಟ್ 7ಕ್ಕೆ ಸಭೆ ನಿಗದಿಯಾಗಿದೆ. ಈ ಮಧ್ಯೆಯೇ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ಹೈಕೋರ್ಟ್: ಕೊನೆ ಗಳಿಗೆಯಲ್ಲಿ ಏಕೆ ಪಿಐಎಲ್ ಸಲ್ಲಿಸಿದ್ದೀರಾ ಎಂದು ಪ್ರಶ್ನಿಸಿತು.

ಸಾರಿಗೆ ನಿಗಮಗಳ ವಕೀಲೆ ಹೆಚ್.ಆರ್.ರೇಣುಕಾ ವಾದ: ಜುಲೈ 15ರಂದೇ ಸಾರಿಗೆ ಸಂಘಟನೆಗಳು ಮುಷ್ಕರದ ನೋಟಿಸ್ ನೀಡಿವೆ ಎಂದು ಪೀಠಕ್ಕೆ ಹೇಳಿದರು.

ಹೈಕೋರ್ಟ್ ಆದೇಶದ ಪ್ರತಿ ಇನ್ನೂ ನಮ್ಮ ಕೈಗೆ ತಲುಪಿಲ್ಲ: ಅನಂತ ಸುಬ್ಬರಾವ್​

ಹೈಕೋರ್ಟ್ ಆದೇಶದ ಪ್ರತಿ ಇನ್ನೂ ನಮ್ಮ ಕೈಗೆ ತಲುಪಿಲ್ಲ. ಆದೇಶ ಪ್ರತಿ ಕೈತಲುಪಿದ ಬಳಿಕ ಬಂದ್‌ ಬಗ್ಗೆ ನಿರ್ಧಾರ ಮಾಡುತ್ತೇವೆ. ಕೋರ್ಟ್ ಯಾವ ದೃಷ್ಟಿಯಲ್ಲಿ ಈ ರೀತಿಯಾಗಿ ಆದೇಶ ಕೊಟ್ಟಿದೆ ಗೊತ್ತಿಲ್ಲ. ಆದರೆ ಹೈಕೋರ್ಟ್‌ ಒಂದು ದಿನ ಮುಂದೂಡುವ ಆದೇಶದ ಬದಲು, ನಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರೆ ಒಳ್ಳೆಯದಿತ್ತು. ಒಂದು ದಿನ ಮುಂದೂಡಿ ಮತ್ತೊಂದು ದಿನ ಪ್ರತಿಭಟನೆ ನಡೆಸಿದರೆ. ಆದರಿಂದ ಏನು ಬದಲಾವಣೆ ಆಗುತ್ತದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Mon, 4 August 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!