AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bitcoin ಕಿಯೋಸ್ಕ್ ಸ್ಥಾಪಿಸಿದ್ದವರಿಗೆ ರಿಲೀಫ್: ಸೈಬರ್ ಪೊಲೀಸರ FIR ರದ್ದುಪಡಿಸಿದ ಹೈಕೋರ್ಟ್

Bitcoin: ಬಿಟ್ ​ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರಿಗೆ ಹೈಕೋರ್ಟ್​ ರಿಲೀಫ್ ಕೊಟ್ಟಿದೆ. ಕಿಯೋಸ್ಕ್ ಸ್ಥಾಪಿಸಿದ್ದವರ ವಿರುದ್ಧ ಸೈಬರ್ ಪೊಲೀಸರು ದಾಖಲಿಸಿದ್ದ FIRನ ಹೈಕೋರ್ಟ್ ರದ್ದುಪಡಿಸಿದೆ.

Bitcoin ಕಿಯೋಸ್ಕ್ ಸ್ಥಾಪಿಸಿದ್ದವರಿಗೆ ರಿಲೀಫ್: ಸೈಬರ್ ಪೊಲೀಸರ FIR ರದ್ದುಪಡಿಸಿದ ಹೈಕೋರ್ಟ್
ಸೈಬರ್ ಪೊಲೀಸರ FIR ರದ್ದುಪಡಿಸಿದ ಹೈಕೋರ್ಟ್
Follow us
KUSHAL V
|

Updated on:Feb 18, 2021 | 8:55 PM

ಬೆಂಗಳೂರು: ಬಿಟ್ ​ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರಿಗೆ ಹೈಕೋರ್ಟ್​ ರಿಲೀಫ್ ಕೊಟ್ಟಿದೆ. ಕಿಯೋಸ್ಕ್ ಸ್ಥಾಪಿಸಿದ್ದವರ ವಿರುದ್ಧ ಸೈಬರ್ ಪೊಲೀಸರು ದಾಖಲಿಸಿದ್ದ FIRನ ಹೈಕೋರ್ಟ್ ರದ್ದುಪಡಿಸಿದೆ. ಈ ಮೂಲಕ, ಬಿ.ವಿ.ಹರೀಶ್ ಹಾಗೂ ಸಾತ್ವಿಕ್ ವಿಶ್ವನಾಥ್ ಎಂಬುವವರ ಮೇಲಿನ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ.

ಅಂದ ಹಾಗೆ, ಈ ಹಿಂದೆ, ಬಿಟ್ ಕಾಯಿನ್ ವ್ಯವಹಾರವನ್ನು RBI ನಿರ್ಬಂಧಿಸಿತ್ತು. ಹಾಗಾಗಿ, ಬಿಟ್ ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರ ಮೇಲೆ ಸೈಬರ್ ಪೊಲೀಸರು ಮೊಕದ್ದಮೆ ದಾಖಲಿಸಿದ್ದರು. ಈ ನಡುವೆ, ಸುಪ್ರೀಂಕೋರ್ಟ್ ಬಿಟ್ ಕಾಯಿನ್ ಮೇಲಿನ ನಿರ್ಬಂಧ ರದ್ದುಪಡಿಸಿತ್ತು.

ಹೀಗಾಗಿ, ತಮ್ಮ ವಿರುದ್ಧ ದಾಖಲಿಸಲಾಗಿದ್ದ FIR ರದ್ದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿದಾರರ ಪರ ವಕೀಲ ಸಿರಿಲ್ ಪಯಾಸ್ ತಮ್ಮ ವಾದ ಮಂಡಿಸಿದ್ದರು. ಇದೀಗ, FIR ರದ್ದುಪಡಿಸಿ ನ್ಯಾ.ಹೆಚ್.ಪಿ.ಸಂದೇಶ್ ಆದೇಶ ನೀಡಿದ್ದಾರೆ.

ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತಶ್ರೀಗೆ ಸಂಕಷ್ಟ ಗುರುಗುಂಡ ಬ್ರಹ್ಮೇಶ್ವರ ಮಠದ ನಂಜಾವಧೂತಶ್ರೀಗೆ ಸಂಕಷ್ಟ ಎದುರಾಗಿದೆ. ಮಠದ ಆಸ್ತಿ ಅಕ್ರಮ ವರ್ಗಾವಣೆ ಆರೋಪದಡಿ ನಂಜಾವಧೂತ ಸ್ವಾಮೀಜಿ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್​ ನಿರಾಕರಿಸಿದೆ. ನಂಜಾವಧೂತ ಶ್ರೀಗಳ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ವಿಲ್ ರದ್ದುಪಡಿಸಿದ ಕೋರ್ಟ್ ಆದೇಶ ಮುಚ್ಚಿಟ್ಟು ತನ್ನ ಹೆಸರಿಗೆ ಮಠದ ಖಾತಾ ಮಾಡಿಸಿಕೊಂಡಿದ್ದ ಆರೋಪ ಶ್ರೀಗಳ ವಿರುದ್ಧವಿತ್ತು. ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಜಮೀನು ಕುರಿತು ಕೃಷ್ಣಪ್ಪ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಈ ನಡುವೆ, ಪ್ರಕರಣ ರದ್ದು ಕೋರಿ ನಂಜಾವಧೂತಶ್ರೀ ಅರ್ಜಿ ಸಲ್ಲಿಸಿದ್ರು. ಇದೀಗ ನಂಜಾವಧೂತಶ್ರೀಗಳ ಅರ್ಜಿ ವಜಾಗೊಳಿಸಿ ನ್ಯಾ. ಹೆಚ್.ಪಿ.ಸಂದೇಶ್ ಆದೇಶ ನೀಡಿದ್ದಾರೆ. ಜೊತೆಗೆ, ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪಾಥರಾಜ್ ವಿರುದ್ಧದ ಪ್ರಕರಣ ಸಹ ರದ್ದುಪಡಿಸಲಾಗಿದೆ.

ಇತ್ತ, ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮೂಲಸೌಕರ್ಯ ವಿಚಾರವಾಗಿ ಕಾಮಗಾರಿ ನಡೆದಿರುವ ಶಾಲೆಗಳ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. 573 ಹೊಸ ತರಗತಿಗಳು ನಿರ್ಮಿಸುತ್ತಿರುವುದಾಗಿ ಸರ್ಕಾರ ಹೇಳಿಕೆ ಕೊಟ್ಟಿದೆ.

ಇದನ್ನೂ ಓದಿ: Hubballi bit coin trade | ಛೋಟಾ ಮುಂಬಯಿ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಅನಾಹುತಕಾರಿ ಬಿಟ್ ಕಾಯಿನ್ ದಂದೆ! ಏನಿದರ ವೃತ್ತಾಂತ?

Published On - 6:31 pm, Thu, 18 February 21

ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು
ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್​ಗಳು