AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಾದ ತೀರ್ಪು ಇಂದು (ಮಾ.22) ಪ್ರಕಟವಾಗಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು
ಹೈಕೋರ್ಟ್​
Ramesha M
| Edited By: Rakesh Nayak Manchi|

Updated on:Mar 22, 2024 | 12:12 PM

Share

ಬೆಂಗಳೂರು ಮಾರ್ಚ್​ 22: ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ (Karnataka High Court) ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: ಜಾತಿಗಣತಿ ವರದಿ ಪ್ರಶ್ನಿಸಿ ಪಿಐಎಲ್‌: ವಿಚಾರಣೆ ಮುಂದೂಡಿದ ಹೈಕೋರ್ಟ್

5, 6, 8, 9ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ. ತಡೆಯಾಜ್ಞೆಯಿಂದ ಸೋಮವಾರ ನಡೆಯುವ ಪರೀಕ್ಷೆ ಅಡಕತ್ತರಿಗೆ ಸಿಲುಕಿದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು.

ಮತ್ತೊಂದೆಡೆ ಸರ್ಕಾರದ ಈ ಮನವಿಗೆ ಖಾಸಗಿ ಶಾಲೆಗಳ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಎಕ್ಸಾಂ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್​ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:54 am, Fri, 22 March 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ