ಅರಣ್ಯ ಭೂಮಿ ವಿವಾದ ಇತ್ಯರ್ಥಪಡಿಸಿದ ಹೈಕೋರ್ಟ್: ಸಿನಿಮಾ ಶುರುವಾಗುತ್ತೆಂದ ರಮೇಶ್ ಕುಮಾರ್
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಮುಖ ತೀರ್ಪು ನೀಡಿದೆ. ಸರ್ವೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆ ಹಿನ್ನೆಲೆ ಜಮೀನಿನ ಸರ್ವೆ ಈಗಾಗಲೇ ಪೂರ್ಣಗೊಂಡಿರುವ ಹಿನ್ನೆಲೆ ವಕೀಲ ಶಿವಾರೆಡ್ಡಿ ಅರ್ಜಿ ಇತ್ಯರ್ಥ ಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು, ಮಾರ್ಚ್ 05: ಮಾಜಿ ಸ್ಪೀಕರ್ ರಮೇಶ್ ಕುಮಾರ್ರಿಂದ (Ramesh Kumar) ಅರಣ್ಯ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಶಿವಾರೆಡ್ಡಿ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥ ಪಡಿಸಿದೆ. ಈಗಾಗಲೇ ಸರ್ವೆ ವರದಿ ಸಲ್ಲಿಕೆಯಾಗಿರುವ ಹಿನ್ನೆಲೆ ರಿಟ್ ಅರ್ಜಿರನ್ನು ವಜಾ ಮಾಡಲಾಗಿದೆ. ವರದಿ ಪ್ರಶ್ನಿಸಲು ರಮೇಶ್ ಕುಮಾರ್ರಿಗೆ ಹೈಕೋರ್ಟ್ ಅವಕಾಶ ನೀಡಿದೆ.
ಸರ್ವೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರಣ್ಯ ಸಂರಕ್ಷಣಾಧಿಕಾರಿಗೆ ಈಗಾಗಲೇ ಜಂಟಿ ಸರ್ವೆ ವರದಿ ಸಲ್ಲಿಕೆಯಾಗಿದೆ. ಕಾನೂನಿನಂತೆ ಅರಣ್ಯ ಸಂರಕ್ಷಣಾಧಿಕಾರಿ ಸೆ.64ರಡಿ ಕ್ರಮ ಕೈಗೊಳ್ಳಬೇಕಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸದಾಶಿವರೆಡ್ಡಿ ವಾದ ಮಂಡಿಸಿದ್ದಾರೆ. ಅರ್ಜಿದಾರರ ರಿಟ್ ಊರ್ಜಿತವಲ್ಲವೆಂದು ರಮೇಶ್ ಕುಮಾರ್ ಪರ ವಕೀಲರ ವಾದ ಮಂಡಿಸಿದ್ದಾರೆ.
ಸೋಮವಾರದಿಂದ ಸಿನಿಮಾ ಶುರುವಾಗುತ್ತೆ ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಇನ್ನು ಈ ವಿಚಾರವಾಗಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ್ ಕುಮಾರ್, ಇಷ್ಟು ದಿವಸ ಬಂದಿದ್ದು ರೀಲ್ ಹಾಗೂ ಟ್ರಯಲ್ ಅಷ್ಟೇ. ಸೋಮವಾರದಿಂದ ಸಿನಿಮಾ ಶುರುವಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದ್ದಾರೆ.
ಇದನ್ನೂ ಓದಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ
ಚೌಡೇಶ್ವರಮ್ಮ ಪಾದದ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ತಪ್ಪು ಮಾಡಿಲ್ಲ. ಒಂದೇ ಒಂದು ಗುಂಟೆ ಜಾಗ ಬೇಡ. ಸ್ವಾಮಿದು ಜಮೀನು, ತೋಟ ಹೋಗುತ್ತೆಂದು ಹೇಳ್ತಿದ್ದಾರೆ. ಎರಡು ಮೂರು ತಿಂಗಳಿಂದ ಹೇಳುತ್ತಿದ್ದಾರೆ, ಏನೂ ಹೋಗಲ್ಲ. ಇದನ್ನು 2002ರಲ್ಲೇ ನಾನೇ ಸರ್ಕಾರಕ್ಕೆ ಬರೆದುಕೊಟ್ಟಿದ್ದೇನೆ. ಆದರೆ ಇದೆಲ್ಲವನ್ನು ಮುಚ್ಚಿಟ್ಟಿದ್ದಾರೆ, ಈ ಬಗ್ಗೆ ನಾನು ಇದುವರೆಗೂ ಉತ್ತರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಂತಿಮ ಹಂತ ತಲುಪಿದ ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ: ಭೂಮಿ ಉಳಿಯುತ್ತಾ, ಉರುಳುತ್ತಾ?
4 ಸರ್ವೆ ಆಗಿದೆ, ಎಲ್ಲದರಲ್ಲೂ ನಿರ್ದೋಷಿ ಅಂತ ಬಂದಿದೆ. ಎಲ್ಲದರಲ್ಲೂ ರಮೇಶ್ ಕುಮಾರ್ ನಿರ್ದೋಷಿ ಅಂತ ಇದೆ. ನಾನು ಸರ್ಕಾರಿ ಭೂಮಿ, ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ಅರ್ಜಿದಾರರಿಗೆ ಆ ದೇವರು ಒಳ್ಳೇದು ಮಾಡಲಿ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.